ಕರ್ನಾಟಕಕ್ಕೆ 50 ವರ್ಷ | ಭಾವನಾತ್ಮಕ, ಸಾಂಸ್ಕೃತಿಕ ಅವಿಸ್ಮರಣೀಯ ಕಾರ್ಯಕ್ರಮವಾಗಲಿ: ಸಚಿವ ಎಚ್.ಕೆ ಪಾಟೀಲ್

Date:

ಮೈಸೂರು ರಾಜ್ಯವು 1973ರಲ್ಲಿ ಕರ್ನಾಟಕ ಎಂದು ಮರುನಾಮಕರಣವಾಯಿತು. ಮರುನಾಮಕರಣವಾದ ಹಿನ್ನೆಲೆಯಲ್ಲಿ 50ರ ಸಂಭ್ರಮಾಚರಣೆಯನ್ನು ನವೆಂಬರ್ 2ರಿಂದ ವರ್ಷಪೂರ್ತಿ ಆಚರಿಸಲಾಗುವುದು. ಗದಗನಲ್ಲಿ ನವೆಂಬರ್ 3 ರಂದು ಜರುಗುವ ‘ಕರ್ನಾಟಕ ನಾಮಕರಣಕ್ಕೆ 50ರ ಸಂಭ್ರಮ’ ಸಮಾರಂಭವು ಗದಗ ಜನತೆಗೆ ಭಾವನಾತ್ಮಕ, ಸಾಂಸ್ಕೃತಿಕ ಅವಿಸ್ಮರಣೀಯ ಕಾರ್ಯಕ್ರಮವಾಗಿ ಹೊರಹೊಮ್ಮಲಿ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ ಪಾಟೀಲ್ ಹೇಳಿದ್ದಾರೆ.

ಗದಗ ಜಿಲ್ಲಾಡಳಿತ ಭವನದಲ್ಲಿ ನಡೆದ ಕರ್ನಾಟಕ ನಾಮಕರಣಕ್ಕೆ 50ರ ಸಂಭ್ರಮದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. “ಕರ್ನಾಟಕ ನಾಮಕರಣ ಹಾಗೂ ಏಕೀಕರಣದಲ್ಲಿ ಗದಗ ಜಿಲ್ಲೆಯ ಮಹನೀಯರ ಪಾತ್ರ ಮಹತ್ತರವಾಗಿತ್ತು. ಕರ್ನಾಟಕ ನಾಮಕರಣದ ಕುರಿತು ನಿರ್ಣಯ ಗದಗ ಜಿಲ್ಲೆಯಿಂದ ಮಾಡುವ ಮೂಲಕ ಅವಿಸ್ಮರಣೀಯ ಐತಿಹಾಸಿಕ ಮುನ್ನುಡಿ ಬರೆಯಲಾಗಿತ್ತು. ಅಂದು ಗದಗನಲ್ಲಿ ನಡೆದ ಸಮ್ಮೇಳನದಲ್ಲಿ ಮೈಸೂರು ಮಹಾರಾಜರು, ಮುಖ್ಯಮಂತ್ರಿ ಡಿ.ದೇವರಾಜ ಅರಸು ಹಾಗೂ ಸಚಿವರಾದ ಕೆ.ಎಚ್.ಪಾಟೀಲ ಅವರ ನೇತೃತ್ವದಲ್ಲಿ ಸಮ್ಮೇಳನ ಅತ್ಯಂತ ಅಚ್ಚುಕಟ್ಟಾಗಿ ನೆರವೇರಿತು. ಇದೇ ನವೆಂಬರ್ 3 ರಂದು ನಡೆಯುವ ಸಮಾರಂಭವು ಗದಗ ಜನತೆಗೆ ಭಾವನಾತ್ಮಕವಾದ ಸಮಾರಂಭವಾಗಿದೆ. ಇದನ್ನು ಅತ್ಯಂತ ಶಿಸ್ತು ಬದ್ಧವಾಗಿ , ವಿಶಿಷ್ಟ ರೀತಿಯಲ್ಲಿ ಸಂಭ್ರಮಿಸೋಣ” ಎಂದರು.

