ಗದಗ | ಜಾಗತೀಕರಣದ ಭರಾಟೆಯಲ್ಲಿ ರಂಗಕಲೆಗಳು ನಶಿಸುತ್ತಿವೆ: ಬಸವಂತಪ್ಪ ತಳವಾರ

Date:

ಸಮಾಜಕ್ಕೆ ಗಟ್ಟಿ ಸಂದೇಶ ಒದಗಿಸುವ ರಂಗಕಲೆಗಳು ಜಾಗತೀಕರಣದ ಭರಾಟೆಯಲ್ಲಿ ನಶಿಸುತ್ತಿದೆ. ಇದನ್ನು ಉಳಿಸಿ, ಬೆಳೆಸುವ ಪ್ರವೃತ್ತಿ ಸಮಾಜದಲ್ಲಿ ಉಂಟಾಗಬೇಕು ಎಂದು ಬಸವಂತಪ್ಪ ಎಚ್. ತಳವಾರ ಅಭಿಪ್ರಾಯಿಸಿದರು.

ಅವರು ಗದಗ ಜಿಲ್ಲಾ ರೋಣ ತಾಲೂಕಿನ ಯಾ.ಸ. ಹಡಗಲಿ ಗ್ರಾಮದಲ್ಲಿ ಶ್ರೀಕಲ್ಮೇಶ್ವರ ಸೇವಾ ನಾಟ್ಯ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಕಲ್ಮೇಶ್ವರ ಹಾಗೂ ಹೊನ್ನೆಂತಮ್ಮದೇವಿಯ ಜೋಡು ರಥೋತ್ಸವ ಅಂಗವಾಗಿ ‘ಅಣ್ಣನ ಆಜ್ಞೆ, ತಂಗಿಯ ಪ್ರತಿಜ್ಞೆ’ ಎಂಬ ನಾಟಕ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.

ಸಮಾಜಕ್ಕೆ ಗಟ್ಟಿ ಸಂದೇಶ ಒದಗಿಸುವ ನಾಟಕಗಳು ಇಂದು ಆಧುನಿಕ ಭರಾಟೆಯಲ್ಲಿ ಚಲನಚಿತ್ರದ ಅಬ್ಬರದಲ್ಲಿ ಸಿಲುಕಿ ಕಣ್ಮರೆಯಾಗುತ್ತಿವೆ. ಸಾಮಾಜಿಕ ನಾಟಕಗಳು ಇಂದು ಗ್ರಾಮಾಂತರ ಪ್ರದೇಶದಲ್ಲಿ ಉಳಿದ ಜನರಿಗೆ ಮನರಂಜನೆ ಒದಗಿಸುತ್ತವೆ. ಜಾಗತೀಕರಣದ ಭರಾಟೆಯಲ್ಲಿ ರಂಗಕಲೆಗಳು ನಶಿಸುತ್ತಿರುವ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಟಿ.ವಿ. ಮಾಧ್ಯಮಗಳ ಹಾವಳಿ ಹೆಚ್ಚಾಗಿರುವುದರಿಂದ ರಾತ್ರಿ ವೇಳೆಯಲ್ಲಿ ಹೆಣ್ಣುಮಕ್ಕಳು ಟಿ.ವಿ. ನೋಡುವುದರಿಂದ ಗ್ರಾಮೀಣ ಪ್ರದೇಶದಲ್ಲಿ ನಾಟಕಗಳು ಮಾಯವಾಗಿವೆ ಎಂದು ಬಸವಂತಪ್ಪ ಎಚ್ ತಳವಾರ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಜಾಗತೀಕರಣ

