ಗದಗ | ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಕಾರ್ಯಕ್ರಮ

Date:

ನಾವು ಯಾವುದೇ ರಂಗದಲ್ಲಿ ಯಶಸ್ಸನ್ನು ಸಾಧಿಸಬೇಕಾದರೆ ಸಾಕ್ಷರತೆ ಅತಿ ಅವಶ್ಯಕವಾಗಿದೆ. ಎಲ್ಲರೂ ಸಾಕ್ಷರರಾಗಬೇಕು. ಶಿಕ್ಷಣದ ಮಹತ್ವವನ್ನು ಸಾರುವ ದಿನವೇ ಅಂತರಾಷ್ಟ್ರೀಯ ಸಾಕ್ಷರತಾ ದಿನವಾಗಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ ಎಲ್‌ ವೈಶಾಲಿ ಹೇಳಿದರು.

57ನೇ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಾಕ್ಷರತಾ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಎಂ ಎ ರಡ್ಡೇರ ಮಾತನಾಡಿ, “ನಾವು ಸಾಕ್ಷರತೆಯ ಬಗ್ಗೆ ಬಹಳಷ್ಟು ಮುತುವರ್ಜಿ ವಹಿಸಿ ಸಾಕ್ಷರತೆಯ ಕಾರ್ಯ ನಿರ್ವಹಿಸಬೇಕು. ಎಲ್ಲ ಸಮೂಹ ಸಂಪನ್ಮೂಲ ವ್ಯಕ್ತಿಗಳು, ಕ್ಷೇತ್ರ ಸಂಪನ್ಮೂಲ ವ್ಯಕಿಗಳು, ಕ್ಷೇತ್ರ ಸಮನ್ವಯಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಡಯಟ್‍ನ ಹಿರಿಯ ಹಾಗೂ ಕಿರಿಯ ಉಪನ್ಯಾಸಕರು ಜಿಲ್ಲೆಯ ಶಾಲಾ ಬಿಸಿಯೂಟ ಸಿಬ್ಬಂದಿಗಳಲ್ಲಿ ಮತ್ತು ಶಾಲಾ ಅಭಿವೃದ್ಧಿ ವೀಕ್ಷಣಾ ಸಮಿತಿ ಸದಸ್ಯರಲ್ಲಿ ಅನಕ್ಷರಸ್ಥರು ಇದ್ದರೆ ಅಂತಹವರನ್ನು ಗುರುತಿಸಿ ಅವರನ್ನು ಸಾಕ್ಷರರನ್ನಾಗಿ ಮಾಡಲು ನಮ್ಮ ಹಂತದಲ್ಲಿ ಪ್ರಯತ್ನಿಸಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಯಟ್‍ ಪ್ರಾಚಾರ್ಯ ಜಿ ಎಲ್ ಬಾರಾಟಕ್ಕೆ ಮಾತನಾಡಿ, “ವಿದ್ಯಾವಂತರು ಅನಕ್ಷರಸ್ಥರಿಗೆ ಅಕ್ಷರ ಜ್ಞಾನ ನೀಡಲು ಮುಂದಾಗಬೇಕು. ಜನರು ಸ್ವಾವಲಂಬಿಯಾಗಿ ಬದುಕಲು ಸಾಕ್ಷರತೆ ಒಂದು ಊರುಗೋಲು ಇದ್ದಂತೆ” ಎಂದು ಹೇಳಿದರು.

