ಗದಗ | ಸೆಪ್ಟೆಂಬರ್ 15ರಿಂದ ಮೂರು ದಿನ ದ.ಸಂ.ಸ ರಾಜ್ಯ ಮಟ್ಟದ ಪದಾಧಿಕಾರಿಗಳ ಅಧ್ಯಯನ ಶಿಬಿರ: ಬಾಲರಾಜ ಅರಬರ

Date:

“ದಶಕಗಳಿಂದ ಹಿಂದುಳಿದಿರುವ ದಲಿತ ಸಮುದಾಯಗಳಿಗೆ ಸಮಾಜಿಕ ಅರಿವು ಮೂಡಿಸಲು ಸೆಪ್ಟೆಂಬರ 15ರಿಂದ 17ರ ವರೆಗೆ ಮೂರು ದಿನ ಬನ್ನೇರಘಟ್ಟ ಜಿಯಾಜಿಕಲ್ ಪಾರ್ಕನಲ್ಲಿ ದ.ಸಂ.ಸ. (ಅಂಬೇಡ್ಕರವಾದ) ರಾಜ್ಯ ಮಟ್ಟದ ಪದಾಧಿಕಾರಿಗಳ ಅಧ್ಯಯನ ಶಿಬಿರ ಹಮ್ಮಿಕೊಳ್ಳಲಾಗಿದೆ” ಎಂದು ಡಿಎಸ್ಎಸ್ ಜಿಲ್ಲಾ ಸಂಚಾಲಕ ಬಾಲರಾಜ ಅರಬರ್ ತಿಳಿಸಿದರು.

ಗದಗ ಪಟ್ಟಣದ ಪತ್ರಿಕಾ ಭವನದಲ್ಲಿ ಪತ್ರಿಕಾ ಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ಪೂಜ್ಯ ಸಂಘರಖಿತ ಭಂತೆಜಿರವರು ಧಮ್ಮ ಧ್ವಜಾರೋಹಣ ಮಾಡುವರು,ದ.ಸಂ.ಸ. (ಅಂಬೇಡ್ಕರವಾದ) ಧ್ವಜಾರೋಹಣ ಸಿದ್ಧಪ್ಪ ಕಾಂಬಳೆ ರಾಜ್ಯ ಖಜಾಂಚಿ ಉದ್ಘಾಟಿಸುವರು. ದಲಿತ ಸಂಘರ್ಷ ಸಮಿತಿ ಸಂಸ್ಥಾಪಕರಾದ ಬಿ. ಕೃಷ್ಣಪ್ಪರವರ ಧರ್ಮಪತ್ನಿ ಇಂದಿರಾ ಕೃಷ್ಣಪ್ಪನವರು ಅಧ್ಯಯನ ಶಿಬಿರವನ್ನು ಉದ್ಘಾಟಿಸುವರು. ಅಧ್ಯಕ್ಷತೆಯನ್ನು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರವರು ವಹಿಸುವರು” ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

