ಗದಗ | ಮಹಾಯೋಗಿ ವೇಮನರ ತತ್ವ-ಸಿದ್ಧಾಂತಗಳು ಮಾನವ ಕಲ್ಯಾಣಕ್ಕೆ ಪೂರಕ: ಪ್ರೊ. ರಮೇಶ್ ಕಲ್ಲನಗೌಡರ

Date:

ಮಹಾಯೋಗಿ ವೇಮನರು ಭೋಗ ಜೀವನದ ದಾಸರಾಗಿ, ವೈರಾಗ್ಯವನ್ನು ತಾಳಿ, ಇಡೀ ಮಾನವ ಸಂಕುಲಕ್ಕೆ ಬದುಕಿನ ನಶ್ವರತೆಯನ್ನು ತಿಳಿಸುತ್ತಾ ವಾಸ್ತವಿಕತೆಯ ಬೆಳಕನ್ನು ಪರಿಚಯಿಸಿದ್ದಾರೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಕನ್ನಡ ಪ್ರಾಧ್ಯಾಪಕ ಡಾ.ರಮೇಶ್ ಕಲ್ಲನಗೌಡರ ತಿಳಿಸಿದರು.

ಗದಗ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಶುಕ್ರವಾರದಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜರುಗಿದ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಮಹಾಯೋಗಿ ವೇಮನರ ತತ್ವ-ಸಿದ್ಧಾಂತಗಳು ಇಡೀ ಮಾನವ ಕಲ್ಯಾಣಕ್ಕೆ ಪೂರಕವಾದವುಗಳು. ಮಹಾಯೋಗಿ ವೇಮನರ ಕಾವ್ಯ ಸೃಷ್ಟಿಯಲ್ಲಿ ಅಲೌಕಿಕ ಮಾರ್ಗದ ಸಾರ್ಥಕ ಹಾದಿಯನ್ನು ತೋರುತ್ತ ಶರಣರ ತತ್ವ ಚಿಂತನೆ ಪರಂಪರೆಯನ್ನು ನಾವೆಲ್ಲ ಕಾಣಬಹುದಾಗಿದೆ. ನಿರುಪಯೋಗಿ, ದುಶ್ಚಟಗಳ ದಾಸರಾಗಿದ್ದ ವೇಮನರನ್ನು ಅತ್ತಿಗೆ ಹೇಮರೆಡ್ಡಿ ಮಲ್ಲಮ್ಮ ಮೈದುನನ ಮನ ತಿದ್ದುವಲ್ಲಿ ಪ್ರಯತ್ನಿಸಿ ಸಫಲರಾದರು” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಆಸೆ-ಆಮಿಷಗಳಿಗೆ ಒಳಪಟ್ಟು ಭೋಗಿಯಾದಂತಹ ವೇಮನರು ತ್ಯಾಗ ಜೀವನದ ಸಾರ್ಥಕತೆಯೊಂದಿಗೆ ಮನುಕುಲದ ಉ‌ದ್ಧಾರಕ್ಕಾಗಿ ಮಹಾ ಯೋಗಿಯಾದರು” ಎಂದು ನುಡಿದರು.

“ಮಹಾಯೋಗಿ ವೇಮನರು ಶ್ರೇಷ್ಠ ವಚನಕಾರ, ಕವಿ, ಸಮಾಜ ಚಿಂತಕ, ಮಾನವ ಕುಲದ ಏಳಿಗೆಗಾಗಿ ಶ್ರಮಿಸಿದ ಮಹಾಯೋಗಿಯಾಗಿದ್ದರು. ಅವರು ಸಾರ್ವಕಾಲಿಕ ದಾರ್ಶನಿಕರಾಗಿದ್ದು, ಅವರ ತತ್ವ ಸಿದ್ಧಾಂತಗಳು ಇಂದಿಗೂ ಮಾದರಿಯಾಗಿವೆ. ಪ್ರಸ್ತುತ ಯುವ ಪೀಳಿಗೆಗೆ ಮಹಾಯೋಗಿ ವೇಮನರ ತತ್ವ ಸಿದ್ಧಾಂತಗಳನ್ನು ತಿಳಿಸುವ ಕಾರ್ಯವಾಗಬೇಕಾಗಿದೆ” ಎಂದರು.

ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ. ಮಾತನಾಡಿ, “ಸಾಮಾಜಿಕ ಸಮಸ್ಯೆಗಳನ್ನು ತೊಡೆದು ಹಾಕಲು ಹಾಗೂ ಸಾಮಾಜಿಕ ಸಮಾನತೆ ತರಲು ಅನೇಕ ದಾರ್ಶನಿಕರು ಶ್ರಮಿಸಿದ್ದಾರೆ. ಅಂತಹವರಲ್ಲಿ ಮಹಾಯೋಗಿ ವೇಮನರೂ ಒಬ್ಬರಾಗಿದ್ದಾರೆ. ಕನ್ನಡದಲ್ಲಿ ಸರ್ವಜ್ಞ, ತಮಿಳಿನ ತಿರುವಳ್ಳುವರ್ ಅವರಂತೆ ತೆಲುಗಿಗೆ ವೇಮನರು ಮಹಾಯೋಗಿಯಾಗಿದ್ದಾರೆ. ವೇಮನರು ಪದ್ಯಗಳ ಮೂಲಕ ಜನ ಸಾಮಾನ್ಯರಿಗೆ ತಿಳುವಳಿಕೆ ನೀಡಿದ್ದು, ಅವರ ತತ್ವಾದರ್ಶಗಳು ಸರ್ವಕಾಲಿಕವಾಗಿವೆ” ಎಂದರು.

ಈ ಸುದ್ದಿ ಓದಿದ್ದೀರಾ? ಗದಗ | ರ‍್ಯಾಪಿಡ್ ಆಕ್ಷನ್ ಫೋರ್ಸ್‌ನಿಂದ ಜ 25ರವರೆಗೆ ರೂಟ್ ಮಾರ್ಚ್

ಕಾರ್ಯಕ್ರಮದಲ್ಲಿ ಬಸವಯ್ಯ ಶಾಸ್ತ್ರಿ ಸಾನಿಧ್ಯ ವಹಿಸಿದ್ದರು. ಸಮಾಜದ ಮುಖಂಡರುಗಳಾದ ರವಿ ಮೂಲಿಮನಿ, ಪ್ರೇಮಾ ಮೇಟಿ, ಶೇಖಣ್ಣ ಗದ್ದಿಕೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಹಿರೇಮಠ ಸೇರಿದಂತೆ ಸಮಾಜದ ಗಣ್ಯರು, ಮುಖಂಡರುಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...