ಶಿಕ್ಷಣಾರ್ಥಿಗಳು

ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಎಸ್ ಎಸ್ ಕುರಿಯವರ ಸಾಕ್ಷರತೆ ಕುರಿತು ಪ್ರಾಸ್ತಾವಿಕವಾಗಿ ಮಾತಾನಾಡಿ, “ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಸಂಪೂರ್ಣ ಸಾಕ್ಷರ ಗ್ರಾಮ ಪಂಚಾಯಿತಿ ಸಾಕ್ಷರತಾ ಕಾರ್ಯಕ್ರಮ, ಜಿಲ್ಲಾ ಮಟ್ಟದ ಲಿಂಕ್ ಡಾಕ್ಯೂಮೆಂಟ್ ಜನಶಿಕ್ಷಣ ನಿಲಯ ಯೋಜನೆಯಡಿಯ ಮೂಲ ಸಾಕ್ಷರತಾ ಕಾರ್ಯಕ್ರಮ ಮತ್ತು ರಾಷ್ಟ್ರ ಮಟ್ಟದ ನವಭಾರತ ಸಾಕ್ಷರತಾ ಕಾರ್ಯಕ್ರಮಗಳನ್ನು ಜಿಲ್ಲೆಯ ಶಿಕ್ಷಣ ಅಧಿಕಾರಿಗಳು ತಮ್ಮ ಸಹಯೋಗದೊಂದಿಗೆ ಯಶಸ್ವಿಗೊಳಿಸಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಯುವಜನರ ಧನಾತ್ಮಕ ಚಿಂತನೆ ದೇಶದ ಬೆಳವಣಿಗೆಗೆ ಅವಶ್ಯಕ: ಎಸ್‌ಪಿ ಉಮಾ ಪ್ರಶಾಂತ್

ಸಾಕ್ಷರತಾ ಧ್ವಜಾರೋಣಹಣದಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನ್ಯಾಸಕರು, ಜಿಲ್ಲಾ ಉಪನಿರ್ದೇಶಕರ ಕಾರ್ಯಾಲಯದ ಅಧಿಕಾರಿಗಳು, ಸಮಗ್ರ ಶಿಕ್ಷಣ ಕರ್ನಾಟಕದ ಅಧಿಕಾರಿಗಳು,ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಂಪನ್ಮೂಲ ಕೇಂದ್ರಗಳ ಸಮನ್ವಯಾಧಿಕಾರಿಗಳು, ಸಂಪನ್ಮೂಲ ವ್ಯಕ್ತಿಗಳು, ಸಮೂಹ ಸಂಪನ್ಮೂಲ ವ್ಯಕ್ತಿಗಳು, ಡಿ.ಸಿ.ಪಾವಟೆ ಬಿ.ಎಡ್.ಮಹಾವಿದ್ಯಾಲಯದ ಉಪನ್ಯಾಸಕರು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಭವಿಷ್ಯವನ್ನು ಸುಗಮಗೊಳಿಸಲು ಕೆರಿಯರ್ ಮೇಳ ಪೂರಕವಾಗಲಿ: ಸಿ.ಎನ್.ಶ್ರೀಧರ

"ಇಂದಿನ ಸ್ಪರ್ಧಾತ್ಮಕ ದಿನಗಳಲ್ಲಿ ವಿದ್ಯಾರ್ಥಿಗಳು ಭವ್ಯ ಭವಿಷ್ಯ ರೂಪಿಸಿಕೊಳ್ಳಲು ಉದ್ಯೋಗಕ್ಕಾಗಿ ಓದುವದು...

ಗದಗ | ಕುಡಿಯುವ ನೀರಿಗಾಗಿ ಕೊಡ, ಬಿಂದಿಗೆ ಹಿಡಿದು ಮಹಿಳೆಯರು ಪ್ರತಿಭಟನೆ

ನರಗುಂದ ನಗರದಲ್ಲಿ ಕುಡಿಯುವ ನೀರಿಗಾಗಿ ಹೋರಾಟ ನರಗುಂದ ನಗರದ ಮಾರುತಿ ನಗರ...

ಗದಗ | ಭಾರಿ ಆಲಿಕಲ್ಲು ಮಳೆ; ಗ್ರಾಮಸ್ಥರಲ್ಲಿ ಅಚ್ಚರಿ

ಗದಗ ಜಿಲ್ಲೆಯ ರೋಣ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಿನ್ನೆ ಸಂಜೆ...

ಗದಗ |ಎಸ್ ಎಸ್.ಎಲ್.ಸಿ. ಪರೀಕ್ಷೆ-1: ತಾಲೂಕು, ಜಿಲ್ಲಾ ಮಟ್ಟದಲ್ಲಿ ಪ್ರಥಮ, ದ್ವಿತೀಯ ಸ್ಥಾನ ಪ್ರೋತ್ಸಾಹಧನ

ಗದಗ ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಿಳಿಸುವುದೇನೆಂದರೆ 2026ನೇ ಸಾಲಿನ ಎಸ್.ಎಸ್.ಎಲ್.ಸಿ...