ಗದಗ | ಸಂವಿಧಾನ ನಮ್ಮ ಬದುಕು, ಹಕ್ಕು, ಬಲ ನೀಡುವ ಮಹಾನ ಶಕ್ತಿ: ಸಚಿವ ಎಚ್.ಕೆ ಪಾಟೀಲ

Date:

ಭಾರತದ ಸಂವಿಧಾನ ಜಗತ್ತಿನಲ್ಲಿಯೇ ಶ್ರೇಷ್ಠವಾದದ್ದು. ರಾಷ್ಟ್ರದ ಬದುಕು ಹೇಗಿರಬೇಕು, ಜನಸೇವೆ, ನಮ್ಮ ಹಕ್ಕುಗಳ ಕುರಿತು ನಮ್ಮ ಸಂವಿಧಾನದ ಪೀಠಿಕೆ ಹೇಳುತ್ತದೆ. ಅದನ್ನು ಅರಿತುಕೊಂಡು ಸಂವಿಧಾನದ ಸದಾಶಯಗಳನ್ನು ಈಡೇರಿಸಲು ಮುಂದಾಗಬೇಕು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳ ಸಚಿವ ಡಾ.ಎಚ್.ಕೆ ಪಾಟೀಲ ಹೇಳಿದರು.

ಗದಗ ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ನಡೆದ ಸಂವಿಧಾನದ ಪೀಠಿಕೆ ಮತ್ತು ಕಾರ್ಯಗಳು ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಸಂವಿಧಾನವು ಕಥೆ ಪುಸ್ತಕವಲ್ಲ. ಅದು ನಮ್ಮ ಬದುಕು, ನಮ್ಮ ಹಕ್ಕುಗಳನ್ನು ತಿಳಿಸುವ, ಬಲನೀಡುವ ಮಹಾನ್ ಶಕ್ತಿಯಾಗಿದೆ” ಎಂದರು.

“ಸಾಮಾಜಿಕ ನ್ಯಾಯದ ಜೊತೆಗೆ ಪ್ರತಿಯೊಬ್ಬರಿಗೂ ತಮ್ಮದೇ ಆದ ಹಕ್ಕನ್ನು ನಮ್ಮ ಸಂವಿಧಾನ ನೀಡಿದೆ. 12ನೇ ಶತಮಾನದಲ್ಲಿ ಬಸವಣ್ಣನವರು ಸ್ತ್ರೀ ಸ್ವಾತಂತ್ರ್ಯ ಕುರಿತು ತಿಳಿಸಿದ್ದರು. ಆದರೂ ಮನೆಯ ಹೆಣ್ಣುಮಕ್ಕಳನ್ನು ಮನೆಯಿಂದ ಆಚೆ ಕಳುಹಿಸುತ್ತಿರಲಿಲ್ಲ. ಸಂವಿಧಾನದಲ್ಲಿ ತಿದ್ದುಪಡಿ ತರುವ ಮೂಲಕ ಮೀಸಲಾತಿಯನ್ನು ಜಾರಿಗೊಳಿಸಿ ಮಹಿಳೆಯರ ಕೈಗೆ ಅಧಿಕಾರ ನೀಡಲಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂವಿಧಾನ ಶ್ರೇಷ್ಠ ಹಾಗೂ ಶಕ್ತಿಯುತವಾಗಿದೆ. ಜಾತಿ ವ್ಯವಸ್ಥೆಯಿಂದ ಗಲೀಜು ಆಗಿರುವ ಸಮಾಜವನ್ನು ತಿದ್ದುವ ಕಾರ್ಯ ಆಗಬೇಕಾಗಿದೆ. ಸಮಾಜದಲ್ಲಿ ಇನ್ನೂ ಕೂಡ ಅಸ್ಪಶ್ಯತೆ ಜೀವಂತವಾಗಿದ್ದು ಇದನ್ನು ತೊಡೆದು ಹಾಕುವ ಕಾರ್ಯವಾಗಬೇಕಾಗಿದೆ. ಸಮಾಜದಲ್ಲಿ ಸಮಾನತೆ ಬರಲು ಮನಸ್ಸುಗಳು ಕೂಡಬೇಕು. ಈ ಕುರಿತು ಸಂವಿಧಾನದಲ್ಲಿ ಸ್ಪಷ್ಟಪಡಿಸಲಾಗಿದೆ. ಅಸ್ಪೃಶ್ಯತೆ ನಿವಾರಣೆಗಾಗಿ ಪಂಚಾಯತಿಗಳಿಗೆ ಹೆಚ್ಚಿನ ಜವಾಬ್ದಾರಿಗಳನ್ನು ನೀಡಲಾಗಿದೆ” ಎಂದರು.

