ಗದಗ | ಆಯುಷ್ಮಾನ್ ಭಾರತ, ಆರೋಗ್ಯ ಕರ್ನಾಟಕ ಯೋಜನೆ ಸಮರ್ಪಕ ಅನುಷ್ಟಾನಕ್ಕೆ ಜಿಲ್ಲಾಧಿಕಾರಿ ಸೂಚನೆ

Date:

ಆಯುಷ್ಮಾನ್ ಭಾರತ, ಆರೋಗ್ಯ ಕರ್ನಾಟಕ ಯೋಜನೆಯು ಜನಸಾಮಾನ್ಯರಿಗೆ ನಗದುರಹಿತ ಆರೋಗ್ಯ ಚಿಕಿತ್ಸೆ ನೀಡುವ ಮಹತ್ವದ ಯೋಜನೆಯಾಗಿದೆ. ಈ ಯೋಜನೆಯಡಿ ಸೌಲಭ್ಯ ಪಡೆಯಲು ಜನಸಾಮಾನ್ಯರು ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಡ ಪಡೆಯಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಹೇಳಿದರು.

ಗದಗ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ನಡೆದ ಆರೋಗ್ಯ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿ ಸಿಬ್ಬಂದಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. “ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ಬಿ.ಪಿ.ಎಲ್ ಪಡಿತರ ಕುಟುಂಬದ ಪ್ರತಿ ಸದಸ್ಯರಿಗೆ 5 ಲಕ್ಷ ರೂ.ಗಳವರೆಗೆ ಉಚಿತ ಚಿಕಿತ್ಸಾ ಸೌಲಭ್ಯ ಹಾಗೂ ಎ.ಪಿ.ಎಲ್. ಪಡಿತರ ಕುಟುಂಬದ ಪ್ರತಿ ಸದಸ್ಯರಿಗೆ 1.5 ಲಕ್ಷದವರೆಗೆ ನಗದು ರಹಿತ ಆರೋಗ್ಯ ಚಿಕಿತ್ಸೆ ಸೌಲಭ್ಯ ದೊರಕಲಿದೆ” ಎಂದರು.

“ಜಿಲ್ಲೆಯಲ್ಲಿ 9,41,247 ನಿಗದಿಪಡಿಸಿದ ಫಲಾನುಭವಿಗಳಿದ್ದು ಈ ಪೈಕಿ 3,42,290 ಫಲಾನುಭವಿಗಳು ಈಗಾಗಲೇ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಂಡು ಕಾರ್ಡ ಪಡೆಯುವ ಮೂಲಕ ಶೇ 36 ರಷ್ಟು ಪ್ರಗತಿಯಾಗಿದೆ. ಈ ಯೋಜನೆಯ ಪ್ರಯೋಜನವನ್ನು ಜನಸಾಮಾನ್ಯರಿಗೆ ತಿಳಿಸಿ ಜಾಗೃತಿ ಮೂಡಿಸುವ ಮೂಲಕ ಅರ್ಹ ಎಲ್ಲ ಫಲಾನುಭವಿಗಳು ನಿಗದಿತ ದಾಖಲೆ ನೀಡಿ ಕಾರ್ಡ ಪಡೆದು ಉಚಿತ ಆರೋಗ್ಯ ಸೌಲಭ್ಯ ತಮ್ಮದಾಗಿಸಿಕೊಳ್ಳಬೇಕು. ಸಂಬಂಧಿತ ಇಲಾಖೆ ಅಧಿಕಾರಿಗಳು ಕ್ರಿಯಾಶೀಲತೆಯಿಂದ ಕಾರ್ಯನಿರ್ವಹಿಸಬೇಕು” ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ನೀಲಗುಂದ ಅವರು ಮಾತನಾಡಿ, “ನಗದುರಹಿತ ಚಿಕಿತ್ಸೆ ಪಡೆಯುವ ಯೋಜನೆ ಈ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಾಗಿದೆ. ಈ ಯೋಜನೆಯಡಿ 1,650 ವಿವಿಧ ಹಂತದ ಚಿಕಿತ್ಸೆ ನಿಗದಿಪಡಿಸಲಾಗಿದೆ. ಸರ್ಕಾರಿ ಆಸ್ಪತ್ರೆ ಹಾಗೂ ನೊಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು. ಆರೋಗ್ಯ ಕಾರ್ಡ ಪಡೆಯಲು ಹತ್ತಿರದ ಕರ್ನಾಟಕ ಒನ್ ಸಿಎಸ್‍ಸಿ ಸೆಂಟರ್‍ಗಳಲ್ಲಿ ಅರ್ಜಿ ಸಲ್ಲಿಸಿ ಕಾರ್ಡ ಪಡೆಯಬಹುದು ಅಥವಾ ಫಲಾನುಭವಿಗಳೇ ನೇರವಾಗಿ ಆಯುಷ್ಮಾನ್ ಮೊಬೈಲ್ ಆಪ್ ಮೂಲಕ ನೊಂದಾಯಿಸಿ ಕಾರ್ಡ್ ಪಡೆಯಬಹುದಾಗಿದೆ” ಎಂದರು.

ಆಯುಷ್ಮಾನ್ ಆಪ್: ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯ ಸೌಲಭ್ಯ ಹೊಂದಲು ಫಲಾನುಭವಿಗಳು ಮೊದಲು ಕಾರ್ಡ ಪಡೆಯಬೇಕು. ಆಯುಷ್ಮಾನ್ ಆಪ್ ಪ್ಲೇಸ್ಟೋರ್ ನಿಂದ ಡೌನ್‍ಲೋಡ್ ಮಾಡಿಕೊಂಡು ಆಧಾರ ಲಿಂಕ್ ಇರುವ ಮೊಬೈಲ್ ಸಂಖ್ಯೆ ಬಳಸಿ ನೊಂದಾಯಿಸಿಕೊಳ್ಳಬಹುದಾಗಿದೆ.

ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು, ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಕಾಲೇಜು ಪ್ರಾಂಶುಪಾಲರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...