ಗದಗ | ನ. 26ರಿಂದ 28ರವರೆಗೆ ಬೆಂಗಳೂರಲ್ಲಿ ರೈತರ ಮಹಾಧರಣಿ

Date:

ಬೆಂಗಳೂರಿನಲ್ಲಿ‌ ನಡೆಯಲಿರುವ ದುಡಿವ ಜನರ ಮಹಾ ಧರಣಿಯಲ್ಲಿ ಭಾಗವಹಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಕರೆ ನೀಡಿದ್ದು, ನ.26ರಿಂದ 28ರವರೆಗೆ ಬೆಂಗಳೂರಿನಲ್ಲಿ ರೈತ ಸಂಘ ಮಹಾಧರಣಿ ಹಮ್ಮಿಕೊಂಡಿದೆ.

ಗದಗ ಪಟ್ಟಣದಲ್ಲಿ ಪತ್ರಿಕಾಗೋಷ್ಠಿ ನಡೆಸಿದ  ರೈತ ಸಂಘದ ಮುಖಂಡ ಮಲ್ಲಿಕಾರ್ಜುನ ಸಂಕನಗೌಡ್ರ, “ಗದಗ ಜಿಲ್ಲೆಯ ಪ್ರತಿಯೊಬ್ಬ ರೈತ ಬಾಂಧವರು ಮಹಾ ಧರಣಿಯಲ್ಲಿ ಪಾಲ್ಗೊಂಡು, ಈ ಮಹಾ ಧರಣಿಯನ್ನು ಯಶಸ್ವಿಗೊಳ್ಳಿಸಬೇಕು” ಎಂದು ಕರೆ ನೀಡಿದ್ದಾರೆ.

ರೈತ ಸಂಘದ ಜಿಲ್ಲಾ ಅಧ್ಯಕ್ಷ ವಿಜಯಕುಮಾರ್ ಸುಂಕದ ಮಾತನಾಡಿ, ಬೆಂಗಳೂರಿನಲ್ಲಿ ನಡೆಯುವ ಧರಣಿಯಲ್ಲಿ ಎಲ್ಲ ದಲಿತಪರ ಸಂಘಟನೆಗಳು, ಪ್ರಗತಿಪರ ಚಿಂತಕರು, ಹೋರಾಟಗಾರರು, ಚಳವಳಿಗಾರರು ಭಾಗವಹಿಸಲಿದ್ದು, ಗದಗ ಜಿಲ್ಲೆಯಿಂದ ರೈತರು, ರೈತ ಮಹಿಳೆಯರು ಸೇರಿ ಒಂದು ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳಲಿದ್ದೇವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಐತಿಹಾಸಿಕ ದೆಹಲಿ ರೈತ ಹೋರಾಟದಲ್ಲಿ ಹುತಾತ್ಮ ರೈತ ಕುಟುಂಬಗಳಿಗೆ ಪರಿಹಾರ, ಪುನರ್ವಸತಿ ಕಲ್ಪಿಸಬೇಕು. ಸಿಂಗು ಗಡಿಯಲ್ಲಿ ರೈತ ಹುತಾತ್ಮ ಸ್ಮಾರಕ ನಿರ್ಮಿಸಬೇಕು. ರೈತರ ಮೇಲೆ ಹಾಕಿದ ಎಲ್ಲಾ ಪೊಲೀಸ್ ಕೇಸ್‌ಗಳನ್ನು ವಾಪಸ್‌ ಪಡೆಯಬೇಕು. ಮೂರು ಕೃಷಿ ಕಾಯಿದೆಗಳನ್ನು ಕೇಂದ್ರ ಸರಕಾರ ಹಿಂದಕ್ಕೆ ಪಡೆದಿದ್ದು, ರಾಜ್ಯದಲ್ಲಿಯೂ ಹಿಂದಕ್ಕೆ ಪಡೆಯಬೇಕೆಂಬ ಭರವಸೆಯನ್ನು‌ಈಗೀನ ಸರಕಾರದವರು ನೀಡಿದೆ. ಆದರೆ, ಇದುವರೆಗೂ ಆಗಿಲ್ಲ.

ರೈತರು ಬೆಳೆದ ಬೆಳಗೆ ಕನಿಷ್ಠ ಬೆಂಬಲ ಕಾಯ್ದೆ ಜಾರಿಯಾಗಬೇಕು. ಮಹದಾಯಿ ನೀರಿಗೆ ಆಣೆಕಟ್ಟು ಕಟ್ಟಿ, ನಮ್ಮ ಉತ್ತರ ಕರ್ನಾಟಕ ಜಿಲ್ಲೆಗಳಿಗೆ ನೀರು ಬಿಡುಗಡೆ ಮಾಡುವಂತೆ ಒತ್ತಯಿಸಲು, ಬೆಂಗಳೂರಿನಲ್ಲಿ ನಡೆಯುವ ಸಂಯುಕ್ತ ಕರ್ನಾಟಕ ಹೋಟದ ಮಹಾ ಧರಣಿಯಲ್ಲಿ ಎಲ್ಲ ರೈತ ಬಾಂಧವರು ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಪ್ರಗತಿಪರ ರೈತ ಮುಖಂಡ ಮೇಘರಾಜ ಭಾವಿ ರೈತರಿಗೆ ಕರೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಸಂಗಣ್ಣ ದಂಡಿನ, ಎಸ್.ಎನ್. ಪರಡ್ಡಿ, ವಾಯ್.ಎಮ್. ಬಿಚ್ಚುಮನಿ, ಶರಣಪ್ಪ ಹುಲ್ಲೂರು, ಮಲ್ಲಿಕಾರ್ಜುನ ಶೀಲವಂತರ, ಈರಪ್ಪ ದೊಡ್ಡನ್ನವರ, ರುದ್ರಯ್ಯ ಸಾಲಿಮಠ, ಬಸವರಾಜ ಜಕ್ಕಲಿ ಹಾಗೂ ರೈ ಮುಖಂಡರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...