ಗದಗ | ವಿಬಿ ಜಿರಾಮ್‌ಜಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ಫೆ. 12ರಂದು ಮುಷ್ಕರ

Date:

ವಿಬಿ.ಜಿರಾಮ್‌ಜಿ ಕಾಯ್ದೆಯನ್ನು ಹಿಂಪಡೆದು ಮನರೇಗಾ ಕಾಯ್ದೆ ಯೋಜನೆ ಮುಂದುವರೆಸಿ ರೈತ, ಕೂಲಿ ಕಾರ್ಮಿಕರ, ಮಹಿಳೆಯರ ಪರ ಕಾನೂನುಗಳ ಜಾರಿಗಾಗಿ ಒತ್ತಾಯಿಸಿ ರೋಣ ತಾಲೂಕ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (CITU) ಸಮಿತಿ ವತಿಯಿಂದ ಫೆಬ್ರವರಿ 12ರಂದು ಮುಷ್ಕರ ಹಮ್ಮಿಕೊಂಡಿದ್ದಾರೆ.

ಈ ಕುರಿತು ತಾಲೂಕಿನ ಬೆಳವಣಿಕಿ ಗ್ರಾಮ ಪಂಚಾಯಿತಿ ಸದಸ್ಯ ಬಸವರಾಜ ಮಂತೂರ ಮಾತನಾಡಿ, ಗ್ರಾಮೀಣ ದುಡಿಯುವ ಜನರ ಮರಣ ಶಾಸನವಾದ ವಿಜಿ. ಜಿರಾಮ್‌ಜಿ ಯೋಜನೆ ರದ್ದು ಪಡಸಿ ಮೂಲ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಿನದ ಕೂಲಿ ರೂ.600ಕ್ಕೆ ಹೆಚ್ಚಿಸಿ ಮತ್ತು ದುಡಿತದ ದಿನಗಳನ್ನು 200ಕ್ಕೆ ಹೆಚ್ಚಿಸಬೇಕು. ರಾಜ್ಯದಲ್ಲಿ ದುಡಿತದ ಅವಧಿಯನ್ನು ದಿನಕ್ಕೆ 12 ಗಂಟೆಗೆ ಹೆಚ್ಚಿಸಿರುವ ಆದೇಶ ಕೂಡಲೇ ಹಿಂಪಡೆಯಬೇಕು. ಜೀವನ ಯೋಗ್ಯ ಸ್ತ್ರೀಂ ನೌಕರರು ಹಾಗೂ ಇತರರಿಗೆ ಕನಿಷ್ಠ ವೇತನ ರೂ 36,000 ನಿಗದಿ ಮಾಡಬೇಕು.

