ಗದಗ | ಮೆಕ್ಕೆಜೋಳ ಖರೀದಿ ಕೇಂದ್ರದಿಂದ ರೈತರಿಗೆ ಯಾವುದೇ ಉಪಯೋಗವಾಗಿಲ್ಲ: ಮಂಜುನಾಥ ಮಾಗಡಿ ಆರೋಪ

Date:

ಮೆಕ್ಕೆಜೋಳ ಖರೀದಿ ಕೇಂದ್ರದಿಂದ ರೈತರಿಗೆ ಯಾವುದೇ ಉಪಯೋಗವಾಗಿಲ್ಲ. ಸರ್ಕಾರವು ಕಾಟಾಚಾರಕ್ಕೆ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸುವುದಾಗಿ ಹೇಳಿದೆ. ಆದರೆ ಸಮರ್ಪಕವಾಗಿ ಅನುಷ್ಠಾನವಾಗಿಲ್ಲ ಎಂದು ಸಮಗ್ರ ರೈತಪರ ಹೋರಾಟ ವೇದಿಕೆ ಅಧ್ಯಕ್ಷ ಮಂಜುನಾಥ ಮಾಗಡಿ ಆರೋಪಿಸಿದರು.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಪೂರ್ಣಾಜಿ ಕರಾಟೆ ಅವರ ಮಿಲ್ಲಿನಲ್ಲಿ ನಡೆದ ರೈತಪರ ಹೋರಾಟದ ಸಭೆಯಲ್ಲಿ ಮಾತನಾಡಿದ ಅವರು, “ರೈತರು ಬೆಳೆದ ಎಲ್ಲ ಮೆಕ್ಕೆಜೋಳವನ್ನು ಖರೀದಿಸಲು ಜಿಲ್ಲಾಧಿಕಾರಿ ಕ್ರಮ ವಹಿಸದಿದ್ದರೆ ರೈತರು ಮತ್ತೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ರೈತ ಮುಖಂಡ ರವಿಕಾಂತ ಅಂಗಡಿ ಮಾತನಾಡಿ, “ರೈತರು ಬೆಳೆದ ಬೆಳೆಗೆ ಯೋಗ್ಯ ಬೆಲೆ ಸಿಗಬೇಕೆಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಬೆಂಬಲ ಬೆಲೆ ನಿಗದಿಪಡಿಸಿದೆ. ರಾಜ್ಯದಲ್ಲಿ ಈ ವರ್ಷ ರೈತರು ಅತಿ ಹೆಚ್ಚಿನ ಪ್ರಮಾಣದಲ್ಲಿ ಮೆಕ್ಕೆಜೋಳ ಬೆಳೆದಿದ್ದಾರೆ. ಹೀಗಾಗಿ, ಬೆಲೆ ಕುಸಿತವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಲಕ್ಷ್ಮೇಶ್ವರ ಪಟ್ಟಣದಲ್ಲಿ ಬೆಂಬಲ ಬೆಲೆಯೊಂದಿಗೆ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸುವಂತೆ ಆಗ್ರಹಿಸಿ 18 ದಿನಗಳ ಹೋರಾಟ ನಡೆಸಲಾಯಿತು. ಸರ್ಕಾರದ ಗಮನ ಸೆಳೆದ ನಂತರ ಖರೀದಿ ಕೇಂದ್ರ ಆರಂಭಿಸಲು ಅನುಮತಿ ದೊರೆಯಿತು. ಆದರೆ, ಈ ವ್ಯವಸ್ಥೆ ಸಮರ್ಪಕವಾಗಿಲ್ಲ” ಎಂದು ಕಿಡಿಕಾರಿದರು.