“ಬೆಳಿಗ್ಗೆ ನಗರದ ವೀರನಾರಾಯಣ ದೇವಸ್ಥಾನ ಆವರಣದಿಂದ ವಿವಿಧ ಕಲಾ ತಂಡಗಳು ಹಾಗೂ ಸ್ತಬ್ಧ ಭಾವಚಿತ್ರ ಗಳ ಮೆರವಣಿಗೆ ಆರಂಭವಾಗಲಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಕರ್ನಾಟಕ 50 ರ ಸಂಭ್ರಮದ ಜ್ಯೋತಿ ಯನ್ನು ಬರ ಮಾಡಿಕೊಂಡು ತಾಯಿ ಭುವನೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ನೆರವೇರಿಸುವ ಮೂಲಕ ಮೆರವಣಿಗೆಗೆ ವಿದ್ಯುಕ್ತಾಗಿ ಚಾಲನೆ ನೀಡುವರು. ಮೆರವಣಿಗೆಯು ವೀರನಾರಾಯಣ ದೇವಸ್ಥಾನದಿಂದ ಆರಂಭವಾಗಿ ಜಾಮಿಯಾ ಮಸೀದಿ, ಬಸವೇಶ್ವರ ಸರ್ಕಲ್, ಕೆ.ಎಚ್.ಪಾಟೀಲ ವೃತ್ತ, ಭೂಮ ರೆಡ್ಡಿ ಸರ್ಕಲ್, ಜನರಲ್ ಕಾರ್ಯಪ್ಪ ಸರ್ಕಲ್ ಮಾರ್ಗವಾಗಿ ಕಾಟನ್ ಸೇಲ್ ಸೊಸೈಟಿ ಅವರಣ ತಲುಪಲಿದೆ. ಮಾರ್ಗದುದ್ದಕ್ಕೂ ಬೀದಿಗಳ ಇಕ್ಕೆಲಗಳಲ್ಲಿ ದೀಪಾಲಂಕಾರ ಮಾಡಬೇಕು. ಜೊತೆಗೆ ಪ್ರಮುಖ ವೃತ್ತಗಳಲ್ಲಿ ದೀಪಾಲಂಕಾರ ಮಾಡಬೇಕು. ನಗರದ ಸ್ವಚ್ಛತೆಗೆ ಆದ್ಯತೆ ವಹಿಸಬೇಕು” ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಗರದಲ್ಲಿರುವ ಕುಮಾರವ್ಯಾಸ ಕಂಬಕ್ಕೆ ವಿಶೇಷ ದೀಪಾಲಂಕಾರ ಮಾಡಬೇಕು. ಜೊತೆಗೆ ಭೀಷ್ಮ ಕೆರೆ ಸೇರಿದಂತೆ ವಿವಿಧೆಡೆ ದೀಪಾಲಂಕಾರ ಕಂಗೊಳಿಸುವಂತಾಗಬೇಕು. ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಬೇಕು. ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿ ಜರುಗುವ ವೇದಿಕೆ ಕಾರ್ಯಕ್ರಮ ಶಿಷ್ಟಾಚಾರ ಪಾಲನೆ, ಸಂಚಾರ ನಿಯಂತ್ರಣ ವ್ಯವಸ್ಥಿತವಾಗಿ ನಿರ್ವಹಿಸಬೇಕು” ಎಂದರು.

ಸಭೆಯಲ್ಲಿ ಅತಿಥಿಗಳ ಆಹ್ವಾನ, ಆಮಂತ್ರಣ ಪತ್ರಿಕೆ, ವೇದಿಕೆ ನಿರ್ಮಾಣ,ಬೀದಿ ಸ್ವಚ್ಛತೆ, ದೀಫಾಲಂಕಾರ, ದೇವಸ್ಥಾನಗಳ ದೀಪಾಲಂಕಾರ, ವೇದಿಕೆ ಕಾರ್ಯಕ್ರಮಕ್ಕೆ ಸಾರ್ವಜನಿಕರನ್ನು ಕರೆತರುವ ಬಗ್ಗೆ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್ , ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್. ನೇಮಗೌಡ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಮ್, ಉಪವಿಭಾಗಾಧಿಕಾರಿ ವೆಂಕಟೇಶ ನಾಯ್ಕ, ತಹಶೀಲ್ದಾರ ಶ್ರೀನಿವಾಸ ಮೂರ್ತಿ, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ರವೀ ಗುಂಜೀಕರ್, ಆಹಾರ ಇಲಾಖೆಯ ಉಪನಿರ್ದೇಶಕ ಗಂಗಪ್ಪ, ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥ ಶಿರಾಳೆ, ಪಶು ಸಂಗೋಫನಾ ಇಲಾಖೆಯ ಉಪನಿರ್ದೇಶಕ ಡಾ.ಹುಲಗಣ್ಣವರ ಅಂಕಿ ಸಂಖ್ಯೆ ಸಂಗ್ರಹಣಾಧಿಕಾರಿ ಎ.ಎ.ಕಂಬಾಳಿಮಠ, ಜಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್.ನೀಲಗುಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ. ಶೆಟ್ಟೆಪ್ಪನವರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ರಮೇಶ ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕನಿರ್ದೇಶಕ ವೀರಯ್ಯ ಸ್ವಾಮಿ, ವಾರ್ತಾಧಿಕಾರಿ ವಸಂತ ಮಡ್ಲೂರ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶರಣು ಗೋಗೇರಿ , ಡಿ.ಡಿ.ಪಿ.ಐ. ಎಂ.ಎ. ರಡ್ಡೇರ ಗಣ್ಯರಾದ ಸಿದ್ದು ಪಾಟೀಲ, ಬಿ.ಬಿ.ಅಸೂಟಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...