ಗದಗ | ವಿಶೇಷಚೇತನರಲ್ಲಿ ಆತ್ಮಸ್ಥೈರ್ಯ ಮೂಡಿಸುವ ಕೆಲಸವಾಗಬೇಕು: ಸಚಿವ ಎಚ್.ಕೆ ಪಾಟೀಲ

Date:

ವಿಶೇಷಚೇತನರಲ್ಲಿ ಆತ್ಮಸ್ಥೈರ್ಯ ಮೂಡಿಸುವ ಕೆಲಸವಾಗಬೇಕು. ಸಮಾಜದಲ್ಲಿ ವಿಕಲಚೇತನರನ್ನು ಅಶಕ್ತರು ಎಂಬ ಕೀಳರಿಮೆಯಿಂದ ನೋಡಬಾರದು ಎಂದು ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ತಿಳಿಸಿದರು.

ಗದಗ ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಲಾಗಿಲ್ಲ ‘ವಿಶ್ವ ವಿಕಲಚೇತನರ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ವಿಕಲಚೇತನರು ವಿಕಲತೆಯನ್ನು ಮೆಟ್ಟಿ ನಿಂತು ತಮ್ಮಲ್ಲಿ ಹುದುಗಿರುವ ಕಲೆಯನ್ನು ಪ್ರೋತ್ಸಾಹಿಸಬೇಕು. ವಿಕಲಚೇತನರನ್ನು ಇತರ ರೀತಿಯಿಂದ ಶಕ್ತನಾಗಿರುವವನು ಎಂದು ಜಗತ್ತು ಗುರುತಿಸುತ್ತಿದೆ. ವಿಕಲಚೇತನರು ಗಣಿತ, ಕಂಪ್ಯೂಟರ್ ಜ್ಞಾನ, ಸಂಗೀತ, ಸಾಹಿತ್ಯ, ಕಲೆ, ವಿವಿಧ ಹಂತದ ಸಮಾಜ ಸೇವೆಯಲ್ಲಿ ತಮ್ಮ ಶಕ್ತಿ ಹಾಗೂ ಯುಕ್ತಿಯಿಂದ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ವಿಕಲಚೇತನರಿಗೆ ಅನುಕಂಪ ತೋರದೇ ಅವಕಾಶ ಕೊಡಬೇಕು” ಎಂದರು.

