ಗದಗ | ಪೊಲೀಸರಿಗೆ ‘ತಂಬಾಕು ನಿಯಂತ್ರಣ ಕಾಯ್ದೆ’ ಕುರಿತು ತರಬೇತಿ ಕಾರ್ಯಾಗಾರ

Date:

ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತಂಬಾಕು ವ್ಯಸನದಿಂದಾಗುವ ದುಷ್ಪರಿಣಾಮ ಕೋಟ್ಪಾ ಕಾಯ್ದೆ-2003 ಕುರಿತು ಹಾಗೂ ತಂಬಾಕು ಮುಕ್ತ ಶಿಕ್ಷಣ ಸಂಸ್ಥೆ ಮತ್ತು ತಂಬಾಕು ವ್ಯಸನ ಮುಕ್ತ ಕೇಂದ್ರದಲ್ಲಿನ ಸೌಲಭ್ಯಗಳ ಕುರಿತು ಪೊಲೀಸರಿಗೆ ತರಬೇತಿ ಕಾರ್ಯಾಗಾರ ನಡೆದಿದೆ.

ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸಮೀಕ್ಷಾ ಘಟಕ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಂಯುಕ್ತಾಶ್ರಯದಲ್ಲಿ ಕಾರ್ಯಾಗಾರ ನಡೆದಿದೆ.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಗುರುಪ್ರಸಾದ ಕಾರ್ಯಕ್ರಮ ಉದ್ಘಾಟಿಸಿ, ತಂಬಾಕು ಬಳಕೆಯಿಂದ ಪರಿಸರ ಹಾಗೂ ನಮ್ಮ ಸುತ್ತ ಮುತ್ತಲಿನ ಪ್ರದೇಶ ಕಲುಷಿತ ಹಾಗೂ ಅನಾರೋಗ್ಯ ವಾತಾವರಣ ಉಂಟಾಗುತ್ತಿರುವದನ್ನು ತಡೆಗಟ್ಟಲು ಕ್ರಮವಹಿಸಬೇಕೆಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಎಸ್.ಎಸ್.ನೀಲಗುಂದ ಅವರು ಕಾರ್ಯಗಾರ ಉದ್ದೇಶಿಸಿ ಮಾತನಾಡುತ್ತ, ತಂಬಾಕು ನಿಯಂತ್ರಣ ಕುರಿತು ನಮ್ಮ ಇಲಾಖೆಯ ವತಿಯಿಂದ ವಿವಿಧ ಇಲಾಖೆಯ ಅಧಿಕಾರಿ ಸಿಬ್ಬಂದಿಗಳಿಗೆ ಸಂಘ ಸಂಸ್ಥೆಗಳ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳುವದರ ಮೂಲಕ ಜಿಲ್ಲೆಯ ಪರಿಣಾಮಕಾರಿ ಅನುಷ್ಟಾನಕ್ಕೆ ಕ್ರಮಕೈಗೊಳ್ಳಲಾಗಿದೆ, ಕೋಟ್ಪಾ ಕಾಯ್ದೆ ಅನುಷ್ಟಾನಕ್ಕೆ ಮುಖ್ಯವಾಗಿ ಪೊಲೀಸ್ ಇಲಾಖೆಯ ಪ್ರಮುಖ ಪಾತ್ರವಹಿಸುತ್ತದೆ ಅದೇ ರೀತಿ ಸಹಕಾರ ಕೂಡ ನೀಡುತ್ತದೆ ಎಂದು ತಿಳಿಸಿದರು.

ಜಿಲ್ಲಾ ಸಮೀಕ್ಷಣಾಧಿಕಾರಿಗಳಾದ ಡಾ. ವೆಂಕಟೇಶ ರಾಠೋಡ ಅವರು ಮಾತನಾಡಿ, ತಂಬಾಕು ಸೇವನೆಯಿಂದ ಕ್ಯಾನ್ಸರ್ ನಂತಹ ಭಯಾನಕ ಖಾಯಿಲೆಗಳು, ಅಸಾಂಕ್ರಾಮಿಕ ಕಾಯಿಲೆಗಳು ಹೆಚ್ಚುತ್ತಿದ್ದು, ಕ್ಯಾನ್ಸರ್ ಪ್ರಾರಂಭಿಕ ಹಂತದಲ್ಲಿ ಪತ್ತೆ ಹಚ್ಚಿ ಶೀಘ್ರ ಚಿಕಿತ್ಸೆ ಪಡೆಯಲು ತಿಳಿಸಿದರು, ಜಿಲ್ಲಾ ವ್ಯಸನಮುಕ್ತ ಕೇಂದ್ರದಲ್ಲಿ ಲಭ್ಯವಿರುವ ಸೌಲಭ್ಯಗಳ ಕುರಿತು ವಿವಿರವಾದ ಮಾಹಿತಿ ನೀಡಿದರು.

ಉಪ ಪೊಲೀಸ್ ಅಧೀಕ್ಷಕರು ಜೆ.ಎಚ್.ಇನಾಮದಾರ ಅವರು ಮಾತನಾಡಿ, ತಂಬಾಕು ನಿಯಂತ್ರಣ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಇನ್ನಿತರ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಲ್ಲಿ ಕೋಟ್ಪಾ ಕಾಯ್ದೆ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷಾನಗೊಳಿಸುವಲ್ಲಿ ನಮ್ಮ ಇಲಾಖೆಯ ಸಹಕಾರ ಸದಾ ಇರುವದಾಗಿ ತಿಳಿಸಿದರು.