“ಸರ್ಕಾರದ ದೋರಣೆಯಿಂದಾಗಿ ಸಾವಿರಾರು ರೈತರು ಬೆಳೆದಿರುವ ಬೆಳೆಗೆ ಬೆಂಬಲ ಬೆಲೆ ಸಿಗುತ್ತಿಲ್ಲ. ಹೋರಾಟ ನಿಲ್ಲಿಸಿದ ನಂತರ ಸರ್ಕಾರಿ ಅಧಿಕಾರಿಗಳು ಹಾಗೂ ಖರೀದಿ ಕೇಂದ್ರದ ಅಧಿಕಾರಿಗಳು ಇಷ್ಟಬಂದಂತೆ ಮೆಕ್ಕೆಜೋಳ ಖರೀದಿ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ” ಎಂದು ರವಿಕಾಂತ ಅಂಗಡಿ ಹೇಳಿದರು.

“ಮೆಕ್ಕೆಜೋಳ ಖರೀದಿಗೆ ನೋಂದಣಿ ಮಾಡಿಸುವುದನ್ನು ಸ್ಥಗಿತಗೊಳಿಸಲಾಗಿದ್ದು, ಇದನ್ನು ಪುನರಾರಂಭಿಸಬೇಕು. ಈಗಾಗಲೇ ನೋಂದಣಿ ಮಾಡಿರುವ ಎಲ್ಲ ರೈತರ ಪೂರ್ತಿ ಮೆಕ್ಕೆಜೋಳವನ್ನು ಖರೀದಿಸಬೇಕು. ಈ ಬಗ್ಗೆ ಸರ್ಕಾರ ಆದೇಶ ಹೊರಡಿಸಬೇಕು” ಎಂದು ಆಗ್ರಹಿಸಿದರು.

ಈ ವೇಳೆ ಮುಖಂಡರಾದ ಪೂರ್ಣಾಜಿ ಕರಾಟೆ, ನಾಗರಾಜ ಚಿಂಚಲಿ, ಚನ್ನಪ್ಪ ಷಣ್ಮುಖಿ, ಸೋಮಣ್ಣ ಡಾಣಗಲ್ಲ, ಹೊನ್ನಪ್ಪ ವಡ್ಡರ, ಸುರೇಶ ಹಟ್ಟಿ, ಟಾಕಪ್ಪ ಸಾತಪೂತೆ, ಗುರಪ್ಪ ಮುಳಗುಂದ. ಖಾನಸಾಬ್ ಸೂರಣಗಿ, ಪ್ರಕಾಶ ಕೊಂಚಿಗೇರಿಮಠ ಇದ್ದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು l ಮಲೆನಾಡಿನಲ್ಲಿ ಮಂಗಗಳ ಹಾವಳಿ; ಬೇಸತ್ತ ರೈತರು

