ಗದಗ | ವಚನ ಸಾಹಿತ್ಯದ ತತ್ವಗಳನ್ನು ಯುವಜನಾಂಗ ಮೈಗೂಡಿಸಿಕೊಳ್ಳಬೇಕು: ಸಿದ್ಧರಾಮ ಮಹಾಸ್ವಾಮಿ 

Date:

ವಚನ ಸಾಹಿತ್ಯದ ತತ್ವಗಳನ್ನು ಅರಿತು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಕಾಯಕ, ದಾಸೋಹ ಸಿದ್ಧಾಂತಗಳಡಿ ನವಸಮಾಜ ನಿರ್ಮಾಣವಾಗಬೇಕು ಎಂದು ತೋಂಟದಾರ್ಯ ಸಂಸ್ಥಾನ ಮಠದ ಜಗದ್ಗುರು ಡಾ.ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಹೇಳಿದರು.

ಗದಗ ನಗರದ  ಶ್ರೀ ಜಗದ್ಗುರು ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರುಗಳ ಸಹಯೋಗದಲ್ಲಿ ಡಾ. ಫ ಗು ಹಳಕಟ್ಟಿಯವರ ಜನ್ಮದಿನದ ನಿಮಿತ್ಯ ನಡೆದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮದಲ್ಲಿ ದಿವ್ಯಸಾನಿಧ್ಯ ವಹಿಸಿ ಮಾತನಾಡಿದರು.

“ಸಂಶೋಧಕ ಮತ್ತು ಸಾಹಿತ್ಯ ಪ್ರಚಾರಕ ಡಾ ಫ ಗು ಹಳಕಟ್ಟಿಯವರು ವಕೀಲ ವೃತ್ತಿ ನಿರ್ವಹಿಸುತ್ತಿದ್ದರು. ಅವರ ವಚನ ಸಾಹಿತ್ಯದ ಮೇಲಿನ ಕಾಳಜಿ ಇಡೀ ರಾಜ್ಯಾದ್ಯಂತ ಅಲೆದಾಡಿ 12ನೇ ಶತಮಾನದ ಅನೇಕ ವಚನಗಳನ್ನು ಸಂಗ್ರಹಿಸಿ ವಚನ ಸಾಹಿತ್ಯವನ್ನು ಶಾಶ್ವತವಾಗಿ ಉಳಿಸುವಲ್ಲಿ ಅವರ ಪಾತ್ರ ಮಹತ್ತರವಾದದ್ದು. ಬ್ರಿಟಿಷರ ಕಾಲದಲ್ಲಿ ಕನ್ನಡದ ಅತ್ಯಮೂಲ್ಯ ವಚನ ಸಾಹಿತ್ಯವನ್ನು ಪ್ರಕಟಿಸುವುದು ಸುಲಭ ಕಾರ್ಯವಾಗಿದ್ದಿಲ್ಲ. ಅವರಿಗೆ ಎದುರಾದ ಅಡೆ ತಡೆಗಳನ್ನು ಎದುರಿಸಿ ಸಂಗ್ರಹಿಸಿದ ವಚನಗಳನ್ನು ಮುದ್ರಿಸಲು ತಮ್ಮ ಸ್ವಂತ ಮನೆಯನ್ನು ಮಾರಿರುವುದು ಅವರ ದೃಢವಾದ ಇಚ್ಛಾಶಕ್ತಿ ಎಂತಹದ್ದೆಂದು ತಿಳಿಯುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವೈಯಕ್ತಿಕ ಜೀವನದಲ್ಲಿ ಹಲವಾರು ತೊಂದರೆಗಳಿದ್ದರೂ ಅವುಗಳನ್ನು ಲೆಕ್ಕಿಸದೆ ವಚನಗಳನ್ನು ಸಂಗ್ರಹಿಸುವಲ್ಲಿ ನಿರತರಾಗಿ ಜನಸಾಮಾನ್ಯರ ಜೀವನ ಬದಲಾಯಿಸುವಲ್ಲಿ ಮಹತ್ತರ ಪಾತ್ರ ಹೊಂದಿದ್ದಾರೆ. ಅವರ ಉನ್ನತ ವ್ಯಕ್ತಿತ್ವ ಮತ್ತು ಅವರ ವಚನ ಸಾಹಿತ್ಯದ ಮೇಲಿರುವ ಶ್ರದ್ಧೆಯನ್ನು ಗಮನಿಸಿದ ಮಠಾಧೀಶರು ಫ ಗು ಹಳಕಟ್ಟಿಯವರನ್ನು ಒಬ್ಬ ಶರಣರಂತೆ ಭಾವಿಸಿ ತಮ್ಮ ಸಂಪೂರ್ಣ ಬೆಂಬಲ ಮತ್ತು ಸಹಕಾರವನ್ನು ನೀಡಿದ್ದಾರೆ. ಅವರ ಸತತ ಪರಿಶ್ರಮದಿಂದ ಹೊರಬಂದ ಅವರ ವಚನ ಸಾಹಿತ್ಯದ ಸಂಗ್ರಹ ನಮಗೆಲ್ಲರಿಗೂ ಮಾದರಿಯಾಗಿದೆ” ಎಂದು ತಿಳಿಸಿದರು.

