ಗದಗ | ಉನ್ನತ ಅಭ್ಯಾಸ ಗೈದು ಊರಿನ ಕೀರ್ತಿ ಹೆಚ್ಚಿಸಬೇಕು: ಜಿ. ವಿ. ಹಿರೇಮಠ

Date:

“ಮಕ್ಕಳಲ್ಲಿ ಬೌದ್ಧಿಕ, ಮಾನಸಿಕ, ವೈಜ್ಞಾನಿಕ ಮನೋಭಾವ, ಸಾಮಾಜಿಕ ನಾಯಕತ್ವ, ಸಮಾಜ ಸೇವಾ ಗುಣ ಹೆಚ್ಚುವ ಕಾರ್ಯವಾಗಬೇಕು. ಉನ್ನತ ಅಭ್ಯಾಸ ಗೈದು ಊರಿನ ಕೀರ್ತಿ ಹೆಚ್ಚಿಸಬೇಕು. ಜೊತೆಗೆ ನಮ್ಮ ಭಾಗದ ಸಹ್ಯಾದ್ರಿ ಕಪ್ಪತಗುಡ್ಡವನ್ನು ನಾವೆಲ್ಲರೂ ರಕ್ಷಿಸಬೇಕಾಗಿದ್ದು, ಇದರ ಮಹತ್ವ ಇಡೀ ರಾಜ್ಯಕ್ಕೆ ಸಾರಬೇಕಾಗಿದೆ” ಎಂದು ಜಿ. ವಿ. ಹಿರೇಮಠ ಹೇಳಿದರು.

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ತೊಂಟದಾರ್ಯ ಕಲಾಭವನದಲ್ಲಿ ಸರ್ವೋದಯ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ವಿವಿಧೋದ್ದೇಶಗಳ ಸಂಸ್ಥೆ ಡಂಬಳ, ಮಾನಸ ಜ್ಞಾನಾಮೖತ ತರಬೇತಿ ಕೇಂದ್ರ, ವೈಚಾರಿಕ ಸಾಹಿತ್ಯ ವೇದಿಕೆ, ಪರಿವರ್ತನಾ ಕಲಾ ತಂಡ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

“ಪ್ರಗತಿಪರ ಚಿಂತಕರು ಗುಡದಪ್ಪ ತಳಗೇರಿ’ಯವರು ಸಮಾಜಮುಖಿ ಕಾರ್ಯಗಳು ಕಪ್ಪತಗುಡ್ಡದ ರಕ್ಷಣೆ, ಶೈಕ್ಷಣಿಕ ಸೇವೆ, ಪರಿಸರ ರಕ್ಷಣೆ ಇತ್ಯಾದಿ ಸಾಮಾಜಿಕ ಕಾರ್ಯಗಳನ್ನು  ಮಾಡುತ್ತಿರುವುದು ನಿಜಕ್ಕೂ ಶ್ಲಾಘನೀಯ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕವಿಗಳು,ಪ್ರಗತಿಪರ ಚಿಂತಕರು, ಸಂಸ್ಥೆಯ ಕಾರ್ಯದರ್ಶಿ ಗುಡದಪ್ಪ ತಳಗೇರಿ ಪ್ರಾಸ್ತಾವಿಕ ಮಾತನಾಡಿ, “ಸಂಸ್ಥೆಯ ಉದ್ದೇಶಗಳು ಸಾಮಾಜಮುಖಿ ಕಾರ್ಯಗಳಿಗೆ ಸದಾ ನಿಲ್ಲುತ್ತದೆ. ಊರಿನಲ್ಲಿ ಶೈಕ್ಷಣಿಕ ಪ್ರಗತಿ ಹೆಚ್ಚಿಸುವ ಕಾರ್ಯ ಆಗಬೇಕಾಗಿದೆ. ಪಾಲಕರು ಮಕ್ಕಳಲ್ಲಿ ಆತ್ಮವಿಶ್ವಾಸ, ಭರವಸೆ ತುಂಬಿ ಈ ದೇಶಕ್ಕಾಗಿ ಸೇವೆ ಮಾಡುವ ಸಾಧಕರನ್ನಾಗಿ ಮಾಡಲು ಶ್ರಮಿಸಬೇಕಾಗಿದೆ” ಎಂದರು.

