ಗದಗ  | ಲಕ್ಷ್ಮೇಶ್ವರ ಪಟ್ಟಣದ ಶಾಂತಿ, ಸೌಹಾರ್ದತೆ ಕದಡಲು ಬಿಡುವುದಿಲ್ಲ: ಪಕೀರೇಶ ಮ್ಯಾಟಣ್ಣನವರ

Date:

ಲಕ್ಷ್ಮೇಶ್ವರ ಪಟ್ಟಣ ಶಾಂತಿ, ಸೌಹಾರ್ದತೆಯಿಂದ ಕೂಡಿದ್ದು, ಇದನ್ನು ಕದಡಲು ನಾವು ಬಿಡುವುದಿಲ್ಲ. ಕ್ಷುಲ್ಲಕ ಕಾರಣಕ್ಕಾಗಿ ಲಕ್ಷ್ಮೇಶ್ವರ ಬಂದ್ ಮಾಡುವುದು ಸರಿಯಲ್ಲ ಎಂದು ಸಾಮಾಜಿಕ ಹೋರಾಟಗಾರ ಫಕಿರೇಶ ಮ್ಯಾಟಣ್ಣನವರ ಆಕ್ಷೇಪ ವ್ಯಕ್ತಪಡಿಸಿದರು.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶ್ರೀರಾಮ ಸೇನೆಯ ಮುಖಂಡ ರಾಜು ಖಾನಾಪೂರ ಲಕ್ಷ್ಮೇಶ್ವರ ಬಂದ್‌ಗೆ ಕರೆ ನೀಡಿರುವುದನ್ನು ಖಂಡಿಸಿ, ಪ್ರಗತಿಪರ ಮುಖಂಡರು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

“ಲಕ್ಷ್ಮೇಶ್ವರ ಬಂದ್‌ಗೆ ಕರೆ ನೀಡಿರುವುದು ಕಾನೂನು ಬಾಹಿರವಾದದ್ದು. ಇದರಿಂದ ಇಡೀ ನಗರವೇ ತಲೆ ತಗ್ಗಿಸುವಂತಹದ್ದು. ಗೋಶಾವಿ ಸಮಾಜದ ಯುವಕ ಹಾಗೂ ಮುಸ್ಲಿಂ ಯುವಕನ ನಡುವೆ ನಡೆದ ಕ್ಷುಲ್ಲಕ ಜಗಳವನ್ನೇ ಕಾರಣವಾಗಿಟ್ಟುಕೊಂಡು ಶ್ರೀರಾಮ ಸೇನೆಯ ಜಿಲ್ಲಾಧ್ಯಕ್ಷ ಬಂದ್‌ಗೆ ಕರೆ ನೀಡಿರುವುದು ಸರಿಯಲ್ಲ. ಇದರಿಂದ ನಗರದಲ್ಲಿ ಶಾಂತಿ ಕದಡುತ್ತದೆ. ಯಾವುದೇ ಕಾರಣಕ್ಕೂ ನಗರದಲ್ಲಿ ಸೌಹಾರ್ದತೆಗೆ ಧಕ್ಕೆಯಾಗಲು ಬಿಡುವುದಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹಾಸನ | ಜಲಸಂಪನ್ಮೂಲ ಇಲಾಖೆಯಿಂದ ಕಳಪೆ ಕಾಮಗಾರಿ; ಸೂಕ್ತ ತನಿಖೆಗೆ ಜಿ ದೇವರಾಜೇಗೌಡ ಒತ್ತಾಯ

“ಬಂದ್‌ಗೆ ಕರೆ ನೀಡಿದ ವ್ಯಕ್ತಿ ಕೂಡಲೇ ಲಕ್ಷ್ಮೇಶ್ವರ ಜನತೆಗೆ ಕ್ಷಮೆಯಾಚಿಸಬೇಕು. ಇಲ್ಲದಿದ್ದಲ್ಲಿ ಪೊಲೀಸರು ಬಂಧಿಸಬೇಕು” ಎಂದು ಆಗ್ರಹಿಸಿದರು.

ಪ್ರಗತಿಪರ ಚಿಂತಕರು ಸುರೇಶ್ ನಂದೆಣ್ಣವರ, ದಲಿತಪರ ನಾಯಕ ರಾಮಣ್ಣ ಲಮಾಣಿ, ಕೋಟೇಪ್ಪ ವರ್ದಿಯವರ, ತಿಪ್ಪಣ್ಣ ಶಂಶಿ, ಸೋಮಣ್ಣ ಬೆಟಗೇರಿ, ಜಗದೀಶ ಹುಲಿಗೆಮ್ಮನವರ, ನೀಲಪ್ಪ ಶೇರಸೂರಿ, ಪದ್ಮರಾಜ ಪಾಟೀಲ್, ಶರಣಪ್ಪ ಗೋಡಿ, ಬಾಬಣ್ಣ ಅಳವಂಡಿ, ಗಿರೀಶ್ ಕಲ್ಮಠ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...