ಗದಗ | ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡರ ಬಿಡುಗಡೆಗೆ ಆಗ್ರಹಿಸಿ ಉರುಳು ಸೇವೆ

Date:

ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ, ನಾಡ ಸೇನಾನಿ ಟಿ ಎ ನಾರಾಯಣಗೌಡರ ಬಿಡುಗಡೆಗೆ ಆಗ್ರಹಿಸಿ ಕರವೇ ಕಾರ್ಯಕರ್ತರು ಗದಗ ನಗರದ ಎಪಿಎಂಸಿ ಆವರಣದಿಂದ ಪಂಡಿತ್ ಪುಟ್ಟರಾಜ ಗವಾಯಿಗಳ ಮಠದವರೆಗೆ ಉರುಳು ಸೇವೆ ಮಾಡುವ ಮೂಲಕ ಆಕ್ರೋಶ ಹೊರಹಾಕಿದರು.

ಕರವೇ ಗದಗ ಜಿಲ್ಲಾಧ್ಯಕ್ಷ ಶರಣು ಎಸ್ ಗೋಡಿ ಮಾತನಾಡಿ, “ಡಿಸೆಂಬರ್ 27ರಂದು ಬೆಂಗಳೂರಿನಲ್ಲಿ ನಾಮಫಲಕದಲ್ಲಿ ಕನ್ನಡಕ್ಕೆ ಆದ್ಯತೆಗೆ ಒತ್ತಾಯಿಸಿ ನಡೆಸಿದ ಹೋರಾಟದ ಸಮಯದಲ್ಲಿ ಬಂಧಿಸಿರುವ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡ ಹಾಗೂ ಕರವೇ ಮುಖಂಡರು, ಕಾರ್ಯಕರ್ತರನ್ನು ರಕ್ಷಣೆಯ ಬಿಡುಗಡೆ ಮಾಡಬೇಕು ಮತ್ತು ಕೇಸುಗಳನ್ನು ವಾಪಸ್ ಪಡೆಯಲು ಸರ್ಕಾರ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

“ನಾಮಫಲಕದಲ್ಲಿ ಕನ್ನಡಕ್ಕೆ ಹೆಚ್ಚಿನ ಆದ್ಯತೆಗಾಗಿ ನಡೆಯುತ್ತಿರುವ ಅಭಿಯಾನವನ್ನು ರಾಜ್ಯಾದ್ಯಂತ ಹಾಗೂ ಜಿಲ್ಲೆಯಾದ್ಯಂತ ಮುಂದುವರಿಸಲಾಗುವುದು. ಕನ್ನಡ ಕಲಿಗಳು ಕನ್ನಡಕ್ಕಾಗಿ ಹೋರಾಟ ನಡೆಸಿ ಸೆರೆವಾಸದಲ್ಲಿ ಇರುವ ಈ ಸಮಯದಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ನಡೆಸುವುದಕ್ಕಿಂತ ಕರಾಳ ದಿನವಾಗಿ ಆಚರಿಸುವುದೇ ಸೂಕ್ತವಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹಾಸನ | ನಮ್ಮೂರಿನ ರಾಮ ನಮಗೆ ಆಶೀರ್ವಾದ ಮಾಡೋದಿಲ್ವ?: ಸಚಿವ ರಾಜಣ್ಣ

ಗದಗ ಜಿಲ್ಲಾ ಯುವ ಘಟಕದ ಅಧ್ಯಕ್ಷ ನಿಂಗನಗೌಡ ಮಾಲಿಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹನುಮಂತ ಪೂಜಾರ, ಮಹಿಳಾ ಘಟಕದ ಅಧ್ಯಕ್ಷೆ ಆಶಾ ಜೂಲಗುಡ್ಡ, ಮಹಾದೇವಿ ದೊಡ್ಡಗೌಡ್ರ, ರತ್ನಮ್ಮ ಯಲಬುರ್ಗಿ, ಲಕ್ಷ್ಮೇಶ್ವರ ತಾಲೂಕು ಅಧ್ಯಕ್ಷ ಲೋಕೇಶ ಸುತಾರ, ಮುಂಡರಗಿ ತಾಲೂಕು ಅಧ್ಯಕ್ಷ ರಾಮನಗೌಡ ಹಳೆಮನಿ, ಪ್ರಕಾಶ ಸಂದಿಗೋಡ, ಈರಣ್ಣ ಹುರಕಡ್ಲಿ, ಅಲ್ಲಾಬಕ್ಷಿ ನದಾಫ್, ಆನಂದ ಹೊಸಮನಿ ಯಲ್ಲಪ್ಪ ಬೋವಿ, ಮಾರುತಿ ಈಳಗೇರ ಆಷಪಾಕ್ ಬಾಗೋಡಿ, ಪ್ರವೀಣ್ ಗಾಣಿಗೇರ ಮೈನು ಮನಿಯಾರ, ಅಪ್ಪು ಉಮಚಗಿ ಗಣೇಶ ಕಳಸೂರ, ವೀರೇಶ ಮಡಿವಾಳರ, ನಾಗರಾಜ ಬಂಡಿವಡ್ಡರ, ಮಂಜುನಾಥ ಹುಲ್ಲೂರು, ರಾಹುಲ್ ಹೂಗಾರ, ಚಂದ್ರು ಮಣ್ಣೂರ, ಮಲ್ಲಪ್ಪ ಗೊಜನೂರು, ರವಿ ಕೋರಿ ಸೇರಿದಂತೆ ಅನೇಕ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...