ಗದಗ | ಗ್ಯಾರಂಟಿ ಸೌಲಭ್ಯ ಒದಗಿಸುವಲ್ಲಿ ಜಿಲ್ಲೆಯ ಸಾಧನೆ ಪ್ರಶಂಸನೀಯ: ಎಸ್‌ ಆರ್‌ ಪಾಟೀಲ

Date:

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಡವರ ಕಲ್ಯಾಣಕ್ಕಾಗಿ ಜಾರಿಗೊಳಿಸಿದ ಪಂಚಗ್ಯಾರಂಟಿ ಯೋಜನೆಗಳನ್ನು ಉತ್ತಮವಾಗಿ ಗದಗ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿದೆ. ಈ ಸಾಧನೆಗೆ ಗದಗ ಜಿಲ್ಲೆ ಪ್ರಶಂಸನೀಯ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್ ಆರ್ ಪಾಟೀಲ ಅವರು ಹೇಳಿದರು.

ಗದಗ ಪಟ್ಟಣದ ಉಪವಿಭಾಗಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾದಿಕಾರದ ಕಚೇರಿಯಲ್ಲಿ ಜರುಗಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಂಚಗ್ಯಾರಂಟಿ ಅನುಷ್ಠಾನದಲ್ಲಿ ಗದಗ ಜಿಲ್ಲೆ ರಾಜ್ಯದಲ್ಲಿಯೇ ಉತ್ತಮ ಸಾಧನೆ ಮಾಡಿದೆ. ಅರ್ಹರಿಗೆ ಸರ್ಕಾರದ ಸೌಲಭ್ಯ ಒದಗಿಸುವಲ್ಲಿ ಜಿಲ್ಲೆಯು ಮುಂಚೂಣಿಯಲ್ಲಿದೆ. ಅದಕ್ಕಾಗಿ ಸಮಿತಿಯ ಜಿಲ್ಲಾ ಹಾಗೂ ತಾಲೂಕಾ ಅಧ್ಯಕ್ಷರು, ಸದಸ್ಯರುಗಳಿಗೆ ಅಭಿನಂದನೆಗಳು. ಅದೇ ತರಹ ಇಲಾಖಾಧಿಕಾರಿಗಳ ಕಾರ್ಯ ವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

“ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮೀ ಹಾಗೂ ಶಕ್ತಿ ಯೋಜನೆಗಳು ಆರ್ಥಿಕ ಸಬಲತೆಯೊಂದಿಗೆ ಸ್ತ್ರೀ ಸ್ವಾತಂತ್ರ್ಯ ನೀಡಿದೆ. ಮಹಿಳೆ ಸ್ವತಂತ್ರವಾಗಿ ಕುಟುಂಬ ನಿರ್ವಹಣೆ ಮಾಡುವ ಮೂಲಕ ಕುಟುಂಬವನ್ನು ಆರ್ಥಿಕವಾಗಿ ಪ್ರಬಲವಾಗಿಸಲು ಪಂಚ ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿವೆ. ಅವುಗಳನ್ನು ಇನ್ನಷ್ಟು ಅರ್ಹರಿಗೆ ತಲುಪಿಸುವಲ್ಲಿ ಅಧಿಕಾರಿ ವರ್ಗ ಶ್ರಮಿಸಬೇಕು” ಎಂದು ನಿರ್ದೇಶನ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ ಬಿ ಅಸೂಟಿ ಮಾತನಾಡಿ, “ಯುವನಿಧಿ ಫಲಾನುಭವಿಗಳು ಉದ್ಯೋಗ ಮೇಳಕ್ಕೆ ಆಗಮಿಸುವ ಮೂಲಕ ಉದ್ಯೋಗ ಪಡೆಯಲು ಮುಂದಾಗಬೇಕು. ಈ ನಿಟ್ಟಿನಲ್ಲಿ ಉದ್ಯೋಗಾಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕೆಂದು ಸೂಚಿಸಿದರು. ಅನ್ನಭಾಗ್ಯ ಯೋಜನೆಯಡಿ ವಿತರಿಸಲಾಗುವ ಅಕ್ಕಿಯು ಅಕ್ರಮ ಕಾಳ ಸಂತೆಯಲ್ಲಿ ಸಾಗಾಟ ಮಾಡುವುದನ್ನು ಅಧಿಕಾರಿ ವರ್ಗ ಸಂಪೂರ್ಣ ಹತೋಟೆಗೆ ತರಬೇಕು. ಆ ಮೂಲಕ ಅನ್ನಭಾಗ್ಯದ ಫಲಾನುಭವಿಗಳಿಗೆ ಯೋಜನೆ ತಲುಪುವ ಮೂಲಕ ಹಸಿವು ಮುಕ್ತ ಕರ್ನಾಟಕ ಸಾಕಾರವಾಗಲು ಶ್ರಮಿಸಬೇಕು” ಎಂದರು.

