ಗದಗ | ಭೀಷ್ಮ ಕೆರೆಗೆ ಸುತ್ತಲು ತಂತಿ ಬೇಲಿ ಹಾಕಿ; ಕರ್ನಾಟಕ ಪ್ರಜಾಪರ ವೇದಿಕೆ ಮನವಿ

Date:

ಗದಗ ನಗರದ ಪ್ರವಾಸಿ ಸ್ಥಳವಾಗಿರುವ ಬಿಷ್ಮಕೆರೆ ಸುತ್ತಲೂ ತಂತಿ ಬೇಲಿ ಹಾಕಬೇಕು ಎಂದು ಕರ್ನಾಟಕ ಪ್ರಜಾಪರ ವೇದಿಕೆ ಗದಗ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.

ಈ ವೇಳೆ ಮಾತನಾಡಿದ ಕರ್ನಾಟಕ ಪ್ರಜಾಪರ ವೇದಿಕೆ ಅಧ್ಯಕ್ಷ ರಫೀಕ್ ಧಾರವಾಡ, ನಗರದ ಪ್ರವಾಸಿ ತಾಣ ಭೀಷ್ಮಕೆರೆ ಸುತ್ತಲೂ ತಂತಿ ಬೇಲಿ ಹಾಕಬೇಕು. ಭೀಷ್ಮ ಕೆರೆಯಲ್ಲಿ ಸಣ್ಣ ಮಕ್ಕಳು ಮೀನು ಹಿಡಿಯಲು ಹೋಗುತ್ತಿದ್ದು, ಇದರಿಂದ ಮಕ್ಕಳು ನೀರಿಗೆ ಬಿದ್ದು ಅಪಾಯಕ್ಕೆ ಒಳಗಾಗುವ ಭೀತಿ ಇದೆ. ಒಬ್ಬ ಮಹಿಳೆ ಸಹ ನೀರಿಗೆ ಬಿದ್ದು ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ನಡೆದಿದೆ. ಇಂತಹ ಘಟನೆಗಳು ಮೇಲಿಂದ ಮೇಲೆ ಘಟಿಸುತ್ತಿದ್ದು, ಇವುಗಳನ್ನು ತಡೆಯಲು ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಪ್ರವಾಸಿ ತಾಣ ಭೀಷ್ಮಕೆರೆ ಸುತ್ತಲೂ ತಂತಿ ಬೇಲಿ ಹಾಕಬೇಕು ಎಂದು ಆಗ್ರಹಿಸಿದರು.

ಈ ವಿಷಯವಾಗಿ ಗಮನ ಹರಿಸದೆ ಹೋದರೆ ಮುಂದಿನ ದಿನಗಳಲ್ಲಿ ಉಪವಾಸ ಸತ್ಯಾಗ್ರಹ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಆರಿಫ್ ಬಾ ಕಾತರಿಕಿ, ಗಣೇಶ್ ಕಬಾಡಿ, ರವಿ ದಡಕರ್, ಆಶೀಪ್ ಉಮನಾಬಿದ ಇತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...