ಗದಗ | ನಮ್ಮ ದೇಶದ ಭವಿಷ್ಯ ಅಕ್ಕ ತಂಗಿಯರ ಕೈಯಲ್ಲಿದೆ: ಸಚಿವ ಡಾ. ಎಚ್. ಕೆ. ಪಾಟೀಲ

Date:

“ನಮ್ಮ ದೇಶದ ಭವಿಷ್ಯ ಅಕ್ಕ ತಂಗಿಯರ ಕೈಯಲ್ಲಿದೆ ಎಂಬ ಮಾತು ಹೇಳಲು ಅತಿಶಯೋಕ್ತಿ ಅಂದರು ಪರವಾಗಿಲ್ಲ” ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್. ಕೆ. ಪಾಟೀಲ್ ಹೇಳಿದರು.

ಗದಗ ಪಟ್ಟಣದ ತೊಂಟದ ಸಿದ್ದಲಿಂಗೇಶ್ವರ ಕಲ್ಯಾಣ ಮಂಟಪದ ಶಿವಶರಣೆ ಮುಕ್ತಾಯಕ್ಕ ವೇದಿಕೆಯಲ್ಲಿ ಜಿಲ್ಲಾ ಕದಳಿ ಮಹಿಳಾ ಸಮ್ಮೇಳನದ ಉದ್ಘಾಟಿಸಿ ಅವರು ಮಾತನಾಡಿದರು.

“ಇತಿಹಾಸದ ಮನುಕುಲದಲ್ಲಿ ಮಹಿಳೆಗೆ ಸ್ವತಂತ್ರ ಆಗಬೇಕು, ಸಮಾನತೆ ಆಗಬೇಕು ಎಂದು ಹೇಳುತ್ತಲೇ ಬಂದಿದ್ದಾರೆ. 12ನೇ ಶತಮಾನದ ಅನುಭವ ಮಂಟಪದಲ್ಲಿ ಮಾತ್ರ ಮಹಿಳೆಗೆ ಸಮಾನತೆ ಸಾಧ್ಯವಾಗಿದೆ. ನಂತರದಲ್ಲಿ ಸಮಾಜದಲ್ಲಿ ಸಮಾನತೆ ಇತ್ತೀಚೆಗೆ ಬರುತ್ತಿತೆ. ಇಸ್ಲಾಂ ಧರ್ಮದಲ್ಲಿ ಸ್ವಾತಂತ್ರದ ಕೂಗನ್ನು ಮಹಿಳೆಯರು ಜೋರು ಮಾಡುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭಾರತೀಯ ಪರಂಪರೆಯಲ್ಲಿ 12ನೇ ಶತಮಾನದಲ್ಲಿಯೇ ಮಹಿಳೆಯರು ಸ್ವವಲಂಬಿಯಾಗಬೇಕು ಎಂಬ ಮಾತುಗಳು ಕೇಳಿ ಬರುತ್ತವೆ. ಬಸಣ್ಣನಿಂದ ಇಲ್ಲಿಯವರೆಗೂ ಎಂಟು ನೂರು ವರ್ಷಗಳು ಕಳೆದರೂ ಮಹಿಳೆಗೆ ಸ್ವತಂತ್ರ ಕೊಟ್ಟಿಲ್ಲ. ದೊಡ್ಡ ದೊಡ್ಡ ಭಾಷಣಗಲ್ಲಿ ಮಹಿಳೆಯರಿಗೆ ಸ್ವತಂತ್ರ ಅಷ್ಟೇ ಇದೆ. ನಿಜವಾಗಿಯೂ ಮಹಿಳೆಗೆ ಸ್ವತಂತ್ರ ಸಿಕ್ಕಿಲ್ಲ” ಎಂದರು.

“ಇವತ್ತಿಗೂ ಶ್ರೇಣಿಕೃತ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಸಮಾನತೆಯಿಲ್ಲ. ಮೂವತ್ತು ನಲವತ್ತೂ ವರ್ಷದ ಹಿಂದೆ ರಾಜಕೀಯ ಪ್ರವೇಶ ಮಾಡುವುದಕ್ಕೆ, ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಮಹಿಳೆಗೆ ಅವಕಾಶವಿರಲಿಲ್ಲ. ರಾಜೀವ್ ಗಾಂಧಿ ನಂತರದಲ್ಲಿ ಮಹಿಳೆಯರಿಗೆ ರಾಜಕೀಯದಲ್ಲಿ ಅವಕಾಶ ಸಿಕ್ಕಿತು” ಎಂದು ಹೇಳಿದರು.