ಪ್ರಾಧಿಕಾರದ ತಾಲೂಕಾಧ್ಯಕ್ಷ ಅಶೋಕ ಮಂದಾಲಿ ಮಾತನಾಡಿ, “ಪಂಚ ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ಸದ್ಭಳಕೆ ಮಾಡಿಕೊಳ್ಳುವ ಮೂಲಕ ಫಲಾನುಭವಿಗಳು ತಮ್ಮದೇ ರೀತಿಯ ಆರ್ಥಿಕ ಸಂಪನ್ಮೂಲ ಕಂಡುಕೊಂಡಿದ್ದಾರೆ. ಹಲವಾರು ಮಹಿಳೆಯರು ಸ್ವ ಉದ್ಯೋಗ ಕೈಗೊಂಡ ಸಾಕಷ್ಟು ಉದಾಹರಣೆಗಳು ಜಿಲ್ಲೆಯಲ್ಲಿವೆ” ಎಂದರು.

ಸಮಿತಿ ಸದಸ್ಯ ಕೃಷ್ಣಗೌಡ ಎಚ್ ಪಾಟೀಲ ಮಾತನಾಡಿ, “ಕೆಲವು ಫಲಾನುಭವಿಗಳ ಗೃಹಲಕ್ಷ್ಮೀ ಯೋಜನೆಯಿಂದ ಬಂದ ಮೊತ್ತವು ಬ್ಯಾಂಕ್ ಖಾತೆಗೆ ಜಮೆಯಾಗದೇ ಇರುವ ಪ್ರಕರಣಗಳು ಕಂಡುಬಂದಿವೆ. ಅಧಿಕಾರಿ ವರ್ಗ ಅವುಗಳನ್ನು ಪರಿಶೀಲಿಸಿ ಅರ್ಹರಿಗೆ ಯೋಜನೆಯ ಹಣ ಜಮೆ ಮಾಡಿಸುವಲ್ಲಿ ಗಮನ ಹರಿಸುವಂತೆ” ತಿಳಿಸಿದರು.

ಇದನ್ನೂ ಓದಿ: ಗದಗ | ಬೀದಿ ನಾಯಿಗಳ ದಾಳಿಗೆ ಮಹಿಳೆ ಬಲಿ

ಗೃಹಲಕ್ಷ್ಮೀ ಯೋಜನೆಯಡಿ ಶೇ 92.02, ಅನ್ನಭಾಗ್ಯ ಯೋಜನೆಯಡಿ ಶೇ 97.96, ಗೃಹ ಜ್ಯೋತಿ ಯೋಜನೆಯಡಿ ಶೇ 95.51, ಯುವನಿಧಿ ಯೋಜನೆಯಡಿ ಶೇ 98 ಹಾಗೂ ಶಕ್ತಿ ಯೋಜನೆಯಡಿ ಶೇ 100 ರಷ್ಟು ಪ್ರಗತಿ ಸಾಧನೆಯಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ಒದಗಿಸಿದರು.

ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ನೀಲವ್ವ ಬೋಳನವರ್, ಸದಸ್ಯರುಗಳಾದ ಈಶಣ್ಣ ಹುಣಸೀಕಟ್ಟಿ, ಸಂಗಮೇಶ ಹಾದಿಮನಿ, ರಮೇಶ ಹೊನ್ನಿನಾಯ್ಕರ, ದೇಸಾಯಿ, ಸಾವಿತ್ರ‍್ರಿ ಹೂಗಾರ ಸೇರಿದಂತೆ ಇತರೆ ಸದಸ್ಯರು, ಅಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...