ಸರ್ಕಾರದ ಆದೇಶದ ಅನ್ವಯ ಪ್ರತಿ ವರ್ಷದಂತೆ ಈ ವರ್ಷವು ಡಿಸೆಂಬರ್ 29 ರಂದು ನಡೆಯುವ ರಾಷ್ಟ್ರಕವಿ ಕುವೆಂಪು ಜನ್ಮದಿನದ ನಿಮಿತ್ಯ ವಿಶ್ವಮಾನವ ದಿನಾಚರಣೆ ಪ್ರಯುಕ್ತ ಡಿಸೆಂಬರ್ 23 ರಂದು ಬೆಳಿಗ್ಗೆ:11.30 ಗಂಟೆಗೆ ಪೂರ್ವಭಾವಿ ಸಭೆ ಕರೆಯಲಾಗಿದೆ.
ಜಿಲ್ಲಾ ಅಪರ ಜಿಲ್ಲಾಧಿಕಾರಿಗಳು, ಇವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ. ಸಭೆಗೆ ಆಗಮಿಸಿ ಸಲಹೆ/ಅಭಿಪ್ರಾಯ ನೀಡಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಸವರಾಜ ಬಳ್ಳಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





