ಗದಗ | ವಿಶ್ವಕರ್ಮ ಜಯಂತಿ ಆಚರಣೆ ನಮ್ಮೆಲ್ಲರಿಗೂ ಪ್ರೇರಣೆ ಆಗಲಿ: ಸಚಿವ ಎಚ್.ಕೆ ಪಾಟೀಲ್

Date:

ಮನುಷ್ಯನ ಬದುಕನ್ನು ಸುಂದರವಾಗಿಸೋ ಸಮುದಾಯ ವಿಶ್ವಕರ್ಮ ಸಮುದಾಯ. ದೇವಶಿಲ್ಪಿ ವಿಶ್ವಕರ್ಮ ಜಯಂತಿ ಆಚರಣೆ ನಮ್ಮೆಲ್ಲರಿಗೂ ಪ್ರೇರಣೆ ಆಗಬೇಕು ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು ಹಾಗೂ ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ ಪಾಟೀಲ್ ಹೇಳಿದರು.

ಗದಗದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಮನುಷ್ಯನ ವಿಕಸನ ಆಗಿದ್ದೆಲ್ಲ ವಿಶ್ವಕರ್ಮರಿಂದ. ಒಳ್ಳೆಯದನ್ನು ಕಾಣಿಸಬೇಕು, ಗ್ರಹಿಸಬೇಕು, ಸೂಕ್ಷ್ಮ ಇದ್ದದನ್ನು ಕಾಣಿಸಬೇಕು, ಆನಂದಿಸಬೇಕು ಇವುಗಳು ಸಾಧ್ಯವಾಗುವದು ವಿಶ್ವಕರ್ಮರಿಂದ ಮಾತ್ರ. ಬಡಿಗ, ಕಮ್ಮಾರ, ಶಿಲ್ಪಿ, ಕಂಬಾರ, ಅಕ್ಕಸಾಲಿಗರುಗಳು ಮಾಡುವ ಕೆಲಸದಿಂದಲೇ ಇಂದು ನಾಗರಿಕ ಸಮಾಜ ಸುಂದರವಾಗಿ ಕಾಣುವಂತೆ ಸಾಧ್ಯವಾಗಿದೆ. ನಮ್ಮ ನಾಗರಿಕ ಬದುಕು ಸುಂದರವಾಗಿ ಕಾಣುವಲ್ಲಿ ಪ್ರತಿಯೊಂದು ಹಂತದಲ್ಲಿ ವಿಶ್ವಕರ್ಮರ ಶ್ರಮ ಅಡಗಿರುತ್ತದೆ” ಎಂದರು.

