ಗದಗ | ಬೇಸಿಗೆ ಮುಗಿದರೂ ಇಳಿಯದ ಬಿಸಿಲು; ಹೈರಾಣಾಗುತ್ತಿರುವ ಜನ

Date:

ಬೇಸಿಗೆ ಮುಗಿದು ಮಳೆಗಾಲ ಆರಂಭವಾಗುತ್ತಿದ್ದರೂ ಗದಗ ಜಿಲ್ಲೆಯಲ್ಲಿ ಬಿಸಿಲಿನ ಪ್ರಖರತೆ ಕಡಿಮೆಯಾಗುತ್ತಿಲ್ಲ. ಇಲ್ಲಿಯ ಜನರು ನೆತ್ತಿ ಸುಡುವ ಬಿಸಿಲಿನ ತಾಪದಿಂದ ತಪ್ಪಿಸಿಕೊಳ್ಳಲು ನೆರಳು ಹಾಗೂ ತಂಪು ಪಾನಿಯಗಳ ಮೊರೆ ಹೋಗುತ್ತಿದ್ದಾರೆ.

ಪಟ್ಟಣಕ್ಕೆ ನಿತ್ಯ ಒಂದಿಲ್ಲೊಂದು ಕೆಲಸದ ನಿಮಿತ್ತ ಸುತ್ತಲಿನ ಗ್ರಾಮಗಳಿಂದ ಬರುವ ಜನರು ಬಿಸಿಲಿನ ತಾಪಕ್ಕೆ ಬಸವಳಿಯುತ್ತಿದ್ದಾರೆ. ಪಟ್ಟಣದ ಹೃದಯ ಭಾಗದಂತಿರುವ ಕಾಲಕಾಲೇಶ್ವರ ವೃತ್ತದಲ್ಲಿ ನೆರಳಿಲ್ಲದ ಕಾರಣ ಬೈಕ್ ಸವಾರರು ವಾಹನಗಳನ್ನು ಬಿಸಿಲಿನಲ್ಲಿಯೇ ನಿಲ್ಲಿಸುವುದರಿಂದ ಬೈಕ್‌ನಲ್ಲಿನ ಪೆಟ್ರೋಲ್ ಬಿಸಿಲಿಗೆ ಆವಿಯಾಗುತ್ತಿದೆ. ಇದರಿಂದಾಗಿ ಜೇಬಿಗೂ ಕತ್ತರಿ ಬೀಳುತ್ತಿದೆ ಎಂದು ಸವಾರರು ಹೇಳುತ್ತಿದ್ದಾರೆ.

ಗಜೇಂದ್ರಗಡದಿಂದ ಕುಷ್ಟಗಿಗೆ ಸಂಪರ್ಕ ಕಲ್ಪಿಸುವ ರಸ್ತೆಯಿಂದ ರೋಣ ರಸ್ತೆಯಲ್ಲಿ ಯಾವುದೇ ಮರಗಳಿಲ್ಲ. ದುರ್ಗಾ ವೃತ್ತದಿಂದ ಬಸ್ ನಿಲ್ದಾಣದ ವರೆಗಿನ ಜೋಡಿ ರಸ್ತೆ ಮಧ್ಯದಲ್ಲಿ ಕೆಲ ವರ್ಷಗಳ ಹಿಂದೆ ನೆಟ್ಟಿರುವ ಗಿಡಗಳಲ್ಲಿ ಕೆಲವು ಸಮೃದ್ದವಾಗಿ ಬೆಳೆದಿದ್ದು, ವ್ಯಾಪಾರಿಗಳು, ಬೈಕ್ ಸವಾರರಿಗೆ ನೆರಳು ನೀಡುತ್ತಿವೆ. ಕೆಲವು ಬೈಕ್ ಸವಾರರು ತಹಶೀಲ್ದಾರ್ ಕಚೇರಿ, ಬಸ್ ನಿಲ್ದಾಣದ ಆವರಣಗಳಲ್ಲಿ ಮರಗಳ ನೆರಳಲ್ಲಿ ತಮ್ಮ ವಾಹನಗಳನ್ನು ನಿಲ್ಲಿಸಿ ತಮ್ಮ ಕೆಲಸಕ್ಕೆ ಹೋಗುವುದು ಸಾಮಾನ್ಯವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಮನಗರ | ಸಂಚಾರಕ್ಕೆ ಯೋಗ್ಯವಲ್ಲದ ರಸ್ತೆ; ಸ್ಥಳೀಯರ ಆಕ್ರೋಶ

ಪಟ್ಟಣಕ್ಕೆ ಬರುವವರು ಮಧ್ಯಾಹ್ನದ ವೇಳೆ ಬರಲು ಮನಸ್ಸು ಮಾಡುತ್ತಿಲ್ಲ. ಇದರಿಂದಾಗಿ ಮಧ್ಯಾಹ್ನ ವ್ಯಾಪಾರ ಕಡಿಮೆಯಾಗಿದೆ. ವ್ಯಾಪಾರಸ್ಥರು ತಮ್ಮ ತರಕಾರಿ, ಹಣ್ಣುಗಳನ್ನು ಬಿಸಿಲಿನಿಂದ ರಕ್ಷಿಸಲು ಕೊಡೆ ಅಥವಾ ಒದ್ದೆ ಬಟ್ಟೆಗಳನ್ನು ಅವುಗಳ ಮೇಲೆ ಹಾಕಿ ರಕ್ಷಿಸಿಕೊಳ್ಳುತ್ತಿದ್ದಾರೆ. ಆದರೆ, ಪಟ್ಟಣದಲ್ಲಿ ಎಳನೀರು, ಕಬ್ಬಿನ ಹಾಲು, ಹಣ್ಣಿನ ಅಂಗಡಿಗಳಲ್ಲಿ ವ್ಯಾಪಾರ ಜೋರಾಗಿದೆ.

ಕೆಲ ದಿನಗಳ ಹಿಂದೆ ಮೂರ್ನಾಲ್ಕು ದಿನಗಳು ಮಳೆ ಸುರಿದಿದ್ದರಿಂದ ಜನರು ಸಂತಸಗೊಂಡಿದ್ದರು. ಆದರೆ, ಮತ್ತೆ ಮಳೆಯ ಸುಳಿವು ಇಲ್ಲದ ಕಾರಣ ಬಿಸಿಲಿನ ಪ್ರಖರತೆ ಜೊತೆಗೆ ಧಗೆ ಹೆಚ್ಚಾಗಿದೆ. ಈಗಾಗಲೇ ರೈತರು ಮುಂಗಾರು ಭಿತ್ತನೆಗೆ ತಮ್ಮ ಹೊಲಗಳನ್ನು ಹದಗೊಳಿಸಿದ್ದಾರೆ. ಹದವಾದ ಮಳೆ ಸುರಿದರೆ ಭಿತ್ತನೆ ಕಾರ್ಯ ಕೈಗೊಳ್ಳಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...