ಗದಗ | ʼಸೊಸೆಗೆ ಸೀರೆ ಉಡಿಸಬೇಕುʼ ವದಂತಿ; ಅಂಗಡಿಗಳಲ್ಲಿ ವ್ಯಾಪಾರ ಜೋರು

Date:

ವೈಜ್ಞಾನಿಕವಾಗಿ ಜಗತ್ತು ಎಷ್ಟೇ ಮುಂದುವರೆದ್ರೂ ಮೌಢ್ಯ ಆಚರಣೆಗಳನ್ನ ಮಾತ್ರ ಬಿಟ್ಟಿಲ್ಲ. ಇದಕ್ಕೆ ಗದಗ ಜಿಲ್ಲೆಯ ಹಳ್ಳಿಗಳು ಸಾಕ್ಷಿ. ಸೋದರ ಸೊಸೆಗೆ ಸೋದರತ್ತೆಯರು ಸೀರೆ ಉಡಿಸಬೇಕು ಅನ್ನೋ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದು, ಗದಗ ಜಿಲ್ಲೆಯ ಕೆಲ ಭಾಗದಲ್ಲಿ ಕಳೆದ 10-15 ದಿನಗಳಿಂದ ಸೀರೆಗಳ ಮಾರಾಟ ಬಲು ಜೋರಾಗಿದೆ. ಮಹಿಳೆಯರು ತಮ್ಮ ಅಣ್ಣ  ಅಥವಾ ತಮ್ಮನಿಗೆ ಒಬ್ಬಳೇ ಮಗಳಿದ್ದರೆ ಸೋದರತ್ತೆ ಸೀರೆ ಉಡಿಸಬೇಕು. ಇಲ್ಲಾಂದ್ರೆ ಕೇಡಾಗುತ್ತೆ ಅನ್ನೋ ಸುದ್ದಿ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಹಳ್ಳಿಗಳಲ್ಲಿ ಹಬ್ಬಿದೆ.

ಹೀಗಾಗಿ ನಮ್ಮ ಅಣ್ಣ ಅಥವಾ ತಮ್ಮನ ಮಗಳಿಗೆ ಒಳ್ಳೆಯ ಸೀರೆ ಕೊಡಿ ಅಂತ ಮಹಿಳೆಯರು ಕೇಳ್ತಾಯಿದ್ದಾರೆ. ಇದರಿಂದ ಬಟ್ಟೆ ಅಂಗಡಿಗಳ ಮಾಲೀಕರು ಭರ್ಜರಿ ವ್ಯಾಪಾರವಾಗುತ್ತಿದೆ. ಭೀಕರ ಬರ ಹಿನ್ನೆಲೆಯಲ್ಲಿ ಈ ಬಾರಿ ಹಬ್ಬಗಳಲ್ಲಿ ಜನರು ಬಟ್ಟೆ ಖರೀದಿಗೆ ಮುಂದಾಗಿರಲಿಲ್ಲ. ಆದರೆ, ಈ ವದಂತಿ ಗ್ರಾಮೀಣ ಭಾಗದ ಜನರನ್ನು ದಂಗು ಬಡಿಸಿದೆ. ಮಹಿಳೆಯರು ಪಟ್ಟಣದ ಬಟ್ಟೆ ಅಂಗಡಿಗಳಲ್ಲಿ ಸೀರೆ ಖರೀದಿಗೆ ಮುಂದಾಗಿದ್ದಾರೆ.

ಕಳೆದ 15 ದಿನಗಳಿಂದ ತಾಲೂಕಿನ ಮಾಚೇನಹಳ್ಳಿ, ಬೆಳ್ಳಟ್ಟಿ, ಹೊಸಳ್ಳಿ, ನಾಗರಮಡುವು, ತಂಗೋಡ, ಕೋಗನೂರು, ಹಬ್ಬಾಳ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಈ ರೀತಿಯ ವದಂತಿ ಹಬ್ಬಿದೆ. ಸೀರೆ ಕೊಡಿಸದಿದ್ದರೆ ಕೇಡಾಗುತ್ತೆ ಎಂಬ ನಂಬಿಕೆಯಿಂದ ತವರು ಮನೆಗೆ ಹೆಣ್ಣುಮಕ್ಕಳು ಬಂದು ಅಣ್ಣ, ತಮ್ಮನ ಮಗಳಿಗೆ ಸೀರೆ ಉಡಿಸಿ, ಆರತಿ‌ ಮಾಡುವುದು ಸಾಮಾನ್ಯವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೊಸೆಗೆ ಹೊಸ ಸೀರೆ ಉಡಿಸಿ ಹಣೆಗೆ ಕುಂಕುಮ ಇಟ್ಟು ಆರತಿ ಬೆಳಗಿ ಎಲ್ಲರಿಗೂ ಒಳ್ಳೆಯದಾಗಲಿ ಎಂದು ತಾಯಂದಿರು ತವರು ಮನೆಯವರನ್ನು ಹರಸುತ್ತಿದ್ದಾರೆ. ಈ ತರದ ವದಂತಿ ಇದೇ ಮೊದಲೇನಲ್ಲ, ಈ ಮೊದಲು, ತಾಯಿಗೆ ಮಗಳು ಸೀರೆ ಕೊಡಿಸುವುದು, ಒಬ್ಬನೇ ಮಗನಿದ್ದರೆ ಬೆಳ್ಳಿ ಕಡಗ ಕೊಡಿಸುವುದು ಸುದ್ದಿಯಾಗಿತ್ತು.

ಇವುಗಳನ್ನು ಯಾರು ಹಬ್ಬಿಸುತ್ತಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಇಲ್ಲ. ಹಳ್ಳಿಯ ಜನರನ್ನು ಇಂತಹ ವದಂತಿಗಳಿಂದ ದಾರಿ ತಪ್ಪಿಸುವ ಕೆಲಸವಾಗುತ್ತಿದೆ. ಒಟ್ಟಾರೆ ಇಂತಹ ವದಂತಿಗಳು ಜನರಲ್ಲಿ ಪುನ: ಮೌಢ್ಯವನ್ನು ಹುಟ್ಟು ಹಾಕುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...