ಗದಗ | ವಿದ್ಯುನ್ಮಾನ ಮತಯಂತ್ರದ ಪ್ರಾತ್ಯಕ್ಷಿಕೆಗೆ ಜಿಲ್ಲಾಧಿಕಾರಿ ಚಾಲನೆ

Date:

ಅರ್ಹ ಪ್ರತಿ ಮತದಾರರು ತಮ್ಮ ಮತದಾನ ಮಾಡುವ ಪ್ರಕ್ರಿಯೆಯ ಕುರಿತು ವಿದ್ಯುನ್ಮಾನ ಮತಯಂತ್ರದ ಪ್ರಾತ್ಯಕ್ಷಿಕೆಯನ್ನು ಅರಿಯಬೇಕು. ಚುನಾವಣೆಯ ಮತದಾನದ ದಿನದಂದು ಸರಿಯಾಗಿ ಮತ ಚಲಾಯಿಸುವ ಮೂಲಕ ಸುಭದ್ರ ಸರ್ಕಾರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಗದಗ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಹೇಳಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಗದಗ ನಗರದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ವಿದ್ಯುನ್ಮಾನ ಮತಯಂತ್ರ ಪ್ರಾತ್ಯಕ್ಷಿಕೆ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ವಿದ್ಯುನ್ಮಾನ ಮತಯಂತ್ರದಲ್ಲಿ ಮತದಾನ ಮಾಡಿದ ನಂತರ ಅರ್ಹ ಮತದಾರರು ಚಲಾಯಿಸುವ ಮತವು ಚಲಾಯಿಸಿದ ಪಕ್ಷ ಅಥವಾ ವ್ಯಕ್ತಿಗೆ ದಾಖಲಾದ ಬಗ್ಗೆ ಖಾತರಿಪಡಿಸಿಕೊಳ್ಳಲು ವಿ.ವಿ.ಪ್ಯಾಟ ಯಂತ್ರ ಸಹಕಾರಿಯಾಗಿದೆ. ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿಪ್ಯಾಟ್ ಮತಯಂತ್ರಗಳು ಮತದಾನ ಪ್ರಕ್ರಿಯೆಯಲ್ಲಿ ವಿಶ್ವಾಸಾರ್ಹತೆಯನ್ನು ಮೂಡಿಸಲಿವೆ. ಯಾವುದೇ ಅಂಜಿಕೆ, ಭಯ, ನಿಷ್ಕಾಳಜಿ ತೋರದೇ ಪ್ರತಿ ಅರ್ಹ ಮತದಾರನು ತನ್ನ ಹಕ್ಕನ್ನು ಮತಗಟ್ಟೆಗೆ ಆಗಮಿಸಿ ಚಲಾಯಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಸ್ಟರ್ ಟ್ರೇನರ್ ಬಸವರಾಜ ಗಿರಿತಿಮ್ಮಣ್ಣವರ ಅವರು ಮಾತನಾಡಿ, “ಚುನಾವಣೆಯ ಹಿನ್ನೆಲೆಯಲ್ಲಿ ಪ್ರತಿಮತಗಟ್ಟೆಯಲ್ಲಿ ವಿದ್ಯುನ್ಮಾನ ಮತಯಂತ್ರ (ಇ.ವಿ.ಎಂ) ಹಾಗೂ ವಿ.ವಿ.ಪ್ಯಾಟ್ ಪೆಟ್ಟಿಗೆ ಇಡಲಾಗುತ್ತದೆ. ಮತದಾರ ಮತಗಟ್ಟೆಗೆ ಮತ ಚಲಾಯಿಸಲು ಬಂದಾಗ ಮತಯಂತ್ರದಲ್ಲಿ ಹಸಿರು ದೀಪ ಉರಿಯುತ್ತಿರುವದನ್ನು ಖಚಿತಪಡಿಸಿಕೊಂಡು ಬ್ಯಾಲೇಟ್ ಯುನಿಟನಲ್ಲಿ ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರು, ಚಿಹ್ನೆಯ ಎದುರು ಇರುವ ನೀಲಿ ಗುಂಡಿ ಒತ್ತುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು. ನಂತರ ಕೆಂಪು ದೀಪ ಹಾಗೂ ಬೀಪ್ ಸದ್ದು ಮತದಾನವಾಗಿರುವದನ್ನು ಖಚಿತಪಡಿಸುತ್ತದೆ. ಬಳಿಕ ಪಕ್ಕದಲ್ಲಿರುವ ವಿ.ವಿ. ಪ್ಯಾಟಯಂತ್ರದಲ್ಲಿ ತಾವು ಮತ ಚಲಾಯಿಸಿದ ಅಭ್ಯರ್ಥಿಯ ಕ್ರಮ ಸಂಖ್ಯೆ, ಹೆಸರು ಹಾಗೂ ಚಿಹ್ನೆಯನ್ನು ಒಳಗೊಂಡಿರುವ ಚೀಟಿಯನ್ನು ಏಳು ಸೆಕೆಂಡವರೆಗೆ ಮತದಾರ ನೋಡಿ ಮತದಾನವನ್ನು ಖಚಿತಪಡಿಸಿಕೊಳ್ಳಬಹುದು” ಎಂದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಸೇರಿದಂತೆ ಜಿಲ್ಲಾಧಿಕಾರಿಗಳ ಕಚೇರಿಯ ಶಿರಸ್ತೇದಾರರು, ಸಿಬ್ಬಂದಿಗಳು, ಕಾಲೇಜು ಪ್ರಾಂಶುಪಾಲರು, ಸಾರ್ವಜನಿಕರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...