ಡಿವಿಪಿ ಜಿಲ್ಲಾಧ್ಯಕ್ಷ ಸುರೇಶ್ ಛಲವಾದಿ ಮಾತನಾಡಿ, “ಶಿಕ್ಷಣ ಉಳ್ಳವರ ಸ್ವತ್ತು ಆಗುತಿದ್ದು, ಇತ್ತೀಚೆಗೆ ಅತೀ ಹೆಚ್ಚು ಪ್ರವೇಶ ಫೀ ಮಾಡಿ ಬಡವರನ್ನು ಶೈಕ್ಷಣಿಕವಾಗಿ ಹಿಂದುಳಿಯಲು ಕಾರಣವಾಗುತ್ತಿದೆ. ಈ ಸಂಧರ್ಭದಲ್ಲಿ ಅತೀ ಹೆಚ್ಚು ಫಲಾಪೇಕ್ಷವಿಲ್ಲದೇ ಗುಡದಪ್ಪರವರು ವಿದ್ಯಾರ್ಥಿಗಳ ಶಿಕ್ಷಣವನ್ನು ನೀಡಿ  ಭವಿಷ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ, ವೈಚಾರಿಕ, ದೈಹಿಕ ಬಲಗೊಳಿಸಲು ಯತ್ನಿಸುತ್ತಿದ್ದಾರೆ” ಎಂದು ಹೇಳಿದರು.

ಈ ಸಂಸ್ಥೆಯ ಅಂಗವಾದ ಮಾನಸ ಜ್ಞಾನಾಮೃತ ತರಬೇತಿ ಕೇಂದ್ರದಿಂದ ಬೇಶಿಗೆ ಶಿಬಿರದಲ್ಲಿ ಪಾಲ್ಗೊಂಡು, ಎಸ್ ಎಸ್ ಎಲ್ ಸಿಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಬಹುಮಾನ ವಿತರಿಸಲಾಯಿತು. ಉಪನ್ಯಾಸಕರು ಕಾವೇರಿ ಭೋಲಾ, ಶ್ರೀ ಮಲ್ಲಿಕಾರ್ಜುನ ಮಡಿವಾಳರು ಮಾತನಾಡಿದರು. ಎಂ ಸಿ ಕಟ್ಟಿಮನಿ ಅವರು ಲೋಗೋ ಬಿಡುಗಡೆಗೊಳಿಸಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಕರ್ತವ್ಯ ಲೋಪ ಎಸಗಿದ್ದಕ್ಕೆ ಪಿಡಿಒ ಅಮಾನತು

ಈ ಸಂಧರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರು ಶ್ರೀಮತಿ ಕೆಂಚವ್ವ ಕೆಂಚಪ್ಪ ತಳಗೇರಿ, ಅಶೋಕ ತಳಗೇರಿ, ಮಾಜಿ ಸೈನಿಕರು ವಾಸಪ್ಪ ಕಾಶಬೋವಿ ಸಂಜಿವಮೂರ್ತಿ, ಶಶಿಕುಮಾರ್ ಭಾವಿಮನಿ, ಸಂಜೀವ ಮೂರ್ತಿ, ಗವಿಸಿದ್ದಪ್ಪ ಹಾದಿಮನಿ, ಅಶೋಕ ಮಾನೆ, ಮುದಕೇಶ ತಳಗೇರಿ, ಗವಿಯಪ್ಪ ಮಠದ, ಹನಮಂತ ಎಂ, ಮಲ್ಲಿಕಾರ್ಜುನ ಗೌಡಣ್ಣವರ, ಶಿವಾನಂದ ಬಂಡಿ, ಕುಮಾರ ಗೌಡಣ್ಣವರ, ಮಂಜುನಾಥ ಸಿದ್ದಣ್ಣವರ, ಮಂಜುನಾಥ ನವಲಗುಂದ, ವಿನಾಯಕ ಕುದುರಿ, ಮುತ್ತುರಾಜ ಬಿಂಕದಕಟ್ಟಿ, ಸುರೇಶ್ ತಲ್ಲೂರ, ಇನ್ನೂ ಅನೇಕರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...