ಗದಗ | ಕುಡಿಯುವ ನೀರಿಗೆ ಕೊರತೆಯಾಗದಂತೆ ನಿಗಾ ವಹಿಸಿ; ಶಾಸಕ ಚಂದ್ರು ಲಮಾಣಿ ಸೂಚನೆ

Date:

ಗ್ರಾಮೀಣ ಮತ್ತು ಪಟಣಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕಾರ್ಯನಿರ್ವಹಿಸಲು ಗದಗ ಜಿಲ್ಲೆ ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕು ಕಂದಾಯ ಮತ್ತು ತಹಶೀಲ್ದಾರರ ಕಚೇರಿಯಲ್ಲಿ ನಡೆದ ಬರಗಾಲ ಟಾಸ್ಕ್‌ಫೋರ್ಸ್‌ ಸಭೆಯಲ್ಲಿ ಮಾತನಾಡಿದರು.

“ಗ್ರಾಮೀಣ ಪ್ರದೇಶಗಳಿಗೆ ನೀರಿನ ಕೊರತೆಯಾಗದಂತೆ ಎಚ್ಚರವಹಿಸಿ ಮತ್ತು ಜೆಜೆಎಂಗಳ ದುರಸ್ತಿ ಕಾಮಗಾರಿಯನ್ನು ಬೇಗ ಮುಗಿಸಿ. ಬೇಸಿಗೆಯಲ್ಲಿ ಗ್ರಾಮ ಮತ್ತು ಪಟ್ಟಣಗಳಲ್ಲಿ ನೀರಿನ ಕೊರೆತೆಯಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗದಂತೆ ಎಚ್ಚರ ವಹಿಸಬೇಕು” ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿರಹಟ್ಟಿ ಕ್ಷೇತ್ರದ ಎರಡು ಕಡೆ ಗೋಶಾಲೆ ತೆರೆಯಲು ಸೂಕ್ತವಾದ ಜಾಗವನ್ನು ಪರಿಶೀಲಿಸಿ ಮಾಹಿತಿ ಕೊಡಲು ತಾಲೂಕಿನ ಪಶು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.

ಪಶುವೈದ್ಯಾಧಿಕಾರಿ ಹವಳದ ಅವರು, “ಶೆಟ್ಟಿಕೇರಿ ಮತ್ತು ಬಾಲೇಹೊಸೂರು ಗ್ರಾಮದಲ್ಲಿ ಕೆರೆಗಳಿದ್ದು, ಅಲ್ಲಿ ನೀರಿನ ವ್ಯವಸ್ಥೆ ಇರುವುದರಿಂದ ಅಲ್ಲಿ ಗೋಶಾಲೆ ತೆರೆಯಲು ಸೂಕ್ತವಾದ ಸ್ಥಳಗಳಿವೆ” ಎಂದು ಸಲಹೆ ಕೊಟ್ಟರು.

“ಬಜಾಜ್ ಅಲೈನ್ಸ್‌ನಿಂದ ಬೆಳೆವಿಮೆ ರೈತರ ಖಾತೆಗೆ ಜಮೆ ಆಗಿದ್ದರಿಂದ ರೈತರಿಗೆ ಅನುಕೂಲವಾಗಿದೆ. ಇನ್ನು ಶೇ.50ರಷ್ಟು ವಿಮೆ ಜಮಾ ಆಗಬೇಕಾಗಿದೆ. ಅದರೂ ಇದರಿಂದ ನ್ಯೂನ್ಯತೆಗಳು ಕಡಿಮೆ ಆದಂತಾಗಿದೆ. ರೈತರ ಖಾತೆಗೆ ಬರಪರಿಹಾರ ಜಮಾ ಆಗಬೇಕಾಗಿದೆ. ‌ಮುಂದಿನ ದಿನಗಳಲ್ಲಿ ಸರ್ಕಾರ ರೈತರ ಖಾತೆಗೆ ಪರಿಹಾರದ ಹಣ ಜಮಾ ಮಾಡುತ್ತದೆಂಬ ಭರವಸೆ ಇದೆ” ಎಂದು ಶಾಸಕ ಚಂದ್ರು ಲಮಾಣಿ ವಿಶ್ವಾಸ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕೆಟ್ಟು ನಿಂತ ಶುದ್ಧ ಕುಡಿಯುವ ನೀರಿನ ಘಟಕ; ದುರಸ್ತಿಗೆ ಗ್ರಾಮಸ್ಥರ ಆಗ್ರಹ

ಸಭೆಯಲ್ಲಿ ಶಾಸಕ ಚಂದ್ರು ಲಮಾಣಿ, ತಹಶೀಲ್ದಾರ್ ವಾಸುದೇವ್ ಸ್ವಾಮಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರಾ, ಗ್ರೇಡ್ ಟು ತಹಶೀಲ್ದಾರ್ ಮಂಜುನಾಥ ಅಮವಾಸೆ, ಕೃಷಿ ಅಧಿಕಾರಿಗಳು, ತೋಟಗಾರಿಕೆ ಅಧಿಕಾರಿಗಳು, ಪಶು ವೈದ್ಯರು, ನೀರು ಸರಬರಾಜು ಅಧಿಕಾರಿಗಳು, ಗ್ರಾಮ ಲೆ‌ಕ್ಕಾಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...