ಗದಗ | ಸಂವಿಧಾನ ಗೌರವ ಕೊಟ್ಟಿಲ್ಲವೆಂದು ಹೇಳುವುದು ಸಂವಿಧಾನ ವಿರೋಧಿಯಷ್ಟೇ ಅಲ್ಲ, ದೇಶ ದ್ರೋಹವೂ ಹೌದು: ಚಿಂತಕ ಬಸವರಾಜ್ ಸೂಳಿಭಾವಿ

Date:

ನಮ್ಮ ಸಂವಿಧಾನ ಯಾರನ್ನೂ ಅಗೌರವಿಸುವಂತಹದಲ್ಲ, ಎಲ್ಲರನ್ನೂ ಗೌರವಿಸುವಂತಹದ್ದು. ಎಲ್ಲ ಧರ್ಮಿಯರನ್ನು  ಗೌರವಿಸುವಂತಹದ್ದು. ಯಾರಾದರೂ ‘ಈ ಸಂವಿಧಾನ ನಮಗೆ ಗೌರವ ಕೊಟ್ಟಿಲ್ಲವೆಂದು ಹೇಳುವುದು ಸಂವಿಧಾನ ವಿರೋಧಿಯಷ್ಟೇ ಅಲ್ಲ, ದೇಶ ದ್ರೋಹವೂ ಆಗುತ್ತದೆ” ಎಂದು ಪ್ರಗತಿಪರ ಚಿಂತಕ ಬಸವರಾಜ್ ಸೂಳಿಭಾವಿ ಹೇಳಿದರು.

ಉಡುಪಿಯ ಪೇಜಾವರ ಸ್ವಾಮಿಯ ʼನಮ್ಮನ್ನು ಗೌರವಿಸುವ ಸಂವಿಧಾನ ಬರಲಿʼ ಎಂದಿರುವ ಸಂವಿಧಾನದ ವಿರುದ್ಧ ಹೇಳಿಕೆ ಖಂಡಿಸಿ ಗದಗ ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

“ಯಾವ ಸಂವಿಧಾನ ಪ್ರತಿಯೊಬ್ಬರ ಹಕ್ಕು, ಸಮಾನತೆಯನ್ನು ಪ್ರತಿಪಾದನೆ ಮಾಡಿದೆಯೋ, ಎಲ್ಲರನ್ನು ಸಮಾನವಾಗಿ ಕಾಣಲು ಹೇಳಿದೆಯೋ ಅಂತಹ ಸಂವಿಧಾನ ಗೌರವ ಕೊಟ್ಟಿಲ್ಲವೆಂದು ಹೇಳುವುದು ನಿಜವಾಗಿಯು ದೇಶ ದ್ರೋಹವೇ ಹೌದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ದೇಶ ಸಂವಿಧಾನ ರಚನೆಯಾದ 75ನೇ ವಾರ್ಷಿಕೋತ್ಸವದ ಆಚರಣೆ ಮಾಡಿದೆ. ಈ ದೇಶಕ್ಕೆ ಸಂವಿಧಾನದಿಂದ ವಿಶೇಷ ಗೌರವ ಸಿಕ್ಕಿದೆ. ಈ ದೇಶವನ್ನು ಹಿಂದೆ ರಾಜಪ್ರಭುತ್ವ ಆಳಿದೆ, ಧರ್ಮಪ್ರಭುತ್ವ ಆಳಿದೆ. ಆದರೆ ಪ್ರಜಾಪ್ರಭುತ್ವ ಆಳ್ವಿಕೆಯನ್ನು, ಮೇಲರಿಮೆಯನ್ನು ಸಾರಿದ್ದೇ ಈ ಸಂವಿಧಾನ. ಸಂವಿಧಾನದ ಮೂಲಕ ಪ್ರಜಾಪ್ರಭುತ್ವಕ್ಕೆ ಈ ದೇಶ ಹೊರಳಿದೆ. ಸನಾತನ ಪ್ರಭುತ್ವದಿಂದ, ಧರ್ಮಪ್ರಭುತ್ವದಿಂದ ಆಚೆ ಬಂದು ಪ್ರಜಾಪ್ರಭುತ್ವ ಪರಿಕಲ್ಪನೆ ಕೊಟ್ಟಿದ್ದು, ಈ ದೇಶದ ಸಂವಿಧಾನ. ಇಡೀ ವಿಶ್ವದಲ್ಲಿಯೇ ನಮ್ಮ ದೇಶಕ್ಕೆ ಇಷ್ಟು ದೊಡ್ಡ ಪ್ರಜಾಪ್ರಭುತ್ವದ ಗೌರವ ಸಿಕ್ಕಿರುವುದು ಸಂವಿಧಾನದ ಮೂಲಕ” ಎಂದರು.

