ಗದಗ | ನಿರಂತರ ಕೃಷಿ ಕಾಯಕ ಮಾಡುವವರಿಗೆ ಬಡತನವಿಲ್ಲ: ಭೀರಪ್ಪ ವಗ್ಗಿ

Date:

“ನಿರಂತರವಾಗಿ ಕೃಷಿ ಕಾಯಕ ಮಾಡುವ ಮನೋತ್ಸರ್ಯ ರೈತರಿಗೆ ಬಡತನವಿಲ್ಲ. ಎಂದು ವಿಜಯಪುರ ಜಿಲ್ಲೆ ಇಂಡಿ ತಾಲೂಕ ಸಾಂಬಾದ ಬಿಲೇನಿಯರ್ ಫಾರ್ಮರ್ ಆಪ್ ಇಂಡಿಯಾ ಖ್ಯಾತಿಯ ರೈತ ಭೀರಪ್ಪ ವಗ್ಗಿ ಹೇಳಿದರು. 

ಗದಗ ಪಟ್ಟಣದಲ್ಲಿ ದುರ್ಗಾದೇವಿ ಕೋ-ಆಪ್ ಕ್ರೆಡಿಟ್ ಲಿ ಸೊಸೈಟಿಯ ೨೦೨೫ ನೇ ಸಾಲಿನ ೨೧ನೆ ವರ್ಷದ ವಾರ್ಷಿಕ ಸಭೆಯಲ್ಲಿ ದುರ್ಗಾದೇವಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ ರೈತರ ಸಮ್ಮಾನ ಸಮಾರಂಭ ಕಾರ್ಯಕ್ರಮದಲ್ಲಿ ಸತ್ಕಾರ ಸ್ವೀಕರಿ ಅವರು ಮಾತನಾಡಿದರು.

“ನನಗೆ ಕೃಷಿ ವಿಜ್ಞಾನಿಯ ವಿಜ್ಞಾನಿಯಂಬ ಪ್ರಶಸ್ತಿಯನ್ನು ದುರ್ಗಾದೇವಿ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಯವರು ನೀಡಿದ್ದೀರಿ. ಇದಕ್ಕೆ ನಾನು ಅರ್ಹ ಹೌದೋ ಅಲ್ಲ ಎಂಬುದು ನನಗೆ ತಿಳಿಯುತ್ತಿಲ್ಲ. ಭೂತಾಯಿಯ ಸೇವೆ ಮಾಡಲೇಂದೇ ಈ ಭವದಲ್ಲಿ ಬಂದಿದ್ದೇನೆ ಉಸಿರಿರುವರೆಗೂ ದುಡಿಯುದೊಂದೇ ನನ್ನ ಕಾಯಕ. ಪ್ರಾಮಾಣಿಕವಾಗ ಭೂತಾಯಿ ಮಡಿಲಲ್ಲಿ ಕೆಲಸ ಮಾಡಿದ ರೈತರಿಗೆ ದುಃಖ ಎಂಬುದಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಾವದೋ ಕಾರಣ ತೋರಿ ನನಗೆ ಒಳ್ಳೆಯದಾಗಿಲ್ಲ ಎಂದು ರೈತರು ಎಂದು ಹೇಳಬಾರದು. ಮನುಷ್ಯನಿಗೆ ಅಸಾಧ್ಯವಾದದ್ದು ಎನೂ ಇಲ್ಲ ಎಂಬುದಕ್ಕೆ ನಾನೇ ಸಾಕ್ಷಿ. ಕೇವಲ ೩ ಎಕರೆ ಜಮೀನಿನಲ್ಲಿ ದುಡಿದೆ ಶ್ರಮಪಟ್ಟೆ, ಹೆದರಿಲಿಲ್ಲ, ಧೃತಿಗೆಡಲಿಲ್ಲ, ದೇವರ ಕೃಪೆ ಭೂತಾಯಿಯ ಒಲುಮೆ ಈಗ ನಾನು ೧೨೫ ಎಕರೆ ಜಮೀನುದಾರ ಎಂದು ಹೇಳಿಕೊಳ್ಳಲು ನನಗೆ ತುಂಬಾ ಹೆಮ್ಮೆ ಅನಿಸುತ್ತದೆ. ಈ ನಿಟ್ಟಿನಲ್ಲಿ ರೈತರು ದುಡಿಮೆಯಲ್ಲಿ ಮಗ್ನರಾಗಬೇಕು. ಭೂತಾಯಿ ನಮ್ಮನ್ನೆಂದೂ ಕೈ ಬಿಡುವುದಿಲ್ಲ” ಎಂದರು.