“ಕೇವಲ ಪುಸ್ತಕಕ್ಕೆ ಸೀಮಿತವಾಗದೆ ಪ್ರತಿಯೊಬ್ಬರ ಮನೆಮನೆಗೆ ತಲುಪುವ ಕಾರ್ಯವಾಗಬೇಕು. ಯುವಜನಾಂಗದ ವಚನ ಸಾಹಿತ್ಯವನ್ನು ಅರಿತು ತಮ್ಮ ಜೀವನವನ್ನು ಕಟ್ಟಿಕೊಳ್ಳುವುದರ ಜತೆಗೆ ಉತ್ತಮ ಸಮಾಜ ನಿರ್ಮಾಣ ಮಾಡುವ ಕಾರ್ಯವಾಗಬೇಕು” ಎಂದು  ಜಗದ್ಗುರು ಸಿದ್ಧರಾಮ ಮಹಾಸ್ವಾಮಿ ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ ಕಾರ್ಯಕ್ರಮ ಉದ್ಘಾಟಿಸಿ ಮಾತನಡಿ, ವಚನ ಸಾಹಿತ್ಯ ದಿನಾಚರಣೆಯ ಶುಭಾಶಯ ಕೋರಿದ ಅವರು, “ಕನ್ನಡ ಸಾಹಿತ್ಯದಲ್ಲಿ ವಚನ ಸಾಹಿತ್ಯವು ಜನಸಾಮಾನ್ಯರ ಜೀವನ ಕಟ್ಟುವಲ್ಲಿ ಮಹತ್ತರ ಪಾತ್ರವನ್ನು ವಹಿಸದೆ ಇಂತಹ ವಚನಗಳನ್ನು ಶ್ರಮವಹಿಸಿ ಸಂಗ್ರಹಿಸಿದ ಫ ಗು ಹಳಕಟ್ಟಿಯವರ ಕಾರ್ಯ ಶ್ಲಾಘನೀಯವಾದದ್ದು. ಅರ್ಥಪೂರ್ಣ, ಅತ್ಯಮೂಲ್ಯ ವಚನಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ” ಎಂದು ಹೇಳಿದರು.

ವಿಜಯಪುರದ ಸಂಶೋಧನಾ ಕೇಂದ್ರದ ಕಾರ್ಯದರ್ಶಿ ಡಾ. ಎಂ ಎಸ್ ಮದಬಾವಿ ಉಪನ್ಯಾಸಕರಾಗಿ ಆಗಮಿಸಿ ಮಾತನಾಡಿ, “ಡಾ ಫ ಗು ಹಳಕಟ್ಟಿಯವರು ಧಾರವಾಡದಲ್ಲಿ ಹುಟ್ಟಿ ವಿದ್ಯಾಭ್ಯಾಸ ಮುಗಿಸಿದ ನಂತರ ಬಿಜಾಪುರದಲ್ಲಿ ತಮ್ಮ ವಕೀಲ ವೃತ್ತಿ ಪ್ರಾರಂಭಿಸಿದರು. ವಚನ ಸಾಹಿತ್ಯದ ಮೇಲಿನ ಅಪಾರ ಆಸಕ್ತಿಯಿಂದ ತಾಳೆಗರಿಯ ಪ್ರಾಚೀನ ಗ್ರಂಥಗಳನ್ನು ಸಂಪಾದಿಸಲು ಪ್ರಾಂಭಿಸಿ ವಚನ ಸಾಹಿತ್ಯವನ್ನು ಉಳಿಸಲು ಪಣತೊಟ್ಟರು. 1920ರ ಸಮಾರಿಗೆ ಸಾವಿರಾರು ಗ್ರಂಥಗಳ ಸಂಪಾದನೆ ಜತೆಗೆ ವಚನ ಸಂಗ್ರಹವನ್ನು ಮಾಡಿ ಸರ್ಕಾರ ಯುಜಿಸಿ ಸಾರ್ವಜನಿಕ ಸಂಸ್ಥೆಗಳ ನೆರವಿಲ್ಲದೆ ಹಲವಾರು ವಚನಕಾರರನ್ನು ಬೆಳಕಿಗೆ ತರುವಲ್ಲಿ ಅವರು ಮಾಡಿದ ಮಹತ್ಕಾರ್ಯ ಅಪಾರವಾಗಿದ್ದು, ಇತಿಹಾಸ‌ ನೆನಪಿಡುವಂತದಾಗಿದೆ” ಎಂದರು.