ನಾಟಕ ಮನರಂಜನೆಯೊಂದಿಗೆ ಸಂದೇಶ ನೀಡುವಂತಿರಲಿ. ಹಬ್ಬ-ಹರಿದಿನ ಜಾತ್ರೆಗಳ ಸಂದರ್ಭದಲ್ಲಿ ಪೂರ್ವಕಾಲದಿಂದ ಗ್ರಾಮೀಣ ಪ್ರದೇಶದಲ್ಲಿ ಅಭಿನಯಿಸಿರುವ ಸಾಮಾಜಿಕ, ಪೌರಾಣಿಕ, ಐತಿಹಾಸಿಕ ಸಮಾಜದ ಪರಿವರ್ತನೆಗಾಗಿ ಕವಿಗಳು ತಮ್ಮ ಕಲ್ಪನೆಯಿಂದ ರಚಿಸಿರುವ ನಾಟಕಗಳು, ಸಮಾಜದ ಅಂಕು-ಡೊಂಕುಗಳ ತಿದ್ದುವ ಮಹಾಸಾಧನೆಗಳು ನಾಟಕಗಳು ಮನರಂಜನೆಗಾಗಿ ಜೊತೆಗೆ ಸಾಮಾಜಿಕ ಉತ್ತಮ ಸಂದೇಶ ನೀಡುವಂತೆ ಇದ್ದರೆ ಕಲಾಭಿಮಾನಿಗಳು ಹೃದಯಪೂರ್ವಕವಾಗಿ ಸ್ವೀಕರಿಸುತ್ತಾರೆ. ಇದರಿಂದ ಸಮಾಜದಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳಿಂದ ಜನತೆ, ಜಾಗೃತಿಗೊಳ್ಳುವಲ್ಲಿ ನಾಟಕಗಳ ಪಾತ್ರ ಹಿರಿದಾಗಿರುವುದರಿಂದ ಕಲೆ ಮತ್ತು ಕಲಾವಿದರು ಉಳಿಯಲು ಸಾಧ್ಯವಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಜ್ಯೋತಿಯನ್ನು ಶಿವಬಸಪ್ಪನವರು ಶಿದ್ಲಿಂಗಪ್ಪನವರ ಬೆಳಗಿಸಿದರು. ಈ ಕಾರ್ಯಕ್ರಮದಲ್ಲಿ ನಿಂಗಯ್ಯನವರು ಪೂಜಾರ, ಮಲ್ಲಪ್ಪ ಕೆಂಪಶಿ, ಕಲ್ಲಯ್ಯನವರ, ಪೂಜಾರ, ಬಸನಗೌಡ ಪಾಟೀಲ, ಶೇಖಪ್ಪ ಹ. ಯಲಿಗಾರ, ಡಾ. ರಾಜು ಸವದತ್ತಿ, ಎಂ.ಬಿ. ಪಾಟೀಲ, ಬಸನಗೌಡ ಧಾರವಾಡ, ಹನುಮಂತಗೌಡ ಪೊಲೀಸ ಪಾಟೀಲ, ಆನಂದಗೌಡರ ಬೆಂಗೇರಿ, ಯಲ್ಲಪ್ಪ ಹಳ್ಳದ, ವೀರಯ್ಯ ಮುಳ್ಳೂರು, ರುದ್ರಗೌಡ ಪಾಟೀಲ, ಶಿವಪ್ಪ ಹನುಮಕ್ಕನವರ, ಗೂರಪ್ಪ ಬೋಪ್ಲಾಪೂರ, ಡಾ. ಶರಣಪ್ಪ ಹನುಮಕ್ಕನವರ, ಮಂಜು ಮಡ್ಲಿ, ಶೇಖಪ್ಪ ನೀ. ಮಾದರ, ಕಲ್ಲಪ್ಪ ಎ. ಹಡಪದ, ಹನುಮಂತ ಹನುಮಕ್ಕನವರ, ರುದ್ರಪ್ಪ ಅಳ್ಳೊಳ್ಳಿ (ಹಾರ್ಮೋನಿಯಂ ಮಾಸ್ಟರ್), ಶಬ್ಬೀರ್ ಬಾದಾಮಿ, ಕುಮಾರ ಹೊಳೆ ಆಲೂರ, ಮಾಂತೇಶ ಡೊಳ್ಳಿನ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...