ಗದಗ | ಚಂದ್ರಯಾನ-3 ಭಾರತವನ್ನು ಇತಿಹಾಸದಲ್ಲಿ ಅಜರಾಮರವಾಗಿಸಿದೆ: ವಿಜ್ಞಾನಿ

Date:

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತವು ಸಾಧನೆಯ ಹಾದಿಯಲ್ಲಿದೆ. ಚಂದ್ರಯಾನ-3 ಯಶಸ್ವಿಯು ದೇಶದ 140 ಕೋಟಿ ಭಾರತೀಯರ ಇಚ್ಛೆ ಈಡೇರಿದಂತಾಗಿದೆ. ಈ ಯಶಸ್ವಿಯು ಭಾರತವನ್ನು ಇತಿಹಾಸದ ಪುಟಗಳಲ್ಲಿ ಅಜರಾಮರವಾಗಿಸಿದೆ ಎಂದು ವಿಜ್ಞಾನಿ ಸುಧೀಂದ್ರಬಿಂದಗಿ ಹೇಳಿದ್ದಾರೆ.

ಗದಗದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಚಂದ್ರಯಾನ-3 ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಭಾರತದ ಪ್ರತಿಯೊಬ್ಬ ತಾಯಿಯು ತನ್ನ ಮಗು ಅಳುತ್ತಿದ್ದರೆ, ಆ ಮಗುವನ್ನು ಆಕಾಶದತ್ತ ತೋರಿಸಿ ಚಂದ ಮಾಮನ ನೋಡು ಅಂತ ಹೇಳುತ್ತಾಳೆ. ತಲೆತಲಾಂತರದಿಂದಲೂ ಚಂದ್ರನೊಂದಿಗೆ ಭಾರತೀಯರು ಅವಿನಾಭಾವ ಸಂಬಂಧ ಹೊಂದಿದ್ದರೆ. ನಮ್ಮ ಭಾರತದ ವಿಜ್ಞಾನಿಗಳು ಚಂದ್ರನ ಮೇಲೆ ಭಾರತದ ಬಾವುಟವನ್ನು ಹಾರಿಸುವುದರ ಮೂಲಕ ಜಗತ್ತಿಗೆ ಭಾರತದ ವಿಜ್ಞಾನಿಗಳು ಶಕ್ತಿ ಎಂತಹುದೆಂದು ಜಗತ್ತಿಗೆ ಪರಿಚಯಿಸಿದೆ” ಎಂದಿದ್ದಾರೆ.

“ಚಂದ್ರನ ಮೇಲೆ ವಿಕ್ರಮ ಲ್ಯಾಂಡ್ ಆಗುವವರೆಗೂ ಭಾರತದ ಜನರು ದೇವರ ಬಳಿ ಪ್ರಾರ್ಥನೆ ಮಾಡಿದನ್ನು ನಾವು ನೋಡಿದ್ದೇವೆ. ಎಂತಹುದೆ ಕೆಲಸಗಳು ಇರಲಿ ಆತ್ಮವಿಶ್ವಾಸ ಮುಖ್ಯ. ಎಂದಿಗೂ ದೃತಿಗೆಡಬಾರದು. ಚಂದ್ರಯಾನದ ಮೇಲೆ ರಷ್ಯಾ ತುದಿಗಾಲಲ್ಲಿ ನಿಂತಿತ್ತು. ಆದರೆ, ಲ್ಯಾಂಡ್ ಆಗುವ ಸಮಯದಲ್ಲಿ ವಿಫಲವಾಯಿತು. 2014ರಲ್ಲಿ ಚಂದ್ರಯಾನ-2 ಯಶಸ್ವಿಗೆ ಭಾರತ ತುದಿಗಾಲಲ್ಲಿ ನಿಂತಿತ್ತು. ಆದರೆ, ಫಲಕಾರಿಯಾಗಲಿಲ್ಲ. ಈಗ ನಾವು ಯಶಸ್ಸು ಕಂಡಿದ್ದೇವೆ” ಎಂದು ಹೇಳಿದ್ದರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ರಾಜ್ಯ ಸರ್ಕಾರವು ಚಂದ್ರಯಾನ ಪ್ರಯೋಗಕ್ಕಾಗಿ ಸಾವಿರ ಎಕರೆ ಜಮೀನನ್ನು ನೀಡಿತ್ತು. ಆ ಜಮೀನಿನಲ್ಲಿ ಚಂದ್ರನಲ್ಲಿರುವ ವಾತಾವರಣವನ್ನು ನಿರ್ಮಿಸಿ ಮೊದಲು ಪ್ರಯೋಗ ಮಾಡಿ ನಂತರ ಚಂದ್ರಯಾನ ಉಪಗ್ರಹವನ್ನು ಉಡಾವಣೆ ಮಾಡಲಾಯಿತು. ಚಂದ್ರಯಾನ ಉಪಗ್ರಹ ಉಡಾವಣೆಯಲ್ಲಿ ಕರ್ನಾಟಕ ಸರ್ಕಾರದ ಪಾತ್ರ ಅಪಾರವಾಗಿದೆ” ಎಂದು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಮುದ್ದಕ್ಕಣನವರ, ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಂ.ಎ ರಡ್ಡೇರ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ತಾರಮಣಿ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ವಿವಿಧ ಶಾಲಾ ಮಕ್ಕಳು, ಶಿಕ್ಷಕರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಇಸ್ರೋ ಸಂಸ್ಥೆಯ ವಿಜ್ಞಾನಿ ಸುಧೀಂದ್ರ ಬಿಂದಗಿ ದಂಪತಿಗಳಿಗೆ ಜಿಲ್ಲಾಡಳಿತದಿಂದ ಸನ್ಮಾನಿಸಲಾಯಿತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...