“ಕ್ರಿಶ್ಚಿಯನ್ ಮಿಷಿನರಿಯವರು ಇವರ ಗ್ರಂಥವನ್ನು ಮುದ್ರಿಸಲು ನಿರಾಕರಿಸಿದಾಗ ಮನೆಯನ್ನೇ ಮಾರಿ 1926ರಲ್ಲಿ ಮುದ್ರಣಾಲಯ ಸ್ಥಾಪಿಸಿ ಹಿತಚಿಂತಕ ಮುದ್ರಣಾಲಯವೆಂದು ನಾಮಕರಣಗೊಳಿಸಿ ಮುದ್ರಣ ಕಾರ್ಯ ಆರಂಭ ಮಾಡಿ, ಶಿವಾನುಭವ ಪತ್ರಿಕೆ ಕಾರ್ಯ ಪ್ರಾರಂಭಿಸಿ, ವಚನ ಸಾಹಿತ್ಯ ಶಾಶ್ವತವಾಗಿ ಉಳಿಯುವಂತೆ ಮಾಡಿದರು. ಮೂಲಗ್ರಂಥ, ಟೀಕಾಗ್ರಂಥಾ, ಸ್ವತಂತ್ರಗ್ರಂಥ, ಪಠ್ಯ ಪುಸ್ತಕ, ಗದ್ಯಗ್ರಂಥ, ಐತಿಹಾಸಿಕ ಗ್ರಂಥ, ಧಾರ್ಮಿಕ ಪುರುಷರ ಚರಿತ್ರೆ ಸೇರಿದಂತೆ 165 ಗ್ರಂಥಗಳ ಪ್ರಕಟಣೆ ಮಾಡಿದ ಕೀರ್ತಿ ಇವರಿಗೆ ಸಲ್ಲುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಗುರುಪುರ ಸಮುದಾಯ ಆರೋಗ್ಯಾಧಿಕಾರಿ ಡೆಂಘೀ ಜ್ವರಕ್ಕೆ ಬಲಿ

“1926ರಲ್ಲಿ ಬಳ್ಳಾರಿಯಲ್ಲಿ ನಡೆದ 12ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. 1928ರ ಜೂನ್‍ನಲ್ಲಿ ನಡೆದ ಕರ್ನಾಟಕ ಏಕೀಕರಣ ಪರಿಷತ್ತಿನ 3ನೇ ಅಧ್ಯಕ್ಷ ಪದವಿ ಗೌರವ, ಕರ್ನಾಟಕ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್, ಬ್ರಿಟಿಷ್ ಸರ್ಕಾರದಿಂದ ರಾವ್ ಬಹದ್ದೂರ್ ಮತ್ತು ರಾವ್ ಸಾಹೇಬ ಪ್ರಶಸ್ತಿ, ವಚನ ಶಾಸ್ತ್ರ ಪ್ರವೀಣ, ವಚನ ಶಾಸ್ತ್ರ ಪಿತಾಮಹ ಮುಂತಾದ ಗೌರವಗಳಿಗೆ ಪಾತ್ರರಾದವರು” ಎಂದು  ಫ‌ ಗು ಹಳಕಟ್ಟಿಯವರ ಜೀವನ ಮತ್ತು ಸಾಧನೆಯ ಪ್ರಮುಖ ವಿಷಯಗಳನ್ನು ಉಪನ್ಯಾಸ ಮಾಡಿದರು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್‌ಸಾಬ ಬಬರ್ಜಿ, ಜಿ ಪಂ ಉಪಕಾರ್ಯದರ್ಶಿ ಸಿ ಆರ್ ಮುಂಡರಗಿ ಸೇರಿದಂತೆ ಇತರೆ ಗಣ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...