“ಕಳೆದ ಐದು ದಶಕಗಳಿಂದ ನಾಡಿನ ದಲಿತ, ದಮನಿತ ಸಮುದಾಯಗಳಲ್ಲಿ ಸ್ವಾಭಿಮಾನ ಮತ್ತು ಸ್ವಾವಲಂಬನೆಯಿಂದ ಬದುಕಲು ಸಂವಿಧಾನಾತ್ಮಕ ಹಕ್ಕುಗಳಿಗೆ ದ.ಸಂ.ಸ ನಿರಂತರ ಚಳುವಳಿಯನ್ನು ರೂಪಿಸುತ್ತ ಬರುತ್ತಿದೆ. ಚಳುವಳಿಯನ್ನು ದೀರ್ಘಕಾಲಿಕವಾಗಿ ಮುನ್ನೆಡಸಲು ಕಾರ್ಯಕರ್ತರು, ಪದಾಧಿಕಾರಿಗಳು, ಬೌದ್ಧಿಕವಾಗಿ ಚಿಂತಿಸಲು ಸಾಮಾಜಿಕ, ಆರ್ಥಿಕ, ರಾಜಕೀಯ, ಬದಲಾವಣೆಗಳನ್ನು ರಾಜ್ಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಘಟಿಸುವ ವಿಚಾರಗಳನ್ನು ಸೂಕ್ಷ್ಮವಾಗಿ ಗ್ರಹಿಸಲು ಈ ರೀತಿಯ ಅಧ್ಯಯನ ಶಿಬಿರಗಳನ್ನು ದ.ಸಂ.ಸ. ನಿರಂತರವಾಗಿ ಆಯೋಜನೆ ಮಾಡುತ್ತಾ ಬರುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಸ್ತುತ ದೇಶ ಜಾಗತೀಕರಣ ಸುಳಿಗೆ ಸಿಕ್ಕಿ ಖಾಸಗೀಕರಣ ಮತ್ತು ಉದಾರೀಕರಣದ ಬೆನ್ನೇರಿ ಬಡವರು ಬಹು ಆಯಾಮಗಳ ಬಡತನಕ್ಕೆ ಸಿಕ್ಕು ನರಳುತ್ತಿದ್ದಾರೆ. ಆಳುವ ಸರ್ಕಾರಗಳು ಪ್ರಭುತ್ವವನ್ನು ಘಟ್ಟಿಗೊಳಿಸಿಕೊಳ್ಳಲು ಹಸಿವು, ನಿರುದ್ಯೋಗ, ಶಿಕ್ಷಣ, ಮುಂತಾದ ವಿಚಾರಗಳನ್ನು ಮರೆಮಾಚಲು ಧರ್ಮಾಂಧರಿತ ಜನರನ್ನು ಮಾಡುವ ಕಾರ್ಯದಲ್ಲಿ ನಿರತವಾಗಿದೆ. ದೇಶದ ಕೆಲವೇ ಕೆಲವೇ ಶ್ರೀಮಂತರ ಖಜಾನೆಗಳು ಭರ್ತಿಯಾಗಿ ನವ ಕೋಟ್ಯಾಧಿಪತಿಗಳು ಸೃಷ್ಟಿಯಾಗುತ್ತಿರುವುದು. ಸಂವಿಧಾನದ ಆಶಯಗಳಿಗೆ ವಿರೋಧವಾಗಿದೆ” ಎಂದು ದೂರಿದರು.

“ಜಾತಿ ವಿನಾಶ, ಸಮಾಜಿಕ ಸಮಾನತೆಯ ಕನಸು ಕಂಡ ಸ್ವಾತಂತ್ರö್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನು ವ್ಯರ್ಥಗೊಳಿಸುತ್ತಿರುವುದು ದುರಂತವಾಗಿದೆ. ಇಂತಹ ವಿಸ್ಮಯ ಪರಿಸ್ಥಿತಿಯಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಲ್ಲಿ ಹೊಸ ಆಲೋಚನೆ ಕ್ರಮ ನಿಸ್ವಾರ್ಥ, ಹೋರಾಟಗಳನ್ನು ರೂಪಿಸಲು ಅರಿವು ಮೂಡಿಸುವ ಇಂತಹ ಶಿಬಿರಗಳನ್ನು ರಾಜ್ಯ ಸಮಿತಿಯವರು ಆಯೋಜಿಸಿದ್ದಾರೆ” ಎಂದು ಬಾಲರಾಜ ಅರಬರ ಹೇಳಿದರು.

ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಸಂಘಟನಾ ಸಂಚಾಲಕರು ನಾಗರಾಜ ಗೋಕಾವಿ, ಮಾರುತಿ ಅಂಗಡಿ, ಮುತ್ತಪ್ಪ ಭಜಂತ್ರಿ, ಮಹಿಳಾ ಸಂಚಾಲಕರು ಪೂಜಾ ಬೇವೂರ, ರವಿಕುಮಾರ ನಿಡಗುಂದಿ, ಪ್ರವೀಣ ಮಾಡಳ್ಳಿ, ಸಂತೋಷ ಭಜಂತ್ರಿ, ಸಂತೋಷ ಬಣಕಾರ, ಹನಮಂತ ಕಿರಟಗೇರಿ, ಕುಮಾರ ಕಮತರ ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...