“ಅಕ್ಕಸಾಲಿಗರು ಮಾಡುವಂತಹ ಆಭರಣಗಳ ವಿನ್ಯಾಸದ ಕೆಲಸದಿಂದಾಗಿ ನಮ್ಮ ನಾಗರಿಕರನ್ನು, ವಿಶೇಷವಾಗಿ ಮಹಿಳೆಯರನ್ನು ಸಂತುಷ್ಟರನ್ನಾಗಿಸುತ್ತದೆ. ಇತಿಹಾಸ ಅವಲೋಕನೆ ಶಿಲ್ಪಿಯ ಕೆಲಸದಿಂದ ಮಾತ್ರ ಸಾಧ್ಯವಾಗಿದ್ದು, ಶಿಲ್ಪಿಗಳು ಕೆತ್ತಿದ ನಾನಾ ಶಾಸನಗಳು ಹಾಗೂ ಸ್ಮಾರಕಗಳಿಂದ ಇಂದು ನಾವು ಇತಿಹಾಸ ಅಧ್ಯಯನ ಮಾಡಲು ಸಾಧ್ಯವಾಗಿದೆ. ನಮ್ಮತನವನ್ನು ನಮಗೆ ತೋರಿಸುವಲ್ಲಿ ಶಿಲ್ಪಿಯ ಪಾತ್ರ ಮಹತ್ವದಾಗಿದ್ದು ತಾವೆಲ್ಲರೂ ಇತಿಹಾಸಕಾರರಾಗಿದ್ದಿರಿ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕುರ್ತಕೋಟಿಯಲ್ಲಿ ವಿಶ್ವಕರ್ಮರಿಗೆ ಕೌಶಲ್ಯಭಿವೃದ್ಧಿಗಾಗಿ ವಿಶೇಷ ಯೋಜನೆ ಕೈಗೊಳ್ಳಲಾಗಿದೆ. ರಾಜ್ಯದಲ್ಲಿಯೇ ಗ್ರಾಮೀಣ ಮಟ್ಟದಲ್ಲಿ ವಿಶ್ವಕರ್ಮರಿಗೆ ಉಪಯುಕ್ತವಾಗುವಂತಹ ದೊಡ್ಡ ಯೋಜನೆ ಇದಾಗಿದ್ದು ಶೀಘ್ರವೇ ಈ ಕೌಶಲ್ಯಾಭಿವೃದ್ಧಿ ಕೇಂದ್ರವನ್ನು ಉದ್ಘಾಟಿಸಲಾಗುವದು. ಬರುವ ದಿನಗಳಲ್ಲಿ ಇದೊಂದು ಉಪಯುಕ್ತ ಕೇಂದ್ರವಾಗಲಿದೆ. ಮನುಷ್ಯ ಬದುಕಿನಲ್ಲಿ ನಿಮ್ಮ ಈ ಸೃಷ್ಠಿಯಿಂದ ಹೆಚ್ಚು ಜನರÀ ಬದುಕನ್ನು ಸುಂಸಕೃತರನ್ನಾಗಿಸುವ, ಸುಂದರವನ್ನಾಗಿಸುವ ಹಾಗೂ ನಮ್ಮತನವನ್ನು ಉಳಿಸಿಕೊಳ್ಳಲು ತುಂಬಾ ಸಹಕಾರಿಯಾಗಲಿದೆ. ಅಲ್ಲದೇ ಗದಗ ನಗರದಲ್ಲಿ ವಿಶ್ವಕರ್ಮ ವೃತ್ತ ನಿರ್ಮಾಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದ್ದು ಮುಂದಿನ ವಿಶ್ವಕರ್ಮ ಜಯಂತಿ ಕಾರ್ಯಕ್ರಮದ ಮೆರವಣಿಗೆಗೆ ವಿಶ್ವಕರ್ಮ ನೂತನ ವೃತ್ತದಿಂದಲೇ ಚಾಲನೇ ನೀಡಲಾಗುವುದು” ಎಂದು ಸಚಿವ ಎಚ್.ಕೆ.ಪಾಟೀಲ ಅವರು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಆರ್.ಡಿ.ಕಡ್ಲಿಕೊಪ್ಪ, ವೀರಭದ್ರಪ್ಪ ಕಮ್ಮಾರ, ಲ್ಲಾಧಿಕಾರಿ ವೈಶಾಲಿ.ಎಂ.ಎಲ್, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ, ಡಿ.ವೈ.ಎಸ್.ಪಿ. ಸಂಕದ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಹಿರೇಮಠ, ಗದಗ ಜಿಲ್ಲಾ ವಿಶ್ವಕರ್ಮ ಮಹಸಭಾ ಜಿಲ್ಲಾಧ್ಯಕ್ಷರಾದ ದೇವೆಂದ್ರಪ್ಪ ಬಡಿಗೇರ, ಗಣ್ಯರಾದ ಬಿ.ಬಿ.ಅಸೂಟಿ ಸೇರಿದಂತೆ ವಿಶ್ವಕರ್ಮ ಸಮಾಜದ ಜಿಲ್ಲಾ ಹಾಗೂ ತಾಲೂಕು ಸಂಘಟನೆಗಳ ಪದಾಧಿಕಾರಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಭವಿಷ್ಯವನ್ನು ಸುಗಮಗೊಳಿಸಲು ಕೆರಿಯರ್ ಮೇಳ ಪೂರಕವಾಗಲಿ: ಸಿ.ಎನ್.ಶ್ರೀಧರ

"ಇಂದಿನ ಸ್ಪರ್ಧಾತ್ಮಕ ದಿನಗಳಲ್ಲಿ ವಿದ್ಯಾರ್ಥಿಗಳು ಭವ್ಯ ಭವಿಷ್ಯ ರೂಪಿಸಿಕೊಳ್ಳಲು ಉದ್ಯೋಗಕ್ಕಾಗಿ ಓದುವದು...

ಗದಗ | ಕುಡಿಯುವ ನೀರಿಗಾಗಿ ಕೊಡ, ಬಿಂದಿಗೆ ಹಿಡಿದು ಮಹಿಳೆಯರು ಪ್ರತಿಭಟನೆ

ನರಗುಂದ ನಗರದಲ್ಲಿ ಕುಡಿಯುವ ನೀರಿಗಾಗಿ ಹೋರಾಟ ನರಗುಂದ ನಗರದ ಮಾರುತಿ ನಗರ...

ಗದಗ | ಭಾರಿ ಆಲಿಕಲ್ಲು ಮಳೆ; ಗ್ರಾಮಸ್ಥರಲ್ಲಿ ಅಚ್ಚರಿ

ಗದಗ ಜಿಲ್ಲೆಯ ರೋಣ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಿನ್ನೆ ಸಂಜೆ...

ಗದಗ |ಎಸ್ ಎಸ್.ಎಲ್.ಸಿ. ಪರೀಕ್ಷೆ-1: ತಾಲೂಕು, ಜಿಲ್ಲಾ ಮಟ್ಟದಲ್ಲಿ ಪ್ರಥಮ, ದ್ವಿತೀಯ ಸ್ಥಾನ ಪ್ರೋತ್ಸಾಹಧನ

ಗದಗ ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಿಳಿಸುವುದೇನೆಂದರೆ 2026ನೇ ಸಾಲಿನ ಎಸ್.ಎಸ್.ಎಲ್.ಸಿ...