ಗದಗ | ಜನತಾದರ್ಶನ: ವೃದ್ಧೆಗೆ ಆಧಾರ್ ಕಾರ್ಡ್, ಮಾಸಾಶನ ಆದೇಶ ಪತ್ರ ವಿತರಣೆ

Date:

ಶತಾಯುಷಿ ವೃದ್ಧೆಯೊಬ್ಬರು ಆಧಾರ್ ಕಾರ್ಡ್‌ ಇಲ್ಲದ ಕಾರಣ, ಮಾಸಾಶನ ಪಡೆಯಲು ಸಾಧ್ಯವಾಗಿರಲಿಲ್ಲ. ಅವರಿಗೆ ಗದಗದಲ್ಲಿ ನಡೆದ ಜಿಲ್ಲಾಮಟ್ಟದ ಜನತಾ ದರ್ಶನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ ಪಾಟೀಲ್‌ ಅವರು ಆಧಾರ್ ಮಾಡಿಸಿ ಕೊಟ್ಟಿದ್ದು, ಮಾಸಾಶನದ ಆದೇಶ ಪತ್ರಿಯನ್ನೂ ನೀಡಿದ್ದಾರೆ.

ಶನಿವಾರ, ಗದಗ ಜಿಲ್ಲಾಡಳಿತ ಭವನದ ಎದುರು ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಅಲ್ಲಿಗೆ ಬಂದಿfದ, ಗದಗ-ಬೆಟಗೇರಿಯ ಹೆಲ್ತ್‌ಕ್ಯಾಂಪ್ ನಿವಾಸಿ ಕಮಲಾಬಾಯಿ ಹನುಮಂತಭಟ್ ಜೋಶಿ ಅವರು ಶತಾಯುಷಿಯಾಗಿದ್ದರೂ ಆಧಾರ್ ಕಾರ್ಡ್ ಹೊಂದಿರಲಿಲ್ಲ. ಮಾಸಿಕವಾಗಿ ಬರುತ್ತಿದ್ದ ಮಾಸಾಶನವೂ ಸ್ಥಗಿತವಾಗಿ ಸಂಕಷ್ಟ ಅನುಭವಿಸುತ್ತಿದ್ದರು. ಜನತಾ ದರ್ಶನದಲ್ಲಿ ಸಮಸ್ಯೆ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ವೃದ್ಧೆಯು ಸಲ್ಲಿಸಿದ ಅರ್ಜಿಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಿದ ಸಚಿವರು ಆಧಾರ್ ಕಾರ್ಡ್ ಜೊತೆಗೆ ಮಾಸಾಶನ ಆದೇಶ ಪತ್ರ ವಿತರಿಸಿದ್ದಾರೆ.

ಸಮಸ್ಯೆ ಪರಿಹಾರವಾದ ಬಗ್ಗೆ ವೃದ್ಧೆ ಕಮಲಾಬಾಯಿ ಸಂತಸ ವ್ಯಕ್ತಪಡಿಸಿದ್ದು, “ಆಧಾರ್ ನೋಂದಣಿ ಕೇಂದ್ರದಲ್ಲಿ‌ ತಮ್ಮ ಬೆರಳಚ್ಚು ಗುರುತು ಸ್ವೀಕೃತವಾಗದ ಕಾರಣ ಈವರೆಗೆ ಆಧಾರ್ ಕಾರ್ಡ್ ಬಂದಿರಲಿಲ್ಲ. ಆಧಾರ್ ಕಾರ್ಡ್ ಇಲ್ಲದೆ ಕಳೆದ ಒಂದೂವರೆ ವರ್ಷದಿಂದ ಮಾಸಾಶನ ಸ್ಥಗಿತವಾಗಿತ್ತು. ಜನತಾದರ್ಶನ ಮೂಲಕ ಸಮಸ್ಯೆ ಸರಿಪಡಿಸಲಾಗಿದೆ” ಎಂದು ಸಚಿವರಿಗೆ ಧನ್ಯವಾದ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಲದೆ, ಮಾಸಾಶನ, ಮನೆ ಮಂಜೂರಾತಿ, ವಿಧವಾ ವೇತನ, ಭೂ ದಾಖಲಾತಿ ಸೇರಿದಂತೆ ಹಲವು ಸಮಸ್ಯೆಗಳನ್ನು ಹೊತ್ತು ಬಂದ ಕೆಲ ಸಾರ್ವಜನಿಕರಿಗೆ ಸ್ಥಳದಲ್ಲೇ ಪರಿಹಾರ ಒದಗಿಲಾಗಿದೆ. ಇನ್ನೂ ಕೆಲವರಿಗೆ ಸಮಯಾವಕಾಶ ನೀಡಿ ಸಮಸ್ಯೆಗಳನ್ನು ಪರಿಹರಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಶಿಕ್ಷಕರ ಸಂಘರ್ಷ; ಶಾಲೆಗೆ ಬೀಗ ಜಡಿದು ಪ್ರತಿಭಟನೆ

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಿ. ಶಿಖಾ, ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ ಎಸ್ ನೇಮಗೌಡ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ ಸೇರಿದಂತೆ ಹಲವು ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...