“ಅಕಾಲಿಕ ಮಳೆ, ಅತೀವೃಷ್ಟಿ, ಅನಾವೃಷ್ಟಿಯ ಮದ್ಯದಲ್ಲೂ ನಮ್ಮ ದೃಷ್ಟಿ ಮಾತ್ರ ದುಡಿಮೆಯತ್ತ ಇರಬೇಕು. ದೇವರ ಕೃಪೆ ಇದ್ದೆ ಇರುತ್ತದೆ. ಧೃತಿಗೆಡದೆ ಕೃಷಿ ಕಾರ್ಯ ಮಾಡಿದರೆ ಒಂದಿಲ್ಲೊಂದು ದಿನ ಗೆಲುವು ಖಚಿತ” ಎಂದು ರೈತ ಭೀರಪ್ಪ ತಮ್ಮ ಅನುಭವ ಮತ್ತು ಮನದಾಳದ ಮಾತನ್ನು ಹಂಚಿಕೊಂಡು, ಸತ್ಕರಿಸಿ ಗೌರವಿಸಿದ ಶ್ರೀ ದುರ್ಗಾದೇವಿ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಯ ಎಲ್ಲ ಬಳಗದವರಿಗೂ ಅಭಿನಂದಿಸಿದರು.

ಗದಗ ಸಮೀಪದ ಕಳಸಾಪೂರ ಗ್ರಾಮದ ರಮೆಶ ಚವ್ಹಾಣ ಹಾಗೂ ಗದುಗಿನ ಹನುಮಂತಪ್ಪ ಕೋಟೆಣ್ಣವರ ಅವರಿಗೂ ಈ ಸಂದರ್ಭದಲ್ಲಿ ಸತ್ಕರಿಸಿ ಅವರೀರ್ವರಿಗೂ ಕ್ರಿಮಿನಾಶಕ ಸಿಂಪಡಿಸುವ ಪಂಪ್‌ನ್ನು ಸೊಸಾಯಿಟಿಯವರು ರೈತರಿಗೆ ಕೊಡುಗೆಯಾಗಿ ನೀಡಿದರು.

ಹಿರಿಯ ಸಾಹಿತಿಗಳಾದ ಐ. ಕೆ. ಕಮ್ಮಾರ ಅವರು ಭೀರಪ್ಪ ಅವರ ಪರಿಚಯ ಮಾಡಿದರು. ಸೊಸಾಯಿಟಿ ಅಧ್ಯಕ್ಷ ಎಂ. ಎಸ್. ಪಾಟೀಲ, ರಮೇಶ ಹಾಗೂ ಹನಮಂತಪ್ಪ ಅವರನ್ನು ಪರಿಚಯಿಸಿದರು. ವೇದಿಕೆ ಮೇಲೆ ದುರ್ಗಾದೇವಿ ಕೋ-ಆಪ್ ಸೊಸಾಯಿಟಿ ಅಧ್ಯಕ್ಷ ಎಂ. ಎಸ್. ಪಾಟೀಲ, ಉಪಾಧ್ಯಕ್ಷ ಎಸ್. ಕೆ. ತಗ್ಗಿನಮಠ ನಿರ್ದೇಶಕ ವ್ಹಿ. ಸಿ. ಬಳ್ಳೊಳ್ಳಿ, ಎಸ್. ಜಿ. ರೇವಣಕರ, ವ್ಹಿ. ಜಿ. ಬೆಟದೂರ, ಆರ್. ಸಿ. ಹೊನ್ನಗುಡಿ, ಆರ್. ಡಿ. ರಾಯ್ಕರ, ಎಸ್. ಎಸ್. ಚವ್ಹಾಣ, ಜೆ. ಎನ್. ಬ್ಯಾಟಿ, ಶ್ರೀಮತಿ ಎಲ್. ಟಿ. ಬೇಂದ್ರೆ, ಶ್ರೀಮತಿ ಎಸ್. ಆರ್. ಉಮಚಗಿ, ಕಾರ್ಯನಿರ್ವಾಹಣೆ ಅಧಿಕಾರಿಗಳಾದ ಬಸವರಾಜ ಕೋರಿ ಉಪಸ್ಥಿತರಿದ್ದರು ಶಾಲಾ ಮಕ್ಕಳಿಂದ ಪ್ರಾರ್ಥನೆಗೀತೆ ಜರುಗಿತು. ಶ್ರೀಮತಿ ವಿಜಯಲಕ್ಷ್ಮಿ ಹೂಗಾರ ಸ್ವಾಗತಿಸಿದರು. ದೀಪಾ ಗೋಟೂರ, ಕಾರ್ಯಕ್ರಮ ನಿರೂಪಿಸಿದರು. ಆರ್. ಡಿ. ರಾಯ್ಕರ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...