ಗದಗ | ಸೌಲಭ್ಯಗಳ ಕೊರತೆಯಿಂದ ಬೇಸತ್ತ ಜನ; ಗ್ರಾಮಸ್ಥರ ಗೋಳು ಕೇಳುವವರಿಲ್ಲ

Date:

ಗದಗಜಿಲ್ಲೆ ಶಿರಹಟ್ಟಿ ತಾಲೂಕಿನ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಕೊರತೆ, ಬಸ್ ಸಂಚಾರ ಇಲ್ಲ, ಶವ ಸಂಸ್ಕಾರಕ್ಕೆ ಸ್ಮಶಾನವಿಲ್ಲ, ನರೇಗಾ ಕೂಲಿ ಕೆಲಸ ಇಲ್ಲ ಈ ಕಾರಣಕ್ಕೆ ತಾಲೂಕಿನ ಗ್ರಾಮಸ್ಥರು ಪಟ್ಟಣಗಳತ್ತ ಗುಳೆ ಹೊರಟಿದ್ದಾರೆ.

ಹೀಗೆ ಹಡಗಲಿ ಗ್ರಾಮದ ಜನರ ಗೋಳು ನಿಜಕ್ಕೂ ಹೇಳತೀರದ್ದಾಗಿದೆ. ತಾಲೂಕಿನ ಅತಿ ಚಿಕ್ಕ ಗ್ರಾಮಗಳಲ್ಲಿ ಒಂದಾದ ಹಡಗಲಿ ಗ್ರಾಮವು ಹೆಬ್ಬಾಳ ಗ್ರಾಮ ಪಂಚಾಯ್ತಿಗೆ ಸೇರಿದ್ದು, ಒಬ್ಬ ಗ್ರಾಮ ಪಂಚಾಯಿತಿ ಸದಸ್ಯನನ್ನು ಒಳಗೊಂಡಿದೆ.

ಗ್ರಾಮದಲ್ಲಿ ಯಾರಾದರೂ ಸತ್ತರೆ ಹೂಳಲು ರುದ್ರಭೂಮಿ ಇಲ್ಲ. ಗ್ರಾಮದ ರೈತರೊಬ್ಬರ ಹೊಲದಲ್ಲಿ ಶವಸಂಸ್ಕಾರ ಮಾಡುತ್ತಿದ್ದಾರೆ. ಹಲವು ಬಾರಿ ರುದ್ರಭೂಮಿಗೆ ಜಮೀನು ಖರೀದಿ ಮಾಡುವಂತೆ ಹೆಣವನ್ನಿಟ್ಟು ಪ್ರತಿಭಟನೆ ಮಾಡಿ ತಹಸೀಲ್ದಾರರಿಗೆ‌ ಮನವಿ ನೀಡಿದ್ದರೂ ಅದಕ್ಕೆ ಸ್ಪಂದನೆ ದೊರೆತಿಲ್ಲ ಎಂಬುದು ಗ್ರಾಮಸ್ಥರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮದಲ್ಲಿ ಫ್ಲೋರೈಡ್ ನೀರು ಪೂರೈಕೆಯಾಗುತ್ತಿತ್ತು. ಇದನ್ನು ತಡೆಯಲು ಶುದ್ಧ ಕುಡಿಯುವ ನೀರಿನ ಘಟಕವನ್ನು ಸ್ಥಾಪಿಸಲಾಗಿತ್ತು. ಆದರೆ, ಮೂರು ವರ್ಷಗಳಿಂದ ಘಟಕ ಸ್ಥಗಿತಗೊಂಡಿದೆ. ಯಾರು ಇದನ್ನು ದುರಸ್ತಿಗೊಳಿಸುವ ಗೋಜಿಗೆ ಹೋಗಿಲ್ಲ. ಸದ್ಯ ಫ್ಲೋರೈಡ್‌ಯುಕ್ತ ನೀರೇ ಗ್ರಾಮಸ್ಥರಿಗೆ ಆಸರೆಯಾಗಿದೆ. ಶುದ್ಧ ಕುಡಿಯುವ ನೀರಿಗಾಗಿ ಕಾಯುತ್ತ ಕುಳಿತಿದ್ದಾರೆ.

