ಗದಗ | ಹಬ್ಬದ ನೆಪದಲ್ಲಿ ಜೂಜಾಟ; ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹ

Date:

ದೀಪಾವಳಿ, ಗೌರಿ ಹಬ್ಬ ಸೇರಿದಂತೆ ಹಲವಾರು ಹಬ್ಬಗಳ ಸಂದರ್ಭದಲ್ಲಿ ಕೆಲವು ಜುಜೂಕೋರರು ಬಹಿರಂಗವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಜೂಜಾಟದಲ್ಲಿ ತೊಡಗುತ್ತಿದ್ದಾರೆ. ಅಂತಹ ಜೂಜುಕೋರರ ವಿರುದ್ಧ ಕ್ರಮ ಕೈಕೊಳ್ಳದೆ ಗದಗ ಜಿಲ್ಲೆಯಲ್ಲಿ ಪೋಲಿಸ್ ಇಲಾಖೆ ಕುರುಡು ಜಾಣತನ ತೋರಿಸುತ್ತಿದೆ. ಇದರಿಂದ ಜಿಲ್ಲೆಯಲ್ಲಿ ಹೆಚ್ಚಿನ ಯುವಕರು ದಾರಿ ತಪ್ಪುತ್ತಿದ್ದಾರೆ. ಜೂಜುಕೋರರ ವಿರುದ್ಧ ಕ್ರಮ ಕೈಕೊಳ್ಳಬೇಕು. ಯುವಕರನ್ನು ಜೂಜಾಟದಿಂದ ಹೊರಗುಳಿಯುವಂತೆ ಮಾಡಬೇಕು ಎಂದು ದಲಿತ ಮುಖಂಡ ಶಿವಾನಂದ ತಮ್ಮಣ್ಣವರ ಒತ್ತಾಯಿಸಿದ್ದಾರೆ.

ಗದಗ ಜಿಲ್ಲಾಧಿಕಾರಿಗೆ ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿದ ಶಿವಾನಂದ ತಮ್ಮಣ್ಣವರ, “ದೀಪಾವಳಿ ಹಬ್ಬ ಸಮೀಪಿಸುತ್ತಿದೆ. ಹಬ್ಬದ ನೆಪದಲ್ಲಿ ಜೂಜುಕೋರರು ಇಸ್ಪೀಟ್ ಜೂಜು ಆಡಲು ಆರಂಭಿಸುತ್ತಿದ್ದಾರೆ. ಜೂಜಾಟಕ್ಕೆ ಕಡಿವಾಣ ಹಾಕಲು ಸೂಕ್ತ ಕ್ರಮ ಕೈಗೊಳ್ಳಬೇಕು. ಜೂಜುಕೋರರ ವಿರುದ್ಧ ಕ್ರಮ ಕೈಗೊಳ್ಳಲು ಪೋಲಿಸ್ ಇಲಾಖೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ, ಗ್ರಾಮ ಪಂಚಾಯತಿಗಳಿಗೆ ನಿರ್ದೇಶನ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

“ಜೂಜಾಟ ಕಾನೂನು ಪ್ರಕಾರ ಅಪರಾಧವೆಂದು ಗೊತ್ತಿದ್ದರೂ, ಕೆಲವರು ಈ ಆಟವನ್ನು ನಿರಂತರವಾಗಿ ಆಡುತ್ತಿದ್ದಾರೆ. ಪೋಲಿಸ್ ಇಲಾಖೆ ಕಾಟಾಚಾರಕ್ಕೆ ಆಗೊಮ್ಮೆ ಈಗೊಮ್ಮೆ ಕೆಲವರನ್ನು ಬಂಧಿಸಿ, ಅದನ್ನೇ ಪ್ರಚಾರ ಪಡಿಸುತ್ತಾರೆ. ಆದರೆ, ಕೆಲವು ಕಡೆ ನಿರಂತರವಾಗಿ ಜೂಜಾಟ ನಡೆಯುತ್ತಿರುವುದು ಕೆಲವು ಪೋಲಿಸ್ ಸಿಬ್ಬಂದಿಗಳಿಗೆ ಗೊತ್ತಿದ್ದರೂ, ಜೂಜುಖೋರರ ಜೊತೆ ಹೊಂದಾಣಿಕೆ ಮಾಡಿಕೊಂಡು ಆಟವಾಡಲು ಅನುಕೂಲ ಮಾಡಿಕೊಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಕ್ಕೊತ್ತಾಯ ಸಲ್ಲಿಸುವ ವೇಳೆ ಸಂಘಟನೆಯ ನೀತಿಶ್ ಘಟ್ಟೆಣವರ, ಮಂಜುನಾಥ ಸಿತಾರಹಳ್ಳಿ, ರಮೇಶ ಚಲವಾದಿ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...