ಗದಗ | ತಂಬಾಕು ನಿಯಂತ್ರಣ ತನಿಖಾ ದಳ ದಾಳಿ; ಕೋಟ್ಪಾ ಕಾಯ್ದೆ ಉಲ್ಲಂಘನೆ ವಿರುದ್ಧ ಕ್ರಮ

Date:

ಗದಗ ನಗರದ ವಿವಿಧೆಡೆ ತಂಬಾಕು ನಿಯಂತ್ರಣ ಕೋಟ್ಟಾ ಕಾಯ್ದೆ ಉಲ್ಲಂಘನೆ ಹಿನ್ನೆಲೆ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳ ಹಾಗೂ ತಾಲೂಕಾ ತಂಬಾಕು ನಿಯಂತ್ರಣ ತನಿಖಾ ದಳ ದಾಳಿ ನಡೆಸಿದೆ.

ಗದಗ  ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವೆಂಕಟೇಶ ರಾಥೋಡ ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳ ಹಾಗೂ ತಾಲೂಕಾ ತಂಬಾಕು ನಿಯಂತ್ರಣ ತನಿಖಾ ದಳ ಗದಗ, ಮುಂಡರಗಿ, ರೋಣ, ವತಿಯಿಂದ ಗದಗ ನಗರದ ಮುಳಗುಂದ ನಾಕಾ, ಜಿಲ್ಲಾ ಆಸ್ಪತ್ರೆ ಆವರಣ, ಅಂಜುಮನ್ ಕಾಲೇಜು ಎದುರು, ಹಾತಲಗೇರಿ ನಾಕಾ, ಅಡವಿಸೊಮಪುರ, ಲಕ್ಕುಂಡಿ, ಮುಂಡರಗಿ, ಗಜೇಂದ್ರಗಡ, ಮುಂಡರಗಿ ಕೊರ್ಲಳ್ಳಿ ಕ್ರಾಸ್, ಡಂಬಳ, ಇತರೆ ಸ್ಥಳಗಳಲ್ಲಿ ಕೋಟ್ಪಾ ದಾಳಿ ನಡೆಸಲಾಗಿದೆ.

ಈ ವೇಳೆ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮ ಹಾಗೂ ತಂಬಾಕು ನಿಯಂತ್ರಣ ಕಾಯ್ದೆ ಕೋಟ್ಪಾ-2003ರ ಕುರಿತು ಸಾರ್ವಜನಿಕರಲ್ಲಿ ಹಾಗೂ ಅಂಗಡಿಕಾರರಲ್ಲಿ ಜಾಗೃತಿ ಮೂಡಿಸಲಾಯಿತು,  ವಿದ್ಯಾರ್ಥಿಗಳು ತಂಬಾಕು ಉತ್ಪನ್ನಗಳಿಂದ ದೂರವಿರುವಂತೆ, ಚಟಕ್ಕೆ ಬಲಿಯಾಗದಂತೆ ಮಾಡುವ ಉದ್ದೇಶದಿಂದ ಶಾಲಾ ಕಾಲೇಜು ಆವರಣದಿಂದ 100 ಗಜದ ವರೆಗೆ ತಂಬಾಕು ಮಾರಾಟ ನಿಷೇಧ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧದ ಕುರಿತು ಪ್ರತಿಯೊಂದು ಸಾರ್ವಜನಿಕ ಸ್ಥಳಗಳಲ್ಲಿ ನಾಮಫಲಕ ಬಿತ್ತರಿಸುವದು ಅ ಸ್ಥಳದ ಮಾಲೀಕರ ಜಾವಾಬ್ದಾರಿಯಾಗಿರುತ್ತದೆ ಹಾಗೂ ಕೆಲವು ಅಂಗಡಿಗಳ ಹಿಂದೆ ಧೂಮಪಾನ ಅಡ್ಡಾಗಳನ್ನು ಮಾಡಿಕೊಂಡಿರುವವರ ವಿರುದ್ಧ ಕೂಡಾ ಕ್ರಮ ವಹಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದರಿಂದ ಅಮಾಯಕರ ಆರೋಗ್ಯದ ಮೇಲೆ ಪರಿಣಾಮಬೀರುತ್ತಿರುವದು ಕಂಡು ಬಂದಿದೆ, ತಂಬಾಕು ಕುರಿತ ಜಾಹೀರಾತು ನಿಷೇದಿಸುವದು, 18 ವರ್ಷದೋಳಗಿನವರಿಗೆ ತಂಬಾಕು ನಿಷೇಧಿಸುವದು, ತಂಬಾಕು ಉತ್ಪನ್ನಗಳ ಪ್ಯಾಕ್ ಮೇಲೆ ಶೇ.85ರಷ್ಟು ಆರೋಗ್ಯ ಎಚ್ಚರಿಕೆ ಚಿನ್ಹೆ ಕಡ್ಡಾಯ. ಈ ಕುರಿತು ಮಾಹಿತಿ ಹಾಗೂ ಜಾಗೃತಿ ಮೂಡಿಸಿ ಉಲ್ಲಂಘನೆ ಮಾಡಿದವರ ವಿರುದ್ಧ ಎಚ್ಚರಿಕೆ ನೀಡಿ ಒಟ್ಟು 83 ಪ್ರಕರಣ ದಾಖಲಿಸಿದ್ದು, ರೂ. 16,350 ದಂಡ ಸಂಗ್ರಹಿಸಿದ್ದಾರೆ.

ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಅದರ ಉಪಯೋಗ ಕೋಟ್ಪಾ ಕಾಯ್ದೆ ಅಡಿಯಲ್ಲಿ ಅವಕಾಶವಿದ್ದು ಅದನ್ನು ಉಲ್ಲಂಘಿಸಿದಲ್ಲಿ ಕಾನೂನು ರೀತಿಕ್ರಮ ವಹಿಸಲಾಗುವದು ಎಂದು ಎಚ್ಚರಿಕೆ ನೀಡಿದ್ದಾರೆ.

ದಾಳಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ಗೋಪಾಲ ಸುರಪುರ, ಪೊಲೀಸ್ ಇಲಾಖೆಯ ಬಿ.ಎನ್. ಚಳಗೆರಾ, ಎಂ.ಆಯ್. ಮುಲ್ಲಾ, ಎ.ಎಸ್.ಐ, ಕುಮಾರಸ್ವಾಮಿ, ಸಚಿನ್, ರೆಷ್ಮಾ ಬೆಗಂ ನಧಾಫ್, ವೈ.ಎನ್. ಕಡೆಮನಿ ಹಾಗೂ ಮುಂಡರಗಿ ತಾಲೂಕಾ ಆರೊಗ್ಯ ಶಿಕ್ಷಣಾಧಿಕಾರಿ ಮಂಜುಳಾ ಸಜ್ಜನ್, ಎಂ.ಎಂ. ದೊಡ್ಡಮನಿ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...