“ಬಡತನದ ಅಡಚಣೆಯನ್ನು ಮೊದಲು ಮನೆಯ ಮಹಿಳೆ ಮೇಲೆ ಪರಿಣಾಮ ಬಿರುತ್ತದೆ. ಮಹಿಳೆಯನ್ನು ಸ್ವವಲಂಬಿಯಾಗಿ ಬದುಕಲು ನಮ್ಮ ಗೃಹಲಕ್ಷ್ಮೀ ಯೋಜನೆಯ ಎರಡು ಸಾವಿರ ರೂ ಸಹಾಯವಾಗಿದೆ” ಎಂದರು.

“ನಮ್ಮ ಸಮಾಜದಲ್ಲಿ ಶಾಂತಿಯನ್ನು ಕಳೆದುಕೊಂಡಿದ್ದೇವೆ. ಹಿಂದೆ ಬಡತನ ಜೊತೆಗೆ ಎಲ್ಲವು ಕೊರತೆ ಇತ್ತು. ಆದರೆ ಶಾಂತಿ ನೆಲೆಸಿತ್ತು. ಇದಕ್ಕೆ ಪರಿಹಾರವಾಗಿ ಮಹಿಳೆಯರು ಆಧ್ಯಾತ್ಮಿಕ ಕಡೆಗೆ ಸಾಗಬೇಕು. ಆಧ್ಯಾತ್ಮಿಕತೆ ಪುರುಷರಲ್ಲಿ ಇಲ್ಲ, ಮಹಿಳೆಯರಲ್ಲಿ ಆದ್ಯಾತ್ಮಿಕತೆ ಇದೆ. ಇದು ಪುರುಷರ ಮೇಲೆ ಪ್ರಭಾವಿಸಬೇಕು” ಎಂದರು.

“ಬಸವಣ್ಣವರ ವಚನಗಳನ್ನು ಭಾಷಣಕ್ಕೆ ಮಾತ್ರ ಬಳಸಿಕೊಂಡಿದ್ದೇವೆ. ಆತ್ಮವಲೋಕನ ಮಾಡಿಕೊಳ್ಳಬೇಕು. ಇವ ನಮ್ಮ, ಇವ ನಮ್ಮ” ಎನ್ನುವ ಮಾತು ನಮ್ಮ ನಮ್ಮವರನ್ನೇ ಎನ್ನುವದಿಲ್ಲ. ಹಾಗಾಗಿ ಸಮಾಜದಲ್ಲಿ ಕ್ರಾಂತಿಕಾರಿಕ ಬದಲಾವಣೆ ಅವಶ್ಯಕತೆ ಇದೆ” ಎಂದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ನಿರಂತರ ಮಳೆಯಿಂದ ಬೆಳ್ಳುಳ್ಳಿ ಬೆಳೆ ಹಾನಿ: ಸರ್ಕಾರದ ನೆರವಿನ ನಿರೀಕ್ಷೆಯಲ್ಲಿ‌ ಸಂತ್ರಸ್ತ ರೈತರು

ಈ ಸಮ್ಮೇಳನದಲ್ಲಿ ದಿವ್ಯ ಸಾನಿಧ್ಯ ಜಗದ್ಗುರು ಡಾ. ತೋಂಟದ ಸಿದ್ದರಾಮ ಮಹಾಸ್ವಾಮಿಗಳು, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರು ಡಾ. ಸಿ. ಸೋಮಶೇಖರ, ಸಮ್ಮೇಳನದ ಸರ್ವಾಧ್ಯಕ್ಷರು ಶರಣೆ ಗಿರಿಜಕ್ಕ ಧರ್ಮರೆಡ್ಡಿ, ನಿಕಟಪೂರ್ವ ಸಮ್ಮೇಳನದ ಸರ್ವಾಧ್ಯಕ್ಷರು ಶಿವಶರಣೆ ಡಾ. ನಿಲ್ಲಮ್ಮತಾಯಿ ಅಸುಂಡಿ, ಕೆ. ಎ. ಬಳಿಗಾರ, ಸುಧಾ ಎಸ್. ಹುಚ್ಚಣ್ಣವರ, ಸುಶೀಲಾ ಸೋಮಶೇಖರನ್ನೂ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...