ಗದಗ | ʼವಲಸೆ ಯಾಕ್ರೀ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ, ದುಡಿಮೆ ಖಾತ್ರಿʼ ಅಭಿಯಾನ

Date:

ಗದಗ ಜಿಲ್ಲೆಯಾದ್ಯಂತ ಆಯುಕ್ತಾಲಯದ ನಿರ್ದೇಶನದಂತೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ʼವಲಸೆ ಯಾಕ್ರೀ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ/ ಉದ್ಯೋಗ ಖಾತ್ರಿ ದುಡಿಮೆ ಖಾತ್ರಿʼ ಅಭಿಯಾನವನ್ನು ಮಾರ್ಚ್ 15ರಿಂದ ಮಾಹೆಯ ಅಂತ್ಯದವರೆಗೂ  ಹಮ್ಮಿಕೊಂಡಿದ್ದು, ಗ್ರಾಮೀಣರು ಇದರ ಸದುಪಯೋಗ ಪಡಿಸಿಕೊಳ್ಳಲು ಜಿಪಂ ಸಿಇಒ ಭರತ್ ಎಸ್ ಅವರು ಮನವಿ ಮಾಡಿದ್ದಾರೆ.

ನಮ್ಮ ಜಿಲ್ಲೆಯ ಕೆಲವು ಗ್ರಾಮಗಳಿಂದ ಸಾಮಾನ್ಯವಾಗಿ ಪ್ರತೀ ವರ್ಷ ಬೇಸಿಗೆ ಬಂತೆಂದರೆ ಊರನ್ನು ಬಿಟ್ಟು ನಗರ ಪ್ರದೇಶಗಳಿಗೆ ಉದ್ಯೋಗ ಅರಸಿ ವಲಸೆ ಹೋಗುವುದು ಸರ್ವೇಸಾಮಾನ್ಯವಾಗಿ ಕಂಡುಬರುತ್ತದೆ. ಹಾಗಾಗಿ, ಉದ್ಯೋಗ ಚೀಟಿ ಹೊಂದಿರುವ ಎಲ್ಲಾ ಕುಟುಂಬಗಳು ಗ್ರಾಮ ಪಂಚಾಯತಿ ವತಿಯಿಂದ ಹಮ್ಮಿಕೊಂಡಿರುವ ಈ ಅಭಿಯಾನದಲ್ಲಿ ಸ್ಥಳೀಯವಾಗಿ ಉದ್ಯೋಗ ಪಡೆದು ಯೋಜನೆಯ ಸೌಲಭ್ಯವನ್ನು ಪಡೆಯಬೇಕು ಎಂದರು.

ಈ ಅಭಿಯಾನದ ಮೂಲ ಉದ್ದೇಶವೇ ಬೇಸಿಗೆ ವಲಸೆಯನ್ನು ನಿಯಂತ್ರಣ ಮಾಡುವುದಾಗಿದ್ದು ಈಗಾಗಲೇ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮ ಕಾಯಕ ಮಿತ್ರ/ತಾಂಡಾ ರೋಜಗಾರ ಮಿತ್ರ ಹಾಗೂ ಕ್ರಿಯಾಶೀಲ ಕಾಯಕ ಬಂಧುಗಳಿಂದ ಉದ್ಯೋಗ ಚೀಟಿದಾರರ ಕುಟುಂಬಗಳ ಮನೆ-ಮನೆ ಭೇಟಿ ಕಾರ್ಯ ನಡೆಯುತ್ತಿದ್ದು ಏಪ್ರೀಲ್ 1ರಿಂದಲೇ ಸ್ಥಳೀಯವಾಗಿ ಕೆಲಸ ನೀಡಲಾಗುತ್ತಿದ್ದು, ನಮೂನೆ 6ರಲ್ಲಿ ಕೂಲಿ ಬೇಡಿಕೆ ಪಡೆಯುವಂತೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯು ಕಳೆದ 2023-24ನೇ ಸಾಲಿನಲ್ಲಿ ಆಯುಕ್ತಾಲಯದ ಗುರಿಯನ್ನು ವರ್ಷಕ್ಕಿಂತ‌ ಮೊದಲೇ ಸಾಧಿಸಲಾಗಿದ್ದು. ಈ ಪ್ರಸಕ್ತ ವರ್ಷವು ಸಹ ಬೇಗನೆ ಕೆಲಸ ನೀಡುವ ಮೂಲಕ ಗುಳೆ ತಪ್ಪಿಸಿ ಸ್ಥಳಿಯವಾಗಿ‌ ಪ್ರತೀ ವರ್ಷದಂತೆ ಈ ವರ್ಷವೂ ಕೂಡಾ ಕೂಲಿಕಾರರಿಗೆ ಉದ್ಯೋಗ ಒದಗಿಸುವಂತೆ ತಳಮಟ್ಟದ ಎಲ್ಲಾ ಅಧಿಕಾರಿ/ಸಿಬ್ಬಂದಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಬಿಸಿಲಿನ ತಾಪ ಹೆಚ್ಚಾಗಿರುವ ಕಾರಣ ಕೆಲಸದ ಸ್ಥಳಗಳಲ್ಲಿ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ, ನೆರಳು, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿಸಿದರು ಹಾಗೂ ಕೂಲಿಕಾರರು ಕೆಲಸದ ಸ್ಥಳದಲ್ಲಿ ಮಕ್ಕಳನ್ನು ಕರೆತರಬಾರದು. ಅದಕ್ಕಾಗಿ ಆರು ತಿಂಗಳಿಂದ ಮೂರು ವರ್ಷದ ಮಕ್ಕಳಿಗೆ ನಮ್ಮ ಗ್ರಾಮ ಪಂಚಾಯತಿಯಿಂದ ಕೂಸಿನ ಮನೆ ಆರಂಭಮಾಡಿದ್ದು, ತಾವುಗಳು ತಮ್ಮ ಮಕ್ಕಳನ್ನು ಅಲ್ಲಿಯೇ ಬಿಟ್ಟು ಕೆಲಸಕ್ಕೆ ಹೋಗಲು ಅವಕಾಶವಿದ್ದು, ಇದರಿಂದ ಪಾಲಕರಿಬ್ಬರೂ ಯೋಜನೆಯಡಿ ಕೆಲಸಕ್ಕೆ ತೆರಳಿದಾಗ ಮಕ್ಕಳ ಲಾಲನೆ ಪಾಲನೆಗೆ ಕೊರತೆ ನೀಗಿದಂತಾಗಿದೆ. ಇದರಿಂದ ಯೋಜನೆಯಡಿ ಹೆಚ್ಚಿನ ಜನರು ಪಾಲ್ಗೊಂಡು ಯೋಜನೆ ಸೌಲಭ್ಯ ಪಡೆದು ಕೊಳ್ಳುವಂತೆ ಕೋರಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...