ಕರ್ನಾಟಕಕ್ಕೆ 50ರ ಸಂಭ್ರಮ | 31 ಅಡಿ ಎತ್ತರದ ಸ್ತೂಪ ನಿರ್ಮಾಣ: ಸಚಿವ ಡಾ. ಎಚ್.ಕೆ ಪಾಟೀಲ

Date:

ಐತಿಹಾಸಿಕ ಕಾರ್ಯಕ್ರಮ ನಡೆದಾಗ ವಿಶೇಷ ಗುರುತುಗಳನ್ನು ನಿರ್ಮಿಸಬೇಕು. ಆದ್ದರಿಂದ ಕರ್ನಾಟಕ ಸಂಭ್ರಮ-50ರ ಆಚರಣೆಯನ್ನು ಅಚ್ಚಳಿಯದ ಹಾಗೆ ನೆನಪಿನಲ್ಲಿಟ್ಟುಕೊಳ್ಳಲು ಗದಗ ಜಿಲ್ಲಾಡಳಿತವು 31 ಅಡಿ ಎತ್ತರದ ಸ್ತೂಪ ನಿರ್ಮಿಸಲು ನಿರ್ಣಯ ಕೈಗೊಂಡಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳ ಸಚಿವ ಡಾ. ಎಚ್.ಕೆ ಪಾಟೀಲ ತಿಳಿಸಿದ್ದಾರೆ.

ಗದಗದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಚಿವರು ಮಾತನಾಡಿದರು. “ಸ್ತೂಪ ನಿರ್ಮಾಣ ಮಾಡಬೇಕು ಎನ್ನುವ ಕಲ್ಪನೆ ಹಿಂದಿನ ಕಾಲದಿಂದ ಇದ್ದರೂ, ಅನಾವರಣಗೊಳಿಸಲು ಸಾಧ್ಯವಾಗಿರಲಿಲ್ಲ. ಸ್ತೂಪದಲ್ಲಿ 1973 ಹಾಗೂ 2023ರ ಐತಿಹಾಸಿಕ  ಘಟನೆಗಳನ್ನು ಹಾಗೂ ಇತರೆ ಪ್ರಮುಖ ಮಾಹಿತಿಗಳನ್ನು ದಾಖಲಾಗಿರುತ್ತದೆ. ನವೆಂಬರ 3 ರಂದು ಸಿಎಂ ಸಿದ್ದರಾಮಯ್ಯ ಅವರು ಪಂ.ಪುಟ್ಟರಾಜ ಗವಾಯಿಗಳ ವೃತ್ತದಲ್ಲಿನ ಈ ಸ್ತೂಪವನ್ನು ಅನಾವರಣಗೊಳಿಸಲಿದ್ದಾರೆ” ಎಂದರು.

“ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂಬ ಹೆಸರು ನಾಮಕರಣ ಮಾಡಬೇಕು ಎಂಬ ದಿಸೆಯಲ್ಲಿ ಗದಗ ಭಾಗದವರು ವಿಶೇಷ ಪ್ರಯತ್ನ ಮಾಡಿದ್ದಾರೆ. ಕುಮಾರವ್ಯಾಸ ಅವರು ತಮ್ಮ ಕಾವ್ಯಕ್ಕೆ ಕರ್ನಾಟಕ ಭಾರತ ಕಥಾಮಂಜರಿ ಹೆಸರು ನೀಡಿದ್ದರೆ, ದುರ್ಗಸಿಂಹ ಹಾಗೂ ಅಲೂರು ವೆಂಕಟರಾಯರು ಕರ್ನಾಟಕ ಹೆಸರನ್ನು ಉಲ್ಲೇಖಿಸಿದ್ದಾರೆ. ಜಿಲ್ಲೆಯ ಅಂದಿನ ಪ್ರಮುಖರಾದ ಅಂದಾನಪ್ಪ ದೊಡ್ಡಮೇಟಿ, ಕೆ.ಎಚ್. ಪಾಟೀಲ, ಎಂ.ಎಂ. ಕಣವಿ, ಸೇರಿ ಹಲವರು ಕೆಲಸ ಕರ್ನಾಟಕ ಹೆಸರು ನಾಮಕರಣವಾಗಲು ಶ್ರಮಿಸಿದ್ದಾರೆ. ಅಲ್ಲದೇ, ಇಂದಿರಾ ಗಾಂಧಿ, ರಾಜೀವ ಗಾಂಧಿ ಹಾಗೂ ಸಾಯಿ ಬಾಬಾ ಅವರು ಸಾಕ್ಷಿಯಾಗಿರುವಂತಹ ಸತ್ವಯುತ ದಿ. ಕಾಟನ್ ಸೇಲ್ ಸೊಸೈಟಿ ಆವರಣದ ನೆಲದಲ್ಲಿ ಐತಿಹಾಸಿಕ ಕಾರ್ಯಕ್ರಮ ನಡೆಯುತ್ತಿದ್ದು, ಸಾರ್ವಜನಿಕರ ಸಹಭಾಗಿತ್ವ ಪ್ರಾಮುಖ್ಯತೆ ಪಡೆದಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದ ಒಂದು ಕೊಟಿಗೂ ಅಧಿಕ ಬಡ ಕುಟುಂಬಗಳನ್ನು ಬಡತನ ರೇಖೆಗಿಂತ ಮೇಲೆತ್ತುವ ಐದು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿದ ನಂತರ ಪ್ರಥಮವಾಗಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಜಿಲ್ಲೆಯಲ್ಲಿ ಜರುಗುತ್ತಿರುವ ಕನ್ನಡ ಜಾತ್ರೆಗೆ ಆಗಮಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು, ಸಾಹಿತಿಗಳು, ಸಾರ್ವಜನಿಕರು ಭಾಗವಹಿಸುವದರ ಮೂಲಕ ಕನ್ನಡ ಜಾತ್ರೆಯನ್ನು ಯಶಸ್ವಿಗೊಳಸಬೇಕು” ಎಂದು ಸಚಿವ ಎಚ್.ಕೆ.ಪಾಟೀಲ ಮನವಿ ಮಾಡಿದರು.

“ನಾಡಿನ ಸಂಸ್ಕೃತಿ ಇತಿಹಾಸ ಸಾರುವ 25 ಸಾವಿರ ಸ್ಮಾರಕಗಳಿವೆ. 500 ಕ್ಕೂ ಹೆಚ್ಚು ಸ್ಮಾರಕಗಳನ್ನು ಸರ್ಕಾರ ಘೋಷಿಸಿದ್ದು. 300 ಸ್ಮಾರಕಗಳ ರಕ್ಷಣೆಗೆ ನಿಗಾ ಇರಿಸಲಾಗಿದೆ. 200 ಕ್ಕೂ ಹೆಚ್ಚು ಸ್ಮಾರಕಗಳ ರಕ್ಷಣೆ ಆಗಬೇಕಾಗಿದೆ. ಇಂತಹ ಇತಿಹಾಸವನ್ನು ಸಾರುವ ಸ್ಮಾರಕಗಳ ರಕ್ಷಣೆಗೆ ನವೆಂಬರನಲ್ಲಿ ಘೋಷಣೆ ಮಾಡಲಿದ್ದೇವೆ ಎಂದರು. ಈಗಾಗಲೇ ಸ್ಮಾರಕ ದತ್ತು ಸ್ವೀಕಾರ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿಗಳು ಚಾಲನೆ ನೀಡಿದ್ದು ರಾಜ್ಯದಲ್ಲಿನ ಸ್ಮಾರಕಗಳ ದತ್ತು ಸ್ವೀಕಾರ ಕುರಿತು ಅನಿವಾಸಿ ಭಾರತೀಯರೊಂದಿಗೆ ಸಭೆ ಜರುಗಿಸಿ ಸ್ಮಾರಕಗಳ ದತ್ತು ಸ್ವೀಕಾರ ಕುರಿತು ಮನವಿ ಮಾಡಿರುತ್ತೇನೆ” ಎಂದರು.

ಸುದ್ದಿಗೋಷ್ಠಿಯಲ್ಲಿ ಶಾಸಕ ಜಿ.ಎಸ್. ಪಾಟೀಲ, ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ, ಮಾಜಿ ಸಂಸದ ಐ.ಜಿ.ಸನದಿ, ಸೇರಿದಂತೆ ಗಣ್ಯರಯ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...