ಗದಗ | ಸತ್ಕಾರ್ಯಗಳಿಗೆ ಸಮುದಾಯ ಭವನ ಸದ್ಬಳಕೆಯಾಗಲಿ: ಸಚಿವ ಎಚ್.ಕೆ ಪಾಟೀಲ

Date:

ಹತ್ತು ಹಲವು ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಗಳಿಗೆ ಅನುಕೂಲವಾಗಲು ಸರ್ಕಾರದ ವಿಶೇಷ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಸುಸಜ್ಜಿತ ಸಮುದಾಯ ಭವನಗಳು ಸತ್ಕಾರ್ಯಗಳಿಗೆ ಸದ್ಬಳಕೆಯಾಗಬೇಕು ಎಂದು ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು ಖಾತೆಯ ಸಚಿವ ಡಾ.ಎಚ್.ಕೆ ಪಾಟೀಲ ಹೇಳಿದರು.

ಗದಗ ತಾಲೂಕಿನ ಕಲ್ಲೂರ ಗ್ರಾಮದಲ್ಲಿ ಮೈಲಾರಲಿಂಗೇಶ್ವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಸಮುದಾಯ ಭವನವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ದೇವಸ್ಥಾನ ನಿರ್ಮಾಣದಿಂದ ಗ್ರಾಮದಲ್ಲಿ ಧರ್ಮ ಜಾಗೃತಿ, ಪರಸ್ಪರರಲ್ಲಿ ಸೌಹಾರ್ದತೆ ಬೆಳೆಯಬೇಕು. ಆ ನಿಟ್ಟಿನಲ್ಲಿ ಸರ್ಕಾರ ನೀಡಿದ ಹಣದಿಂದ ಇಂಥಹ ಗುಣಮಟ್ಟದ ಕಾಮಗಾರಿಗಳು ನಡೆಯಬೇಕು. ಗ್ರಾಮೀಣ ಭಾಗ ಅಭಿವೃದ್ಧಿ ಹೊಂದಬೇಕು” ಎಂದರು.

ಮುಕ್ತಿಮಂದಿರದ ವಿಮಲ ರೇಣುಕ ವೀರ ಮುಕ್ತಿಮಿನಿ ಶಿವಾಚಾರ್ಯ ಸ್ವಾಮಿಜಿ ಸಾನಿದ್ಯ ವಹಿಸಿ ಮಾತನಾಡಿರು. “ಮನುಷ್ಯ ಇಂದು ಧರ್ಮವಂತನಾಗಿ ಬಾಳುವುದನ್ನು ಕಲಿಯಬೇಕು. ಮೈಲಾರಲಿಂಗೇಶ್ವರ ಸಾಕ್ಷಾತ್ ಶಿವನ ಅವತಾರ ಅಂಥ ಜಾಗೃತ ತಾಣದಲ್ಲಿ ನಿತ್ಯ ಪೂಜಾ ಕೈಂಕರ್ಯಗಳು, ಧಾರ್ಮಿಕ ವಿಧಾನಗಳು ನಡೆಯಬೇಕು. ದೇವಸ್ಥಾನದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಪ್ರತಿಯೋಬ್ಬರು ಧರ್ಮದ ಹಾದಿಯಲ್ಲಿ ನಡೆದಾಗ ಜೀವನ ಸಾರ್ಥಕವಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಕೆಆರ್‌ಐಡಿಎಲ್‌ನ ಅನಿಲ ಹಾಗೂ ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕ ಗಂಗಾಧರ ಶಿರೋಳ ಸೇರಿದಂತೆ ಹಲವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಲಡ್ಡುಮುತ್ಯಾ ಸ್ವಾಮಿಜಿ, ಅಪ್ಪಣ್ಣ ಇನಾಮತಿ, ಎಂ.ಡಿ. ಬಟ್ಟೂರ, ಬಸವರಾಜ ಬಡ್ನಿ, ಹೇಮರಡ್ಡಿ ಹೊಸಮನಿ, ಫಕೀರೇಶ ಹಿರೇಮನಿ, ಬಿ.ವ್ಹಿ. ಸುಂಕಾಪೂರ, ದೇವಸ್ಥಾನ ಸಮಿತಿಯ ಮಹೇಶ ಕರಕಣ್ಣವರ, ಜಗನ್ನಾಥ ಕಮ್ಮಾರ, ಯಲ್ಲರಡ್ಡಿ ನೀಲಣ್ಣವರ, ನಿಂಗರಡ್ಡಿ ಚಿಕ್ಕರಡ್ಡಿ, ಗಂಗಪ್ಪ ಕತ್ತಿ, ಪ್ರಕಾಶ ನೀಲಣ್ಣವರ, ಮಂಜುನಾಥ ಕಮ್ಮಾರ, ಲಿಂಗರಾಜ ಕೈಹುಟ್ಟಿನ, ಸಿದ್ಧಲಿಂಗೇಶ ಕರಕಣ್ಣವರ, ಮಹಾಂತೇಶ ಮರ್ಚಣ್ಣವರ, ಮಲ್ಲಪ್ಪ ನಾರಾಯಣಪೂರ, ವೀರಪ್ಪ ಮುಶಣ್ಣವರ, ರಮೇಶ ಕಮ್ಮಾರ ಸೇರಿದಂತೆ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಭವಿಷ್ಯವನ್ನು ಸುಗಮಗೊಳಿಸಲು ಕೆರಿಯರ್ ಮೇಳ ಪೂರಕವಾಗಲಿ: ಸಿ.ಎನ್.ಶ್ರೀಧರ

"ಇಂದಿನ ಸ್ಪರ್ಧಾತ್ಮಕ ದಿನಗಳಲ್ಲಿ ವಿದ್ಯಾರ್ಥಿಗಳು ಭವ್ಯ ಭವಿಷ್ಯ ರೂಪಿಸಿಕೊಳ್ಳಲು ಉದ್ಯೋಗಕ್ಕಾಗಿ ಓದುವದು...

ಗದಗ | ಕುಡಿಯುವ ನೀರಿಗಾಗಿ ಕೊಡ, ಬಿಂದಿಗೆ ಹಿಡಿದು ಮಹಿಳೆಯರು ಪ್ರತಿಭಟನೆ

ನರಗುಂದ ನಗರದಲ್ಲಿ ಕುಡಿಯುವ ನೀರಿಗಾಗಿ ಹೋರಾಟ ನರಗುಂದ ನಗರದ ಮಾರುತಿ ನಗರ...

ಗದಗ | ಭಾರಿ ಆಲಿಕಲ್ಲು ಮಳೆ; ಗ್ರಾಮಸ್ಥರಲ್ಲಿ ಅಚ್ಚರಿ

ಗದಗ ಜಿಲ್ಲೆಯ ರೋಣ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಿನ್ನೆ ಸಂಜೆ...

ಗದಗ |ಎಸ್ ಎಸ್.ಎಲ್.ಸಿ. ಪರೀಕ್ಷೆ-1: ತಾಲೂಕು, ಜಿಲ್ಲಾ ಮಟ್ಟದಲ್ಲಿ ಪ್ರಥಮ, ದ್ವಿತೀಯ ಸ್ಥಾನ ಪ್ರೋತ್ಸಾಹಧನ

ಗದಗ ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಿಳಿಸುವುದೇನೆಂದರೆ 2026ನೇ ಸಾಲಿನ ಎಸ್.ಎಸ್.ಎಲ್.ಸಿ...