ಗದಗ | ಕೂಸಿನ ಮನೆ ಯೋಜನೆ – ಗ್ರಾಮೀಣ ಮಕ್ಕಳಿಗೆ ತಾಯಿಯಾಗುವ ಸೌಭಾಗ್ಯ ಆರೈಕೆದಾರರಿಗೆ ದೊರಕಿದೆ: ರವಿ ಎ.ಎನ್

Date:

ಕೂಸಿನ ಮನೆ ಕಾರ್ಯಕ್ರಮವು ಮನರೇಗಾ ಯೋಜನೆಯ ಒಂದು ಭಾಗವಾಗಿದೆ. ಗ್ರಾಮೀಣ ಪ್ರದೇಶದ ಸಾಮಾನ್ಯ ವರ್ಗದ ಮಕ್ಕಳ ಲಾಲನೆ-ಪಾಲನೆಗೆ ರಾಜ್ಯ ಸರ್ಕಾರದ ಕೂಸಿನ ಮನೆ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಡಿ ಗ್ರಾಮೀಣ ಮಕ್ಕಳ ಲಾಲನೆ, ಪಾಲನೆ ಮಾಡುವ ಮೂಲಕ ಆ ಮಕ್ಕಳಿಗೆ ತಾಯಿಯಾಗಿ ಕೆಲಸ ಮಾಡೋ ಸೌಭಾಗ್ಯ ಅರೈಕೆದಾರರಿಗೆ ದೊರೆತಿದೆ ಎಂದು ರೋಣ ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ರವಿ ಎ.ಎನ್ ತಿಳಿಸಿದ್ದಾರೆ.

ಗದಗ ಜಿಲ್ಲೆಯ ರೋಣದಲ್ಲಿ ತಾಲೂಕು ಪಂಚಾಯಇ ಆಯೋಜಿಸಿದ್ದ ಕೂಸಿನ ಮನೆ ಆರೈಕೆದಾರರಿಗೆ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು. “ಕೂಸಿನ ಮನೆ ಯೋಜನೆಯು ಸಹ ಮಹಿಳಾ ಸಭಲೀಕರಣ ಮಾಡುವ ದೃಷ್ಟಿಯಿಂದ ಆರಂಭವಾಗಿದೆ. ಗ್ರಾಮಗಳ ಬಂಧುಗಳು, ನೆರೆಹೊರೆಯವರು, ಗ್ರಾಮಸ್ಥರು ಗ್ರಾಮದಲ್ಲಿ ದುಡಿಯಲಿಕ್ಕೆ ಹೋಗುತ್ತಾರೆ ಆ ಸಂದರ್ಭದಲ್ಲಿ ಆರೈಕೆದಾರರು ಅವರ ಮಕ್ಕಳನ್ನು ಆರೈಕೆ ಮಾಡುವ ಕೆಲಸ ಮಾಡಬೇಕಾಗುತ್ತದೆ. ಆರೈಕೆದಾರರಿಗೂ ಮನರೇಗಾ ಯೋಜನೆಯಡಿ ವೇತನ ನೀಡಲಾಗುತ್ತದೆ” ಎಂದು ಹೇಳಿದರು.

“ಮಕ್ಕಳಿಗೆ ಪೌಷ್ಟಿಕಾಂಶವುಳ್ಳ ಆಹಾರವನ್ನು ಕೊಟ್ಟು ಆರೈಕೆ ಮಾಡಬೇಕು. ಇದರಿಂದಾಗಿ ಮಕ್ಕಳ ಪೌಷ್ಟಿಕಾಂಶದ ಕೊರತೆಯೂ ನೀಗುತ್ತದೆ. ಗ್ರಾಮೀಣ ಪ್ರದೇಶದ ಮಕ್ಕಳ ಹಾಗೂ ಮಹಿಳೆಯರ ಶ್ರಯೋಭಿವೃದ್ಧಿಯ ಉದ್ದೇಶದಿಂದ ರಾಜ್ಯ ಸರ್ಕಾರ ಕೂಸಿನ ಮನೆ ಕಾರ್ಯಕ್ರಮ ಜಾರಿಗೊಳಿಸಿದೆ. ಪ್ರಾರಂಭದಲ್ಲಿ ತಾಲೂಕಿನಲ್ಲಿ 10 ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೂಸಿನ ಮನೆ ಆರಂಭಿಸಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಐಇಸಿ ಸಂಯೋಜಕರಾದ ವೀರಭದ್ರಪ್ಪ ಸಜ್ಜನ ಮಾತನಾಡಿ, “ಗದಗ ಜಿಲ್ಲೆಯಲ್ಲಿ ಒಟ್ಟು 109 ಕೂಸಿನ ಮನೆಗಳನ್ನು ಆರಂಭಿಸುವ ಗುರಿ ಹೊಂದಲಾಗಿದೆ. ಅದರಂತೆ ಮೊದಲ ಹಂತದಲ್ಲಿ 29 ಕೂಸಿನ ಮನೆಗಳನ್ನು ಜಿಲ್ಲೆಯಾದ್ಯಂತ ಆರಂಭಿಸಲಾಗುತ್ತಿದ್ದು, ರೋಣ ತಾಲೂಕಿನಲ್ಲಿ ಒಟ್ಟು 10 ಕೂಸಿನ ಮನೆಗಳನ್ನು ಅರಂಭಿಸಲಾಗುತ್ತಿದೆ” ಎಂದರು.

ಶಿಬಿರದಲ್ಲಿ ರಿಯಾಜ ಖತೀಬ್ ಸಹಾಯಕ ನಿರ್ದೇಶಕರು(ಗ್ರಾಮೀಣ ಉದ್ಯೋಗ), ಶಿವಯೋಗಿ ರಿತ್ತಿ ಸಹಾಯಕ ನಿರ್ದೇಶಕರು (ಪಂಚಾಯತ ರಾಜ್), ಶ್ರೀಮತಿ ಮಂಜುಳಾ ಗುರಾಣಿ ಹಿರಿಯ ಮೇಲ್ವಿಚಾರಕರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ರೋಣ, , ಅಬ್ಬಿಗೇರಿ, ಹೊಸಳ್ಳಿ, ಕುರಹಟ್ಟಿ, ಕೌಜಗೇರಿ, ಬೆಳವಣಿಕಿ, ಹೊಳೆ ಆಲೂರು, ಹೊಳೆಮಣ್ಣೂರು ಗ್ರಾಮ ಪಂಚಾಯತಿಯ ಕೂಸಿನ ಮನೆ ಆರೈಕೆದಾರರು ಭಾಗವಹಿದ್ದರು. ತಾಲೂಕು ಪಂಚಾಯತ ಐಇಸಿ ಕೊ ಅರ್ಡಿನೇಟರ್ ಮಂಜುನಾಥ ಅವರು ನಿರೂಪಿಸಿ ವಂದಿಸಿದರು….

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...