ಗದಗ | ಕಾನೂನು ಸಚಿವ ಎಚ್ ಕೆ ಪಾಟೀಲ್ ಅವರ ಪತ್ರಕ್ಕೆ ನಿಮ್ಮ ಪ್ರತಿಕ್ರಿಯೆ ಏನು? ಸಿಎಂಗೆ ಸಂಸದ ಬಸವರಾಜ ಬೊಮ್ಮಾಯಿ ಪ್ರಶ್ನೆ

Date:

“ಅಕ್ರಮ ಗಣಿಗಾರಿಕೆ ಕುರಿತು ಸರ್ಕಾರದ ಕ್ರಮದ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿರುವ ಕಾನೂನು ಸಚಿವ ಎಚ್ ಕೆ ಪಾಟೀಲ್ ಅವರ ಪತ್ರಕ್ಕೆ ನಿಮ್ಮ ಪ್ರತಿಕ್ರಿಯೆ ಏನು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಸದ ಬಸವರಾಜ ಬೊಮ್ಮಾಯಿಯವರು ಭಾನುವಾರ ಪ್ರಶ್ನಿಸಿದ್ದಾರೆ.

ಗದಗ ಪಟ್ಟಣದಲ್ಲಿ ಭಾನುವಾರ ಎಚ್‌ಎಸ್‌ಎಲ್ ಟೈಲ್ಸ್ ಮತ್ತು ಗ್ರಾನೈಟ್ಸ್ ಶೋ ರೂಂ ಉದ್ಘಾಟಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಹೆಚ್.ಕೆ.ಪಾಟೀಲ್ ಅವರು, ಗಣಿಗಾರಿಕೆಯಲ್ಲಿ ದಾಖಲಾಗಿರುವ ಸುಮಾರು ಶೇಕಡ 90 ರಷ್ಟು ಪ್ರಕರಣಗಳು ಇನ್ನೂ ಇತ್ಯರ್ಥವಾಗಿಲ್ಲ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಸ್ತುತ ಇರುವುದು ಅವರದೇ ಕಾಂಗ್ರೆಸ್ ಸರ್ಕಾರ. ಪಾಟೀಲ್ ಕೂಡ ಸರ್ಕಾರದ ಸಂಪುಟದ ಸದಸ್ಯರು. ಈಗ, ಅವರದೇ ಸಚಿವರೊಬ್ಬರು ಎತ್ತಿರುವ ಪ್ರಕರಣಕ್ಕೆ ಸಿಎಂ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡಲು ರಾಜ್ಯದ ಜನರು ಕುತೂಹಲದಿಂದ ಕಾಯುತ್ತಿದ್ದಾರೆ” ಎಂದು ಹೇಳಿದರು.

“ವಿಶೇಷ ನ್ಯಾಯಾಲಯ ಮಾಡಬೇಕು, ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಎಚ್‌.ಕೆ.ಪಾಟೀಲ ಹೇಳಿದ್ದಾರೆ. ಈಗಾಗಲೇ ಹಲವಾರು ಪ್ರಕರಣಗಳು ನೋಂದಣಿಯಾಗಿ ಎಸ್‌ಐಟಿ ರಚನೆ ಆಗಿದೆ. ಸಿಬಿಐ ತನಿಖೆ ನಡೆಯುತ್ತಿದೆ. ಎಸ್‌ಐಟಿ ಮುಖ್ಯಸ್ಥರ ಮೇಲೆ ಹಲವಾರು ಆರೋಪಗಳು ಕೇಳಿ ಬಂದಿವೆ. ಈಗ ಯಾವ ರೀತಿ ತನಿಖೆ ಮಾಡುತ್ತಾರೆ ನೋಡೋಣ” ಎಂದು ತಿಳಿಸಿದರು.

“ಸಚಿವ ಎಚ್‌.ಕೆ.ಪಾಟೀಲ 2017-18ರ ಪೂರ್ವದ ಪ್ರಕರಣಗಳ ಬಗ್ಗೆ ಮಾತ್ರ ಚರ್ಚೆ ಮಾಡಿದ್ದಾರೆ. ಸಿದ್ದರಾಮಯ್ಯ ಸಿಎಂ ಇದ್ದಾಗ ಇಡೀ ದೇಶದಲ್ಲಿ ಗಣಿಗಾರಿಕೆಯನ್ನು ಇ ಹರಾಜು ಮಾಡಬೇಕು ಅಂತ ಹೇಳಿ ಕೇಂದ್ರ ಸರ್ಕಾರ ಕಾನೂನು ಬದಲಾವಣೆ ಮಾಡಿತು. ಆದರೆ, ಕೇಂದ್ರ ಸರ್ಕಾರ ಕಾನೂನು ಜಾರಿ ಮಾಡುವ ಹಿಂದಿನ ದಿವಸದಲ್ಲಿ ರಾಜ್ಯ ಸರ್ಕಾರ ತಮಗೆ ಬೇಕಾದವರಿಗೆ ಗಣಿ ಗುತ್ತಿಗೆ ನವೀಕರಣ ಮಾಡಿತ್ತು. ಅವುಗಳ ಬಗ್ಗೆಯೂ ತನಿಖೆ ಮಾಡಲು ಎಚ್‌.ಕೆ.ಪಾಟೀಲ ಒಪ್ಪುತ್ತಾರೆಯೇ?” ಎಂದು ಸವಾಲು ಹಾಕಿದರು.

“ಆಳಂದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ ಮನೆ ಹಂಚಿಕೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಕುರಿತಾಗಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿ, ಬಿ.ಆರ್.ಪಾಟೀಲ ಹಲವಾರು ವಿಚಾರ ಎತ್ತುತ್ತಾರೆ. ಆದರೆ, ಅವರ ಮಾತಿಗೆ ಕಾಂಗ್ರೆಸ್‌ನವರು ಮರ್ಯಾದೆ ಕೊಡುತ್ತಿಲ್ಲ. ಭ್ರಷ್ಟಾಚಾರದ ವಿರುದ್ಧ ಮಾತನಾಡುವವರಿಗೆ ಕಾಂಗ್ರೆಸ್‌ನಲ್ಲಿ ಮರ್ಯಾದೆ ಇಲ್ಲ ಎನ್ನುವುದು ಸ್ಪಷ್ಟವಾಗಿದೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...