ಗದಗ | ಹುಳುಬಿದ್ದ ಸ್ಥಿತಿಯಲ್ಲಿ ಸಾವಿರಾರು ʼಸಂವಿಧಾನ ಓದುʼ ಪುಸ್ತಕಗಳು; ಕ್ರಮಕ್ಕೆ ಶಿವಾನಂದ ತಮ್ಮಣ್ಣವರ ಮನವಿ

Date:

ಗದಗ-ಬೆಟಗೇರಿ ನಗರಸಭೆಯಿಂದ ಸನ್ 2025ನೇ ಸಾಲಿನ ನವೆಂಬರ 26 ದಿನದಂದು ನ್ಯಾಯಮೂರ್ತಿ ನಾಗಮೋಹನ ದಾಸರವರ ‘ಸಂವಿಧಾನ ಓದು’ ಪುಸ್ತಕವನ್ನು ಸುಮಾರು ₹10ಲಕ್ಷ ರೂಪಾಯಿಗಳ, 40 ಸಾವಿರ ಪುಸ್ತಕಗಳನ್ನು ಪ್ರತಿ ಮನೆಗೂ ತಲುಪಿಸುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ ಪ್ರತಿ ಮನೆ ಮನೆಗೆ ತಲುಪದೇ ಹುಳತಿಂದು ಹಾಳಾಗುತ್ತಿವೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಶಿವಾನಂದ ತಮ್ಮಣ್ಣವರ ಗದಗ ಲೋಕಾಯುಕ್ತರಿಗೆ ಮನವಿ ಮಾಡಿದ್ದಾರೆ.

 “ಅಧಿಕಾರಿಗಳ ವಿಳಂಬ ನೀತಿಯಿಂದ ಇಲ್ಲಿಯವರೆಗೂ ಆ ಪುಸ್ತಕವನ್ನು ಪ್ರತಿ ಮನೆ ಮನೆಗೂ ತಲುಪಿಸಲಾಗಿಲ್ಲ” ಎಂದು ಹೇಳಿದ್ದಾರೆ.

“ನ್ಯಾಯಮೂರ್ತಿ ನಾಗಮೋಹನ ದಾಸರವರು ಬರೆದಿರುವ ‘ಸಂವಿಧಾನ ಓದು’ ಪುಸ್ತಕವನ್ನು ಜನಪ್ರಕಾಶನದಿಂದ ಮೊದಲ ಹಂತದ ₹5 ಲಕ್ಷ ರೂಪಾಯಿಗಳ 20 ಸಾವಿರ ಪುಸ್ತಕಗಳನ್ನು ಎರಡು ವರ್ಷಗಳ ಹಿಂದೆಯೇ ಬೆಂಗಳೂರಿನಿಂದ ಗದಗ ಕಾಮತ್ ಟ್ರಾವಲ್ಸ್‌ನಲ್ಲಿ ಬಂದು ತಲುಪಿವೆ. ಈ ಪುಸ್ತಕಗಳನ್ನು ಗದಗ-ಬೆಟಗೇರಿ ನಗರಸಭೆ ಇಲ್ಲಿಯವರೆಗೂ ತೆಗೆದುಕೊಂಡು ಬಂದಿಲ್ಲ. ಇದರಿಂದ ಪುಸ್ತಕಗಳನ್ನು, ಇಲಿಗಳು ಕಡಿದು ಸಂಪೂರ್ಣ ಹಾಳಾಗುವ ಪರಿಸ್ಥಿತಿ ತಲುಪಿವೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಘಟನೆಗೆ ಕಾರಣರಾದ ಅಧಿಕಾರಿಗಳ ಹತ್ತಿರ ಹಾನಿಯಾಗಿರುವ ಪುಸ್ತಕಗಳ ಮೊತ್ತವನ್ನು ಭರಿಸಿಕೊಂಡು ಆ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿಬೇಕು. ಪ್ರತಿ ಮನೆಗೂ ಆ ಪುಸ್ತಕ ತಲುಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಲು” ವಿನಂತಿಸಿದರು.

ಇದನ್ನೂ ಓದಿ: ಗದಗ | ಅಂತ್ಯಸಂಸ್ಕಾರ ಸಿದ್ಧತೆ ನಡೆಸುವಾಗ ಎಚ್ಚರವಾದ ವ್ಯಕ್ತಿ

“ಉಲ್ಲೇಖದನ್ವಯ ದಿನಾಂಕ 09-10-2024 ರಂದು ಈ ಕುರಿತು ಮಾನ್ಯ ಪೊಲೀಸ್ ಉಪ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಗದಗ ಜಿಲ್ಲೆ ಗದಗ ಇವರಿಗೆ ಮನವಿ ನೀಡಲಾಗಿತ್ತು, ಆದರೆ ನಗರಸಭೆಯ ಅಧಿಕಾರಿಗಳು ಇವರ ಆದೇಶಕ್ಕೂ ಯಾವುದೇ ಕ್ರಮವನ್ನು ತೆಗೆದುಕೊಳ್ಳದೇ ಬೇಕಾಬಿಟ್ಟಿಯಾಗಿ ವರ್ತಿಸುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಕುರಿತು ಈದಿನ.ಕಾಮ್ ಗದಗ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಅವರಿಗೆ ಕರೆ ಮಾಡಿದಾಗ “ಕಾಮತ್ ಟ್ರಾವೆಲ್ ನಲ್ಲಿ ಇರುವ ಸಂವಿಧಾನ ಓದು ಪುಸ್ತಕಗಳು ಇರುವುದು ನಮ್ಮ ಗಮನಕ್ಕೆ ಬಂದಿರುವುದಿಲ್ಲ. ನಗರಸಭೆಯಿಂದ ಮಾಹಿತಿ ಪಡೆದುಕೊಳ್ಳುವೆ” ಎಂದು ಪ್ರತಿಕ್ರಿಯೆ ನೀಡಿದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...