ಗದಗ | ತ್ಯಾಗ ಬಲಿದಾನದ ಪ್ರತೀಕವನ್ನು ಸಾರುವ ಹಬ್ಬವಾಗಿದೆ: ಹಸನಸಾಬ ತಟಗಾರ

Date:

“ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುವುದು, ಸೋದರತ್ವ ಬೆಳೆಸಿಕೊಳ್ಳಬೇಕು. ತ್ಯಾಗ ಬಲಿದಾನದ ಪ್ರತೀಕವನ್ನು ಸಾರುವ ಹಬ್ಬವಾಗಿದೆ” ಎಂದು ಅಂಜುಮನ್ ಇಸ್ಲಾಂ ಕಮೀಟಿ ಚೇರಮನ್ನ ಹಸನಸಾಬ ತಟಗಾರ ಹೇಳಿದರು.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಈದ್ಗಾ ಮೈದಾನದಲ್ಲಿ ಬಕ್ರೀದ ಹಬ್ಬದ ನಮಾಜ್ ಬಳಿಕ ಮಾತನಾಡಿದರು.

“ಹಜರತ್ ಇಬ್ರಾಹಿಂ ಅವರ ಅಲ್ಲಾನ ಮೇಲಿನ ದೈವಭಕ್ತಿ,   ತ್ಯಾಗವನ್ನು ನೆನಪಿಸಲು ಹಬ್ಬದ ದಿನ ಕುರ್ಬಾನಿ  ಅರ್ಪಿಸಲಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆರ್ಥಿಕವಾಗಿ ಸಬಲರಾಗಿರುವ ಎಲ್ಲರೂ ಕುರ್ಬಾನಿ ನೀಡಬೇಕು. ಇದನ್ನು ಸಮನಾಗಿ ಮೂರು ಪಾಲು ಮಾಡಬೇಕು. ಅದರಲ್ಲಿ ಒಂದು ಭಾಗವನ್ನು ಸ್ವತಃ ಬಳಸಿಕೊಳ್ಳಬಹುದು. ಇನ್ನೆರಡು ಪಾಲುಗಳನ್ನು ಸಂಬಂಧಿಕರು ಹಾಗೂ ಬಡವರಿಗೆ ಹಂಚುವ ಮೂಲಕ ಈದ್ ನಲ್ಲಿ ಪಾಲ್ಗೊಳ್ಳುತ್ತಾರೆ” ಎಂದರು.

ಅಂಜುಮನ್ ಇಸ್ಲಾಂ ಕಮೀಟಿ ಮಾಜಿ ಕಾರ್ಯದರ್ಶಿ ದಾವಲಸಾಬ ತಾಳಿಕೋಟಿ ಮಾತನಾಡಿ, “ಸೌಹಾರ್ದತೆ ಮತ್ತು ವಿಶ್ವ ಬಾಂಧವ್ಯವನ್ನು ಸೂಚಿಸುತ್ತದೆ. ತ್ಯಾಗ, ಸಹನೆ ಮತ್ತು ಪರಿಶ್ರಮವೆಂಬ ಮೂರು ಉನ್ನತ ತತ್ತಾದರ್ಶಗಳನ್ನು ಬಕ್ರೀದಿನ ಇತಿಹಾಸ, ವಿಶ್ವದ ಜನತೆಗೆ ಸಾರುತ್ತದೆ. ಪರರ ಒಳಿತಿಗಾಗಿ ತ್ಯಾಗ, ಕಷ್ಟಗಳ ಮುಂದೆ ಸಹನೆ ಮತ್ತು ಸಾಮಾಜಿಕ ಹಿತಾಸಕ್ತಿಗಾಗಿ ಪರಿಶ್ರಮ ಎಂಬ ಉದಾತ್ತ ಆದರ್ಶಗಳೊಂದಿಗೆ ಬಕ್ರೀದನ್ನು ಮುಸ್ಲಿಮರು ವಿಶ್ವದಾದ್ಯಂತ ಆಚರಿಸುತ್ತಾರೆ” ಎಂದರು.

ಮಾಜಿ ಚೇರ್ಮನ್ ಎ.ಡಿ.ಕೋಲಕಾರ, ಪುರಸಭೆ ಸದಸ್ಯ ರಾಜು ಸಾಂಗ್ಲೀಕಾರ, ಫಯಾಜ್ ತೋಟದ ಮಾತನಾಡಿದರು. ಬಳಿಕ ಜಾಮೀಯಾ ಮಸೀದಿಯ ಮೌಲಾನರಾದ ಈ ವೇಳೆ ಆಲಂ ನಹಿಂ ಈದ್ ನಮಾಜ್ ಓದಿಸಿದರು. 

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ತಲೆಯ ಮೇಲೆ ಕಲ್ಲು ಹಾಕಿ ವ್ಯಕ್ತಿಯ ಕೊಲೆ

ಈ ವೇಳೆ ಖಲೀಲ ಅಹ್ಮದ ಖಾಜಿ ಮೌಲಾನ, ರಫೀಕ ಹಾಳಗಿ, ಯಾಸೀನ ಮೌಲಾನ, ನಿರ್ದೇಶಕರಾದ ನಾಸೀರ ಸುರಪೂರ, ಭಾಷಾ ಮುದಗಲ್ಲ, ಶೌಕತ್ ಅರಳಿಕಟ್ಟಿ, ಎಂ ಎಚ್ ಕೋಲಕಾರ, ಸುಭಾನಸಾಬ ಆರಗಿದ್ದಿ, ಮಾಸುಮಲಿ ಮದಗಾರ, ದಾದು ಹಣಗಿ ಸೇರಿದಂತೆ ಸಮಾಜ ಭಾಂದವರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...