“ಸಂವಿಧಾನದ ತಿಳುವಳಿಕೆ ಕೊರತೆಯಿಂದಾಗಿ ಸಮಾಜದಲ್ಲಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ. ಪ್ರತಿಯೊಬ್ಬರು ಸಂವಿಧಾನದ ಕುರಿತು ಅರಿತುಕೊಳ್ಳುವುದು ಮುಖ್ಯವಾಗಿದೆ. ಸಂವಿಧಾನದಲ್ಲಿ ನೀಡಿರುವ ಹಕ್ಕನ್ನು ಪ್ರತಿಯೊಬ್ಬರು ಪಡೆದುಕೊಳ್ಳುತ್ತಾರೆಯೇ ಹೊರತು ಸಂವಿಧಾನದಲ್ಲಿ ತಿಳಿಸಿರುವ ಕರ್ತವ್ಯಗಳನ್ನು ಪಾಲಿಸಲಾಗುತ್ತಿಲ್ಲ. ಈ ಕುರಿತು ಪ್ರತಿಯೊಬ್ಬರು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ” ಎಂದರು.

ರೋಣ ಶಾಸಕ ಜಿ.ಎಸ್ ಪಾಟೀಲ ಮಾತನಾಡಿ, “ದೇಶಕ್ಕೆ ಸ್ವಾತಂತ್ರ್ಯ ದೊರೆತು ಎಪ್ಪತ್ತೈದು ವರ್ಷಗಳು ಗತಿಸಿದ್ದರೂ ಕೂಡ ದೇಶದಲ್ಲಿ ಅಷ್ಟೊಂದು ಸಾಧನೆ ಆಗಿಲ್ಲ. ದೇಶದ ಏಕತೆಯನ್ನು ಸಂವಿಧಾನ ಕರೆದೊಯ್ಯುತ್ತಿದೆ. ಸಮಾಜ ಸುಧಾರಣೆಯಲ್ಲಿ ಮಹಿಳೆಯರ ಪಾತ್ರ ಅತೀ ಪ್ರಮುಖವಾಗಿದ್ದು, ಗಾಂಧೀಜಿ ಅವರ ಗ್ರಾಮ ಸ್ವರಾಜದ ಕನಸನ್ನು ನನಸಾಗಿಸಲು ಪ್ರತಿಯೊಬ್ಬರು ಸಂವಿಧಾನವನ್ನು ಅರಿತು ಅದರಂತೆ ನಡೆದುಕೊಳ್ಳಬೇಕು” ಎಂದರು.

ಈ ಸುದ್ದಿ ಓದಿದ್ದೀರಾ?: ಪ್ರಧಾನಿ ಮೋದಿ ಹೇಳಿದರೂ ಈ ಸಿನಿಮಾವನ್ನು ನೋಡುವವರೇ ಇಲ್ಲ!

ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಮಾತನಾಡಿ, “ನ್ಯಾಯಾಂಗ, ಕಾರ್ಯಾಂಗ ಹಾಗೂ ಶಾಸಕಾಂಗವು ಸಂವಿಧಾನದ ಅಡಿಯಲ್ಲಿಯೇ ಕಾರ್ಯನಿರ್ವಹಿಸುತ್ತವೆ. ನಮ್ಮ ದೇಶದ ಪವಿತ್ರ ಸಂವಿಧಾನವನ್ನು ಅರಿತು ಸಧೃಢ ರಾಷ್ಟ್ರ ನಿರ್ಮಾಣಕ್ಕೆ ಪ್ರತಿಯೊಬ್ಬರು ಮುಂದಾಗಬೇಕು. ಸಂವಿಧಾನದಲ್ಲಿನ ತಿದ್ದುಪಡಿಯ ಮೂಲಕ ಮಹಿಳೆಯರು ಅಧಿಕಾರದ ಚುಕ್ಕಾಣಿಯನ್ನು ಹಿಡಿದಿದ್ದು ಸಂವಿಧಾನ ನೀಡಿದ ಹಕ್ಕು ಹಾಗೂ ಕರ್ತವ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವದರ ಮೂಲಕ ಸುಂದರ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು” ಎಂದರು.

ಕಾರ್ಯಕ್ರಮದಲ್ಲಿ ಕೇರಳದ ಲೋಕಲ್ ಸೆಲ್ಫ ಗವರ್ನಮೆಂಟ್ ಜಂಟಿ ನಿರ್ದೇಶಕ ಸುದೇಶನ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಮಾಜಿ ಶಾಸಕ ಡಿ.ಆರ್.ಪಾಟೀಲ, ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷ ವಾಸಣ್ಣ ಕುರಡಗಿ, ಚುನಾಯಿತ ಜನಪತ್ರಿನಿಧಿಗಳು, ಮಹಿಳಾ ಚುನಾಯಿತ ಜನಪತ್ರಿನಿಧಿಗಳು, ಗಣ್ಯರು, ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಸಾರ್ವಜನಿಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...