“ಪೇಜಾವರ ಸ್ವಾಮಿಗಳು ದೇಶದ್ರೋಹದ ಕೆಲಸ ಮಾಡಿದ್ದಾರೆ. ಸಂವಿಧಾನ ವಿರೋಧಿ ಕೆಲಸ ಮಾಡದ್ದಾರೆ. ಕೂಡಲೇ ದೇಶದ್ರೋಹಿ, ಸಂವಿಧಾನ ವಿರೋಧಿ ಎಂದು ಸರಕಾರ ಪ್ರಕರಣ ದಾಖಲಿಸಬೇಕು. ಎಲ್ಲರನ್ನು ಗೌರವಿಸುವಂತ ಸಂವಿಧಾನವನ್ನ ನಮಗೆ ಗೌರವ ಕೊಟ್ಟಿಲ್ಲ ಎಂದು ಹೇಳುವುದು ದೇಶದ್ರೋಹದ ಕೆಲಸ. ಇಂತಹ ಹೇಳಿಕೆಯನ್ನು ಪೇಜಾವರ ಸ್ವಾಮೀಜಿ ವ್ಯಕ್ತಿಯಾಗಿ ಹೇಳಿದ್ದಲ್ಲ, ಒಂದು ಸಂಸ್ಥೆಯಾಗಿ ಮಾಡಿರುವಂತಹದ್ದು. ಆ ಸಂತರ ಸಭೆಯನ್ನು  ಕರೆದವರು ವಿಶ್ವ ಹಿಂದೂ ಪರಿಷತ್ ನವರು.

ಈ ದೇಶದಲ್ಲಿ ಆರ್‌ಎಸ್‌ಎಸ್ ದ್ವಿಮುಖ ನೀತಿಯನ್ನು ಮಾಡುತ್ತಿದೆ. ಈವರೆಗೂ ಬಿಜೆಪಿ ಸಂಸದರಿಂದ, ಮಂತ್ರಿಗಳಿಂದ ಸಂವಿಧಾನ ವಿರೋಧಿ ಹೇಳಿಕೆಗಳನ್ನು ಕೊಡಿಸುವಂತ ಕೆಲಸ ಮಾಡುತ್ತಿದೆ. ಆರ್‌ಎಸ್‌ಎಸ್‌ನ ಅಂಗಸಂಸ್ಥೆ ವಿಶ್ವ ಹಿಂದೂ ಪರಿಷತ್ತಿನ ರಾಷ್ಟೀಯ ಉಪಾಧ್ಯಕ್ಷ ಪೇಜಾವರ ಸ್ವಾಮೀಜಿ ಸಂತರ ಸಭೆಯೋ ರಾಜಕೀಯ ಸಭೆಯೋ ಅನುಮಾನ ಕಾಡುತ್ತಿದೆ. ಸಭೆಯಲ್ಲಿ ಪಕ್ಕಾ ರಾಜಕಾರಣಿ ಮಾತನಾಡುವಂತಹ ಭಾಷೆಯಲ್ಲಿತ್ತು. ಹಾಗಿದ್ದರೆ ಸ್ವಾಮೀಜಿ ಕೂಡಲೇ ಪೇಜಾವರ ಮಠವನ್ನು ತ್ಯಜಿಸಿ, ಪಕ್ಷಕ್ಕೆ ಸೇರಬೇಕು. ಬದಲಾಗಿ ಧಾರ್ಮಿಕ ಸ್ವಾಮೀಜಿಯಾಗಿ ಸಂವಿಧಾನ ವಿರೋಧಿಸುವ ಹೇಳಿಕೆ ಆತಂಕಕಾರಿಯಾಗಿದ್ದು, ಸಂವಿಧಾನ ಬದಲಾಯಿಸುವೆವು ಎಂಬುದಕ್ಕೆ ನೇರವಾಗಿ ಸಾಂಸ್ಥಿಕವಾಗಿ ಹೇಳಿಕೆಗಳನ್ನು ಗಮನಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬೋಧಗಯಾ ಆಡಳಿತ ಹಸ್ತಾಂತರಕ್ಕೆ ಆಗ್ರಹಿಸಿ ಪ್ರತಿಭಟನೆ

“ಈ ರೀತಿ ಹೇಳಿಕೆ ನೀಡುವುದರ ಮೂಲಕ ಈ ದೇಶದಲ್ಲಿ ಮೇಲು ಕೀಳಿನ ಜತೆಗೆ ಮನುಸ್ಮೃತಿಯನ್ನು ಮತ್ತೆ ಪ್ರತಿಪಾದನೆ ಮಾಡುತ್ತಿದ್ದಾರೆ. ಇದು ಆರ್‌ಎಸ್‌ಎಸ್‌ ಅಜೆಂಡಾವಾಗಿದ್ದು, ಸಂವಿಧಾನ ನಿರಾಕರಿಸುವ ಕೆಲಸ ಮಾಡುತ್ತಿದ್ದಾರೆ. ಇಂತಹವರ ವಿರುದ್ಧ ಬಂಡೇಳಬೇಕು. ಇಂತಹ ಸಂವಿಧಾನ ವಿರೋಧಿ ಹೇಳಿಕೆ ನೀಡುವ ಸ್ವಾಮೀಜಿಗಳ‌ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು” ಎಂದು ಬಸವರಾಜ್ ಸೂಳಿಭಾವಿ ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಮುಖಂಡ ಶೇಖಣ್ಣ ಕವಳಿಕಾಯಿ, ಡಿಎಸ್‌ಎಸ್ ಮುಖಂಡರಾದ ಬಾಲರಾಜ್ ಅರಬರ್, ಆನಂದ ಶಿಂಗಾಡಿ, ನಾಗರಾಜ್ ಗೋಕಾವಿ, ಅನಿಲ್ ಕಾಳೆ, ಪರಶು ಕಾಳೆ, ಮುತ್ತು ಬಿಳಿಯಲಿ, ಶಿವಾನಂದ ತಮ್ಮಣ್ಣವರ, ಬಸವರಾಜ್ ಪೂಜಾರ್ ಶರೀಫ್ ಬಿಳಿಯಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...