ನಗರದ ಜಿಮ್ಸ್ ಸಹ ಪ್ರಾಧ್ಯಾಪಕರಾದ  ಡಾ. ಅರವಿಂದ ಕರಿನಾಗಣ್ಣವರ್ ಅವರು ಮಾತನಾಡಿ, ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ತರಬೇತಿಯಲ್ಲಿ ತಂಬಾಕಿನಲ್ಲಿರುವ ನಿಕೋಟಿನ್ ಅಂಶ ದೇಹದಲ್ಲಿ ಸೇರಿ ನರಮಂಡಲದ ಕಾರ್ಯದ ಮೇಲೆ ಪರೀಣಾಮ ಬೀರಿ ರಕ್ತ ಹಾಗೂ ಆಕ್ಸಿಜನ್ ಪೂರೈಕೆಯಲ್ಲಿ ವ್ಯತೆಯ ಉಂಟಾಗಿ ದೇಹದ ಪ್ರತಿಯೊಂದು ಅಂಗದ ಮೇಲೆ ಪರಿಣಾಮ ಬೀರುತ್ತದೆ ಎಂದು ತಿಳಿಸಿದರು. ತಂಬಾಕು ತ್ಯಜಿಸಲು ನಮ್ಮ ಜೀವನ ಶೈಲಿಯಲ್ಲಿ ಕೈಗೊಳಬೇಕಾದ ಬದಲಾವಣೆಗಳ ಕುರಿತು ಪರಿಣಾಮಕಾರಿ ರೀತಿಯಲ್ಲಿ ತಿಳಿಸಿದರು.

ಎನ್.ಟಿ.ಸಿ.ಪಿ. ಜಿಲ್ಲಾ ಸಲಹೆಗಾರ ಗೋಪಾಲ ಸುರಪುರ ಅವರು ಮಾತನಾಡಿ, ತಂಬಾಕು ನಿಯಂತ್ರಣ ಕಾಯ್ದೆ ಕೋಟ್ಪಾ-2003 ಕುರಿತು ಮಾತನಾಡುತ್ತಾ ತಂಬಾಕು ಬಳಕೆ ಹಾಗೂ ಮಾರಾಟ ಕೋಟ್ಪಾ ಕಾಯ್ದೆಯಡಿ ಮಾಡಲು ಸೆಕ್ಷನ್ 4 ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ, ಸೆಕ್ಷನ್5 ತಂಬಾಕು ಉತ್ಪನ್ನಗಳ ನೇರ ಪರೋಕ್ಷ ಜಾಹಿರಾತು ನಿಷೇಧ, ಸೆಕ್ಷನ್ 6ಎ 18 ವರ್ಷದೊಳಗಿನವರಿಗೆ ನಿಷೇಧ, 6ಬಿ ಶಿಕ್ಷಣ ಸಂಸ್ಥೆಗಳ ಆವರಣದಿಂದ 100 ಗಜದ ವರೆಗೆ ತಂಬಾಕು ನಿಷೆಧ, ಸೆಕ್ಷನ್ 7 ತಂಬಾಕು ಉತ್ಪನ್ನಗಳ ಪ್ಯಾಕ್ ಮೇಲೆ ಆರೋಗ್ಯ ಎಚ್ಚರಿಕೆ ಚಿನ್ಹೆ ಕಡ್ಡಾಯ, ಈ ಕಾಯ್ದೆಗಳ ಅನುಷ್ಟಾನ ಸ್ಟಾಪ್ ಟೊಬ್ಯಾಕೋ ಆ್ಯಫ್ ಹಾಗೂ ತಂಬಾಕು ಮಾರಾಟ ಪರವಾನಿಗೆ ಕುರಿತು ಮಾತನಾಡಿದರು.

ಕಾರ್ಯಕ್ರಮವನ್ನು ಎಸ್.ಎಸ್.ಪೀರಾ ಕಾರ್ಯಕ್ರಮ ನಿರೂಪಿಸಿರು.  ಕು. ಯಮುನಾ ಪ್ರಾರ್ಥಿಸಿದರು. ವಿಠ್ಠಲ್ ನಾಯ್ಕ ಸ್ವಾಗತಿಸಿದರು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಎಂ.ಎಸ್.ರಬ್ಬನಗೌಡರ ವಂದಿಸಿದರು, ಕಾರ್ಯಕ್ರಮದಲ್ಲಿ ಬಿ.ಎ.ಜಾದವ ವೃತ್ತ ಪೊಲೀಸ್ ನಿರೀಕ್ಷಕರು, ಶಿವಕುಮಾರ ಬಗಾಡೆ, ಪೈಯಾಜ.ಎಂ ಹಾಗೂ ಜಿಲ್ಲಾ ಸಮೀಕ್ಷಾ ಘಟಕದ ಸಿಬ್ಬಂದಿಗಳು, ಆರ್.ಡಿ.ಪಿ.ಆರ್ ವಿದ್ಯಾರ್ಥಿಗಳಾದ ಪವಿತ್ರಾ, ಸಿದ್ದು.ಎಸ್, ಯಮುನಾ ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...