ಕೇಂದ್ರ ಸರ್ಕಾರ ಘೋಷಿಸಿದ ಕನಿಷ್ಠ ಬೆಂಬಲ ಬೆಲೆ (MSP ₹2,400/ಕ್ವಿಂಟಲ್)ಯನ್ನು ಖಾತರಿಪಡಿಸಲು ರಾಜ್ಯ ಸರ್ಕಾರ ಖರೀದಿ ಕೇಂದ್ರಗಳನ್ನು ತೆರೆಯುವುದಾಗಿ ಘೋಷಿಸಿದ್ದರೂ, ಅನುಷ್ಠಾನದಲ್ಲಿ ತೀವ್ರ ವಿಳಂಬ, ಮಿತಿ ನಿಯಮಗಳು ಮತ್ತು ಸ್ಥಳೀಯ ಮಟ್ಟದಲ್ಲಿ ಕೇಂದ್ರಗಳು ಸರಿಯಾಗಿ ಕಾರ್ಯಾರಂಭ ಮಾಡದಿರುವುದು ರೈತರನ್ನು ಆತಂಕಕ್ಕೆ ದೂಡಿದೆ. ಅಲ್ಲದೆ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ(₹1,800-1,900) ಮಾರಾಟ ಮಾಡುವಂತಾಗಿದೆ. ಸರ್ಕಾರಿ ಯೋಜನೆಗಳು ಕಾಗದದ ಮೇಲೆಯೇ ಸೀಮಿತವಾಗಿ ಉಳಿದಿರುವುದು ರೈತರ ನಿರಾಶೆಗೆ ಮೂಲ ಕಾರಣವಾಗಿದೆ. ಇದರಿಂದ ರೈತರು ಮತ್ತೊಮ್ಮೆ ಹೋರಾಟ ಮಾಡುವಂತಾಗಿದ್ದು, ತುರ್ತಾಗಿ ಪೂರ್ಣ ಪ್ರಮಾಣದ ಖರೀದಿ, ಮಿತಿ ತೆರವು ಮತ್ತು ಸಮಯೋಚಿತ ಅನುಷ್ಠಾನದ ಅಗತ್ಯವಿದೆ. ಇಲ್ಲದಿದ್ದರೆ ರೈತರ ಸಂಕಷ್ಟ ಇನ್ನಷ್ಟು ಉಲ್ಬಣಗೊಳ್ಳಲಿದೆ. ಬೆಂಬಲ ಬೆಲೆಯಲ್ಲಿ ಖರೀದಿ ಕೇಂದ್ರ ತೆರೆಯುವ ಸರ್ಕಾರದ ಉದ್ದೇಶ ಉತ್ತಮವಾಗಿದ್ದರೂ, ಕಾರ್ಯರೂಪಕ್ಕೆ ಬಾರದಿರುವುದು ದುರದೃಷ್ಟಕರ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಮ್ ಜಯಂತಿಗೆ  ಸಿದ್ಧತೆ

ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನ ರಾಮ್ ಅವರ ಜಯಂತಿಗಳನ್ನು ಅರ್ಥಪೂರ್ಣವಾಗಿ ಮತ್ತು...

ಗದಗ | ಲಕ್ಷ್ಮೇಶ್ವರ ಬಸ್ ನಿಲ್ದಾಣದಲ್ಲಿ ಅಪಘಾತ; ಸಾರಿಗೆ ಬಸ್ ಹರಿದು ಮಹಿಳೆ ಸಾವು

ಕೆ.ಎಸ್.ಆರ್.ಟಿ.ಸಿ ಸಾರಿಗೆ ಬಸ್‌ ಡಿಕ್ಕಿ ಹೊಡೆದು ಗಾಯಗೊಂಡಿದ್ದ 48 ವರ್ಷದ ಚೆನ್ನಮ್ಮ...

ಗದಗ | ಭವಿಷ್ಯವನ್ನು ಸುಗಮಗೊಳಿಸಲು ಕೆರಿಯರ್ ಮೇಳ ಪೂರಕವಾಗಲಿ: ಸಿ.ಎನ್.ಶ್ರೀಧರ

"ಇಂದಿನ ಸ್ಪರ್ಧಾತ್ಮಕ ದಿನಗಳಲ್ಲಿ ವಿದ್ಯಾರ್ಥಿಗಳು ಭವ್ಯ ಭವಿಷ್ಯ ರೂಪಿಸಿಕೊಳ್ಳಲು ಉದ್ಯೋಗಕ್ಕಾಗಿ ಓದುವದು...

ಬೆಳಗಾವಿ | ರೈತರಿಗೆ ಕಬ್ಬಿನ ಬಿಲ್ ಪಾವತಿಸದ ಸಕ್ಕರೆ ಕಾರ್ಖಾನೆಗಳ ಮೇಲೆ ಸರ್ಕಾರಕ್ಕೆ ಯಾಕಷ್ಟು ಪ್ರೀತಿ?

ರೈತರು, ರಾಜಕೀಯವಾಗಿ ಎಚ್ಚರಿಕೆಯಿಂದ ನಡೆದುಕೊಳ್ಳುವಂತೆ ಸರ್ಕಾರಕ್ಕೆ ಸೂಚನೆ ನೀಡಿದ್ದು, ಮುಂದಿನ ಚುನಾವಣೆಯಲ್ಲಿ...