ಗದಗ | ರ‍್ಯಾಪಿಡ್ ಆಕ್ಷನ್ ಫೋರ್ಸ್‌ನಿಂದ ಜ 25ರವರೆಗೆ ರೂಟ್ ಮಾರ್ಚ್

Date:

ರ‍್ಯಾಪಿಡ್ ಆಕ್ಷನ್ ಫೋರ್ಸ್‌ನಿಂದ ಜನವರಿ 19 ರಿಂದ 25ರವರೆಗೆ ಗದಗ ಜಿಲ್ಲೆಯಾದ್ಯಂತ ರೂಟ್ ಮಾರ್ಚ್ ನಡೆಸಲು ಆರ್‌ಎಎಫ್‌ ತಂಡ ನಗರಕ್ಕೆ ಆಗಮಿಸಿದೆ. ಇದೊಂದು ವಿಶೇಷ ಕಾರ್ಯಕ್ರಮವಾಗಿದ್ದು, ಜಿಲ್ಲೆಯಾದ್ಯಂತ ಪ್ರಮುಖ ಸ್ಥಳಗಳಲ್ಲಿ ಸಂಚರಿಸಿ ಅಲ್ಲಿನ ಮಾಹಿತಿ ಪಡೆಯುವುದು ಈ ರೂಟ್ ಮಾರ್ಚ್‌ನ ಉದ್ದೇಶವಾಗಿದೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಬಿ ಎಸ್ ನೇಮಗೌಡ ತಿಳಿಸಿದರು.

ಗದಗ ನಗರದ ಶಹರ ಪೊಲೀಸ್ ಠಾಣೆಯಲ್ಲಿ ಜರುಗಿದ ಪತ್ರಿಕಾಗೊಷ್ಟಿಯನ್ನು ಉದ್ದೇಶಿಸಿ ಮಾತನಾಡಿದರು.

“ಆರ್‌ಎಎಫ್‌ ತಂಡ ಜಿಲ್ಲೆಗೆ ಕರ್ತವ್ಯಕ್ಕೆ ಆಗಮಿಸಿದಾಗ ಸ್ಥಳ ಹಾಗೂ ಇಲ್ಲಿನ ವಾತಾವರಣ, ಸಂಸ್ಕೃತಿಯ ಬಗ್ಗೆ ಮಾಹಿತಿ ಪಡೆಯಲು ಈ ತಂಡವು ಆಗಮಿಸಿದ್ದು, ಜಿಲ್ಲೆಯ ಪ್ರಮುಖ ನಗರ ಹಾಗೂ ಶಹರ ವ್ಯಾಪ್ತಿಯಲ್ಲಿ ಪಥಸಂಚಲನ ಜರುಗಿಸಲಾಗುವುದು. ಆರ್‌ಎಎಫ್‌ ತಂಡಕ್ಕೆ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ತಾವು ನಿರ್ವಹಿಸುವ ಸ್ಥಳ ಅಪರಿಚಿತವಾಗಬಾರದು ಎನ್ನುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಜಿಲ್ಲೆಗೆ ಆಗಮಿಸಿದ ಆರ್‌ಎಎಫ್‌ ತಂಡಕ್ಕೆ ಗದಗ ಜಿಲ್ಲಾ ಪೊಲೀಸ್‌ ಇಲಾಖೆಯಿಂದ ಸಂಪೂರ್ಣ ಬೆಂಬಲ ನೀಡಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“80 ಮಂದಿ ಪುರುಷರು ಹಾಗೂ 7 ಮಂದಿ ಮಹಿಳಾ ಸೈನಿಕರ ಆರ್‌ಎಎಫ್‌ ತಂಡ ಜಿಲ್ಲೆಗೆ ಆಗಮಿಸಿದೆ. ಈ ತಂಡವು ಜನವರಿ 20 ರಂದು ಲಕ್ಷ್ಮೇಶ್ವರ, ಮುಳಗುಂದ ಹಾಗೂ ಜನವರಿ 21 ರಂದು ನರಗುಂದ, ಜನವರಿ 22 ರಂದು ಮುಂಡರಗಿ, ಜನವರಿ 23 ರಂದು ರೋಣ, ಗಜೇಂದ್ರಗಡ, ಜನವರಿ 24 ರಂದು ಶಿರಹಟ್ಟಿ, ಬೆಟಗೇರಿ, ಜನವರಿ 25 ರಂದು ಗದಗ ಪೊಲೀಸ್ ಹಾಗೂ ಸಿವಿಲ್ ‌ಪೊಲೀಸ್ ನಡುವೆ ವಾಲಿಬಾಲ್ ಪಂದ್ಯಾವಳಿ ನಡೆಯಲಿದೆ” ಎಂದು ಎಸ್‌ಪಿ ಬಿ ಎಸ್ ನೇಮಗೌಡ ಮಾಹಿತಿ ನೀಡಿದರು.

ತಂಡದ ಅಸಿಸ್ಟಂಟ್ ಕಮಾಂಡೆಂಟ್ ಪ್ರದೀಪ್ ಡಿ ಟಿ ಮಾತನಾಡಿ, “ಯಾವುದೇ ಒತ್ತಡಗಳಿಗೆ ಒಳಗಾಗದೇ ಜನರ ನಾಡಿಮಿಡಿತ, ಇಲ್ಲಿನ ಸಂಸ್ಕೃತಿ ತಿಳಿಯುವ ಹಾಗೂ ಜನರ ವಿಶ್ವಾಸ ಗಳಿಸುವ ಉದ್ದೇಶದೊಂದಿಗೆ ಈ ರೂಟ್ ಮಾರ್ಚ್‌ ಜರುಗಿಸಲಾಗುತ್ತಿದೆ” ಎಂದು ಮಾಹಿತಿ ನೀಡಿದರು.‌

ಈ ಸುದ್ದಿ ಓದಿದ್ದೀರಾ? ಧಾರವಾಡ | ಗುರಿ ಇಲ್ಲದ ಜೀವನ ಚುಕ್ಕಾಣಿ ಇಲ್ಲದ ಹಡಗಿನಂತೆ: ಗೌತಮ್ ರೆಡ್ಡಿ

ಪತ್ರಿಕಾಗೋಷ್ಟಿಯಲ್ಲಿ ಅಸಿಸ್ಟಂಟ್‌ ಕಮಾಂಡೆಂಟ್ ಬಿ‌ ಸಿ ರಾಯ್, ಡಿಎಸ್‌ಪಿ ವಿದ್ಯಾನಂದ ನಾಯಕ, ಸಿಪಿಐ ಡಿ ಬಿ ಪಾಟೀಲ ಉಪಸ್ಥಿತರಿದ್ದರು.

ಪತ್ರಿಕಾಗೋಷ್ಟಿ ನಂತರ ಆರ್‌ಎಎಫ್‌ ತಂಡದಿಂದ ಶಹರ ಠಾಣೆಯಿಂದ ಪ್ರಾರಂಭವಾದ ರೂಟ್ ಮಾರ್ಚ್ ಡಿಸಿ ಮೀಲ್ ರೋಡ್, ಜವಳಗಲ್ಲಿ, ಕೆ ಎಚ್ ಪಾಟೀಲ್ ಸರ್ಕಲ್, ಗಂಗಾಪುರ ಪೇಟೆ ಮಾರ್ಗವಾಗಿ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕೊನೆಗೆ ಶಹರ ಠಾಣೆಗೆ ಬಂದು ಮುಕ್ತಾಯಗೊಂಡಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...