“ಸಮಸ್ಯೆಗಳು ಎಷ್ಟೇ ಬಂದರೂ ಸಾಧಿಸಿ ತೋರಿಸಬೇಕು ಎನ್ನುವ ಛಲ ವಿಕಲಚೇತನರಲ್ಲಿದ್ದರೆ ಅವರು ದೇಶಕ್ಕೆ ದೊಡ್ಡ ಆಸ್ತಿಯಾಗುತ್ತಾರೆ. ಜಿಲ್ಲೆಯ ಪಂಚಾಕ್ಷರಿ ಗವಾಯಿಗಳ ಆಶ್ರಮವು ಕಣ್ಣಿಲ್ಲದವರಿಗೆ ಬದುಕು ಕಟ್ಟಿಕೊಳ್ಳುವ ಕಾರ್ಯ ನಿರಂತರವಾಗಿ ಮಾಡುತ್ತಿದೆ. ವಿಕಲಚೇತನರ ಸೇವೆಯಲ್ಲಿ ಗದಗ ಜಿಲ್ಲೆ ಅಗ್ರ ಸ್ಥಾನದಲ್ಲಿರಬೇಕು. ಸರ್ಕಾರವು ವಿಕಲಚೇತನರಿಗಾಗಿ ಜಾರಿಗೆ ತಂದಿರುವ ಸೌಲಭ್ಯಗಳು ಹಾಗೂ ಅನುಕೂಲತೆಗಳು ಶೀಘ್ರಗತಿಯಲ್ಲಿ ಅವರಿಗೆ ದೊರಕುವಂತಾಗಬೇಕು. ಸೌಲಭ್ಯಗಳು ಅವರಿಗೆ ತಲುಪುವಲ್ಲಿ ಏನಾದರೂ ತೊಂದರೆಯಾದರೆ ವಿಶೇಷ ಗಮನ ಹರಿಸಿ ಸಮಸ್ಯೆಗಳನ್ನು ಪರಿಹರಿಸಲಾಗುವುದು” ಎಂದು ಸಚಿವ ಡಾ.ಎಚ್.ಕೆ.ಪಾಟೀಲ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಅವರು ಮಾತನಾಡಿ, “ವಿಕಲಚೇತನ ಮಕ್ಕಳು ದೇವರ ಮಕ್ಕಳಿಗೆ ಸಮಾನ. ದೈಹಿಕ ವಿಕಲತೆ ಬಗ್ಗೆ ಕೀಳರಿಮೆ ಇಟ್ಟುಕೊಳ್ಳಬಾರದು. ಅವರಿಗೆ ದೇವರು ಬೇರೆ ರೀತಿಯಲ್ಲಿ ಅಗಾಧ ಶಕ್ತಿ ಕೊಟ್ಟಿರುತ್ತಾರೆ. ಜಿಲ್ಲೆಯ ವಿರೇಶ್ವರ ಪುಣ್ಯಾಶ್ರಮದ ಡಾ.ಪಂ. ಪುಟ್ಟರಾಜ ಗವಾಯಿಗಳು ಅಂಧರಾಗಿದ್ದರೂ ಸಹಿತ ಸಂಗೀತ ಕ್ಷೇತ್ರದಲ್ಲಿ ಜಗತ್ತಿಗೆ ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಅವರು ಕಣ್ಣಿಲ್ಲದಿದ್ದರೂ 12 ತರಹದ ವಿವಿಧ ವಾದ್ಯಗಳನ್ನು ನುಡಿಸುತ್ತಿದ್ದರು ಎಂಬುದು ನಮಗೆಲ್ಲರಿಗೂ ಹೆಮ್ಮೆಯ ವಿಷಯವಾಗಿದೆ. ವೀಲ್ ಚೇರ್ ಮೇಲೆ ಬದುಕು ಸವೆಸಿದ ಯು.ಕೆ. ದ ಸ್ಟೀಫನ್ ಹಾಕಿಂಗ್ ಎಂಬ ವಿಜ್ಞಾನಿ ಇಡೀ ಜಗತ್ತಿಗೆ ಭೌತಶಾಸ್ತ್ರ , ಗಣಿತ ಶಾಸ್ತ್ರದಲ್ಲಿ ಶ್ರೇಷ್ಟ ವಿಜ್ಞಾನಿಯಾಗಿ ಗುರುತಿಸಿಕೊಂಡರು. ಅಂಗವಿಕಲರ ಸರ್ವತೋಮುಖ ಬೆಳವಣಿಗೆಗೆ ಸರ್ಕಾರದಿಂದ ವಿತರಿಸಿದ ವಿಕಲಚೇತನರ ಸ್ಕಾಲರ್ ಶಿಪ್, ಸಾಧನ ಸಲಕರಣೆಗಳ ಸದ್ಭಳಕೆಯಾಗಬೇಕು” ಎಂದು ಸಲಹೆ ನೀಡಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ. ಗುರುಪ್ರಸಾದ ಮಾತನಾಡಿ, “ವಿಕಲಚೇತನರ ದಿನಾಚರಣೆಯನ್ನು 1992 ರಿಂದ ಅಚರಿಸಲಾಗುತ್ತಿದೆ. 2016ರಲ್ಲಿ ವಿಕಲಾಂಗಚೇತನರ ಅಧಿನಿಯಮ ಜಾರಿಗೆ ಬಂದಿತು. ಈ ಕಾಯ್ದೆಯಲ್ಲಿ ವಿಕಲಾಂಗ ಚೇತನರ ಹಕ್ಕುಗಳ ಮೇಲೆ ಹೆಚ್ಚಿನ ಆದ್ಯತೆ ಕೊಡಲಾಗಿದೆ ಹಾಗೂ 21 ತರಹದ ವಿವಿಧ ನ್ಯೂನತೆಗಳನ್ನು ಸಹ ಅಂಗವಿಕಲತೆಯನ್ನು ಗುರುತಿಸಲಾಗಿದೆ. ಸರ್ಕಾರದಿಂದ ವಿಕಲಚೇತನರಿಗೆ ಜಾರಿ ಮಾಡಿರುವ ವಿವಿಧ ಸೌಲಭ್ಯಗಳು ಅವರಿಗೆ ತ್ವರಿತಗತಿಯಲ್ಲಿ ದೊರಕುವಂತಾಗಬೇಕು” ಎಂದರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ವಿಕಲಚೇತನರಿಗೆ ಸನ್ಮಾನಿಸಲಾಯಿತು. ವಿಕಲಚೇತನರ ದಿನಾಚರಣೆ ಪ್ರಯುಕ್ತ ಏರ್ಪಡಿಸಲಾಗಿದ್ದ ವಿಕಲಚೇತನರಿಗಾಗಿ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ವಿಕಲಚೇತನರಿಗೆ ಟ್ರೈಸಿಕಲ್, ವೀಲ್‍ಚೇರ್ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಉಪವಿಭಾಗಾಧಿಕಾರಿ ಡಾ. ವೆಂಕಟೇಶ ನಾಯ್ಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮ ನಿರೂಪಣಾಧಿಕಾರಿ ಶ್ರೀಮತಿ ರಾಧಾ ಮಣ್ಣೂರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎ. ರಡ್ಡೇರ, ತಹಶೀಲ್ದಾರರಾದ ಶ್ರೀನಿವಾಸ ಕುಲಕರ್ಣಿ, ವಿಕಲಚೇತನರ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿರಹಟ್ಟಿ, ಮಾಗಡಿ ಗ್ರಾ.ಪಂ. ಸದಸ್ಯರಾದ ವೀರಯ್ಯ ಮಠಪತಿ, ಎಸ್.ಡಿ.ಎಂ.ಸಿ. ಅಧ್ಯಕ್ಷ ಬಸವರಾಜ ಕಡೆಮನಿ, ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಘ- ಸಂಸ್ಥೆಗಳು , ವಿವಿಧ ವಿಕಲಚೇತನರು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.

ಕು. ಸಂಗೀತಾ ಭರಮಗೌಡರ ಪ್ರಾರ್ಥಿಸಿದರು. ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿಕಾರಿ ಕೆ. ಮಹಾತೇಶ ಸರ್ವರಿಗೂ ಸ್ವಾಗತಿಸಿದರು. ಬಾಹುಬಲಿ ಜೈನರ ಕಾರ್ಯಕ್ರಮ ನಿರೂಪಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...