ಸಾರ್ವತ್ರಿಕ ಪಿಂಚಣಿ ಜಾರಿಗೊಳಿಸಿ ಕನಿಷ್ಠ ರೂ. 8000 ಪಿಂಚಣಿ ನೀಡಬೇಕು. ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ಮತ್ತು ನಗದೀಕರಣ ನಿಲ್ಲಿಸಬೇಕು. ಅಂಗನವಾಡಿ, ಬಿಸಿಯೂಟ, ಗ್ರಾಮ ಪಂಚಾಯತಿ, ಆಶಾ ಮುಂತಾದ ಸ್ತ್ರೀಂ ಕಾರ್ಮಿಕರನ್ನು ಕನಿಷ್ಠ ವೇತನ ವ್ಯಾಪ್ತಿಗೆ ಒಳಪಡಿಸಬೇಕು. ಅಸಂಘಟಿತ ವಲಯದ ಕಾರ್ಮಿಕರಿಗೆ ಸಮಗ್ರ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಜಾರಿಗೊಳಿಸಬೇಕು,ಗುತ್ತಿಗೆ ಪದ್ಧತಿ ರದ್ದು ಪಡಿಸಿ ಖಾಯಂಯೇತ್ತರರ ಖಾಯಂಗೆ ಶಾಸನ ರೂಪಿಸಬೇಕು. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿಗೊಳಿಸಬೇಕು ಮತ್ತು ಜಿಎಸ್ಟಿ ವ್ಯಾಪ್ತಿಯಿಂದ ಹೊರಗಿಡಬೇಕು. ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು. ರಾಜ್ಯದಲ್ಲಿ ರೈತ ವಿರೋಧಿ, ಕಾರ್ಮಿಕ ವಿರೋಧಿ ತಿದ್ದುಪಡಿ ಕೃಷಿ ಕಾಯ್ದೆಗಳನ್ನು ವಾಪಸ್ಸು ಪಡೆಯಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಲು ರಾಠೋಡ ಮಾತನಾಡಿ, ಕೇಂದ್ರ ಮೋದಿ ಸರ್ಕಾರ ವಿದ್ಯುತ್ ಶಕ್ತಿ ಮಸೂದೆ 2020 ಖಾಸಗೀಕರಣ  ಹಿಂಪಡೆಯಬೇಕು ಹಾಗೂ ಶಿಕ್ಷಣ ಇಲಾಖೆಯ NEP ಶಿಕ್ಷಣ ನೀತಿ ವಾಪಸ್ಸ ಆಗಬೇಕು ಹಾಗೂ ರಾಜ್ಯದಲ್ಲಿ KPS (ಕರ್ನಾಟಕ ಪಬ್ಲಿಕ್ ಸ್ಕೂಲ್) ಶಾಲೆಗಳ ಪರಿಕಲ್ಪನೆಯಿಂದ ಶಾಲೆಗಳು ವಿಲೀನ ಮಾಡುವಲ್ಲಿ ಕೈ ಬಿಡಬೇಕು. ಶಿಕ್ಷಣಕ್ಕೆ ಆಗತ್ಯದಷ್ಟು ಬಜೆಟ್ಅನ್ನು ರಾಜ್ಯ, ಕೇಂದ್ರ ಸರಕಾರಗಳು ನೀಡಬೇಕು. ರಾಜ್ಯ ಸರ್ಕಾರ ದೇವದಾಸಿ ಮಹಿಳೆಯರಿಗೆ ಭೂಮಿ ಮನೆ ನಿದೇಶನ ಹಂಚಿಕೆ ಮಾಡಬೇಕು. ಅವರ ಪಿಂಚಣಿಯನ್ನು 5000 ಕ್ಕೆ ಹೆಚ್ಚಿಸಬೇಕು. ದೇವದಾಸಿ ಮಹಿಳೆಯರ ಪುನರ್ ಗಣತಿಮಾಡಿ ಸಂಪೂರ್ಣ ಪರ್ಯಯಾ ವ್ಯವಸ್ಥೆ ಮಾಡಬೇಕು ಎಂದರು.

2026ರ ಫೆಬ್ರುವರಿ 12ರಂದು ಉತ್ಪಾದನೆ ಸೇವೆ ಸ್ಥಗಿತಗೊಳಿಸಿ ರೈತರು, ಕಾರ್ಮಿಕರು, ಕೃಷಿ ಕೂಲಿಕಾರರು, ಮಹಿಳಾ ವಿದ್ಯಾರ್ಥಿ- ಯುವಜನರು, ದಲಿತ ಸಂಘಟನೆಗಳು ಜೊತೆಯಾಗಿ ಅಖಿಲ ಭಾರತ ಮುಷ್ಕರವನ್ನು ಯಶಸ್ವಿಗೊಳಿಸಲು ಕರೆ ನೀಡಿದರು. ಅದರ ಭಾಗವಾಗಿ ಅಂಗನವಾಡಿ , ಬಿಸಿಯೂಟ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಮುಷ್ಕರದ ಕರಪತ್ರವನ್ನು ಹಂಚಿ ಹೋರಾಟದ ಪ್ರಚಾರವನ್ನು ಮಾಡಿದರು.

ಇದನ್ನೂ ಓದಿ ಗದಗ | ಭೀಕರ ಅಪಘಾತ; ಮೂವರ ಸಾವು, 14 ಮಂದಿ ಗಾಯ

ಈ ಸಂದರ್ಭದಲ್ಲಿ ಸಿಐಟಿಯು ಗುರಪ್ಪ ಕಣ್ಣೂರ್, ಹನುಮಂ ತಾಳಿ, ಕೃಷ್ಣಪ್ಪ ಮಾಡೊಳಿ, ನಿಂಗಪ್ಪ ಅರುಣಸಿ, ಪ್ರಭು ಪೂಜಾರ, ಈಶ್ವರ್ ಜಕ್ಕಲ್ಲಿ, ಸುರೇಶ್ ಮಹಾರಾಜನವರ, ಸುರೇಶ್ ಚಲವಾದಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...