ಸರ್ಕಾರ ಗ್ರಾಮೀಣ ಜನರು ಗುಳೆ ಹೋಗುವುದನ್ನು ತಪ್ಪಿಸಲು ನರೇಗಾ ಯೋಜನೆಯ ಅಡಿಯಲ್ಲಿ ಕೂಲಿ ಕೆಲಸ ನೀಡುತ್ತಿದೆ. ಆದರೆ, ಈ ಯೋಜನೆ ಒಂದೂವರೆ ವರ್ಷದಿಂದ ಗ್ರಾಮಕ್ಕೆ ಮರೀಚಿಕೆಗಿದೆ. ಗ್ರಾಮದ ಒಬ್ಬ ವ್ಯಕ್ತಿಗೂ ನರೇಗಾ ಯೋಜನೆಯಡಿ ಕೂಲಿ ಕೆಲಸ ನೀಡುತ್ತಿಲ್ಲ. ಬೇರೆ ಗ್ರಾಮಸ್ಥರಿಗೆ ಕೂಲಿ ನೀಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಸದ್ಯ ಬರಗಾಲ ಎದುರಿಸುತ್ತಿರುವ ರೈತರು ಕೂಲಿಗಾಗಿ ಗುಳೆ ಹೋಗುತ್ತಿದ್ದಾರೆ. ನರೇಗಾದ ಅಡಿ ಕೆಲಸ ಹಾಗೂ ಕೂಲಿ ನೀಡಿ ಗುಳೆ ತಪ್ಪಿಸಬೇಕು  ಎಂಬುದು ಗ್ರಾಮಸ್ಥರ ಮನವಿ.

ಗ್ರಾಮಕ್ಕೆ ಬೆಳಿಗ್ಗೆ ಒಂದು ಬಾರಿ ಮಾತ್ರ ಬಸ್‌ ಬರುತ್ತದೆ. ಶಾಲಾ, ಕಾಲೇಜುಗಳಿಗೆ ತೆರಳುವ ಮಕ್ಕಳಿಗೆ ಇದರಿಂದ ಸಮಸ್ಯೆಯಾಗುತ್ತಿದೆ. ಪೋಷಕರು ಬಡತನದ ಕಾರಣ ಮಕ್ಕಳನ್ನು ಕೂಲಿ ಕೆಲಸಕ್ಕೆ ಕಳುಹಿಸುತ್ತಿದ್ದಾರೆ. ಶಿಕ್ಷಣ ಪಡೆಯಬೇಕಾದರೆ ಹಾಗೂ ಬೇರೆ ಊರಿಗೆ ಹೋಗಬೇಕಾದರೆ ನಿತ್ಯ ಕನಿಷ್ಠ 2 ಕಿ.ಮೀ ನಡೆಯಬೇಕಿದೆ ಎನ್ನುತ್ತಾರೆ ಗ್ರಾಮಸ್ಥರು.

ಹಡಗಲಿಯಿಂದ ಚಿಕ್ಕವಡ್ಡಟ್ಟಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ‌ ಮಧ್ಯದಲ್ಲಿ ಬರುವ ದೊಡ್ಡ ಹಳ್ಳಕ್ಕೆ ಸೇತುವೆ ನಿರ್ಮಾಣ ಮಾಡಬೇಕೆಂಬುದು ಗ್ರಾಮಸ್ಥರ ಒಕ್ಕೊರಲಿನ ಒತ್ತಾಸೆಯಾಗಿದೆ. ಮಜ್ಜೂರ ಕೆರೆಯ ನೀರು ಸಹ ಇಲ್ಲಿ ಹರಿದು ಬರುವುದರಿಂದ ಸೇತುವೆ ಅವಶ್ಯಕತೆ ಇದೆ. ಈ ಕುರಿತು ಹಲವು ಬಾರಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಭೇಟಿ ನೀಡಿ ಭರವಸೆ ನೀಡುತ್ತಿದ್ದಾರೆ. ಆದರೆ, ಕೆಲಸ ಮಾತ್ರ ಆಗುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಒಟ್ಟಾರೆ ನಮ್ಮ ಗ್ರಾಮ ಸಮಸ್ಯೆಗಳ ಆಗರವಾಗಿದ್ದು ಈ ಎಲ್ಲ ಸಮಸ್ಯೆಗಳಿಗೆ ಆದಷ್ಟು ಬೇಗ ಮುಕ್ತಿ ನೀಡಿ ಎಂದು ಹಡಗಲಿ ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...