ಗದಗ | ರಾಜ್ಯದ ಭೀಕರ ಬರಗಾಲವನ್ನು ರಾಷ್ಟ್ರೀಯ ವಿಪತ್ತೆಂದು ಘೋಷಿಸಬೇಕು; ರೈತ, ಕೃಷಿ ಕೂಲಿಕಾರರ ಆಗ್ರಹ

Date:

ರಾಜ್ಯದ ಭೀಕರ ಬರಗಾಲವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಆಗ್ರಹಿಸಿ ಗದಗ ಜಿಲ್ಲೆ  ಗಜೇಂದ್ರಗಡ ತಹಶೀಲ್ದಾರ್ ಕಚೇರಿ ಎದುರು ರೈತ ಕೃಷಿಕೂಲಿಕಾರರು ಕರ್ನಾಟಕ ಪ್ರಾಂತ್ಯ ರೈತ ಸಂಘ ಮತ್ತು ಕರ್ನಾಟಕ ಪ್ರಾಂತ್ಯ ಕೃಷಿ ಕೂಲಿಕಾರರ ಸಂಘ ತಾಲೂಕು ಸಮಿತಿಗಳ ನೇತೃತ್ವದಲ್ಲಿ ಪ್ರತಿಭಟನಾ ಧರಣಿ ನಡೆಸಿದರು.

ರೈತ ಮುಖಂಡ ಎಂ ಎಸ್ ಹಡಪದ ಮಾತನಾಡಿ, “ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತಲೂ ಅತಿ ಕಡಿಮೆ ಮಳೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತೀವ್ರ ಬರ ಪರಸ್ಥಿತಿ ಉಂಟಾಗಿದೆ. ಸಾಲ ಸೂಲ ಮಾಡಿ ಬೀಜ, ರಸಗೊಬ್ಬರ ತಂದು ಬಿತ್ತನೆ ಮಾಡಿದ ರೈತನಿಗೆ ಬೆಳೆ ಬಾರದೇ ಇದ್ದುದ್ದರಿಂದ ರೈತರು ತೀವ್ರ ಸಾಲದ ಸುಳಿಗೆ ಸಿಲುಕಿದ್ದಾರೆ. ಪರಿಣಾಮ ದಿನದಿಂದ ದಿನಕ್ಕೆ ರೈತರ ಆತ್ಮಹತ್ಯೆಗಳು ಹೆಚ್ಚುತ್ತಲೇ ಇವೆ” ಎಂದು ಹೇಳಿದರು.

“ಕೃಷಿ ಕೂಲಿಕಾರರಿಗೆ ಕೆಲಸ ಸಿಗದಂತಾಗಿ ವಲಸೆ ಹೋಗುತ್ತಿದ್ದಾರೆ. ಕುಡಿಯುವ ನೀರಿನ ತೀವ್ರ ಕೊರತೆ ಉಂಟಾಗಿ ಜನ ಜಾನುವಾರುಗಳಿಗೆ ತೀವ್ರ ಸಂಕಷ್ಟ ಎದುರಾಗಿದೆ. ಮತ್ತೊಂದಡೆ ಕೊಳವೆ ಬಾವಿಗಳು ಬತ್ತಿವೆ. ಮತ್ತೊಂದು ಕಡೆ ಜಾನುವಾರುಗಳಿಗೆ ಮೇವಿನ ಕೊರತೆಯಾಗಿದೆ. ರಾಜ್ಯದ ಬಹುತೇಕ ಜಲಾಶಯಗಳು ಈಗಾಗಲೇ ಖಾಲಿಯಾಗುವ ಸ್ಥಿತಿಯಲ್ಲಿವೆ. ಈ ಭೀಕರ ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇಂದ್ರ ಸರ್ಕಾರ ರಾಜ್ಯಕ್ಕೆ ಬರಗಾಲದ ಹಿನ್ನೆಲೆಯಲ್ಲಿ ದೊಡ್ಡ ಮೊತ್ತದ ಬರಗಾಲ ಪರಿಹಾರ ನಿಧಿಯನ್ನು ನೀಡಬೇಕಾದ ಅವಶ್ಯಕತೆಯಿದೆ. ಇಂತಹ ಗಂಭೀರ ಸ್ಥಿತಿಯಲ್ಲಿ ರಾಜ್ಯದ 25 ಮಂದಿ ಬಿಜೆಪಿ ಸಂಸದರು ಕೇಂದ್ರ ಸರ್ಕಾರದಿಂದ ಬರ ಪರಿಹಾರ ಮೊತ್ತ ತರುವಲ್ಲಿ ಯಾವುದೇ ಪ್ರಯತ್ನ ಮಾಡುತ್ತಿಲ್ಲ. ಬದಲಿಗೆ ಅವರು ರಾಜ್ಯದಲ್ಲಿನ ಆಡಳಿತ ರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜಕಾರಣ ಮಾಡುತ್ತ, ರಾಮ ಮಂದಿರ ನಿರ್ಮಾಣದ ವಿಷಯವನ್ನೇ ಪ್ರಧಾನವಾಗಿ ಮಾಡಿಕೊಂಡು ಕಾಲಕಳೆಯುತ್ತಿದ್ದಾರೆ” ಎಂದು ಆರೋಪಿಸಿದರು.

“ರಾಜ್ಯದ ಬರ ನಿರ್ವಹಣೆಯ ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ಅನುದಾನ ಕೊಡಿಸುವಲ್ಲಿ ರಾಜ್ಯ ರೈತರಿಗೆ ತೀವ್ರ ಅನ್ಯಾಯ ಮಾಡುತ್ತಿದ್ದಾರೆ. ಈ ಎಲ್ಲ ವಿಷಯಗಳನ್ನು ಮುಂದಿಟ್ಟುಕೊಂಡು ಸ್ಥಳೀಯವಾಗಿ ರೈತರ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಆಗ್ರಹಿಸಿದರು.

“ಬರಗಾಲದ ನಿಮಿತ್ತ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಕೆಲಸ ಮಾಡುವ ಕೆಲಸಗಾರರಿಗೆ ವರ್ಷದಲ್ಲಿ 100 ದಿನಗಳ ಬದಲಿಗೆ 200 ದಿನಗಳ ಕೆಲಸ ನೀಡಬೇಕು. ಬರಗಾಲದಲ್ಲಿ ಕೂಲಿಕಾರರ ಕನಿಷ್ಟ ದಿನಗೂಲಿಯನ್ನು ದಿನಕ್ಕೆ ₹600ಕ್ಕೆ ಕೂಲಿ ಹೆಚ್ಚಿಸಬೇಕು. “ರೈತರು ಬ್ಯಾಂಕುಗಳಿಂದ ಪಡೆದಿರುವ ಸಾಲವನ್ನು ಬಲವಂತವಾಗಿ ವಸೂಲಿ ಮಾಡುವುದನ್ನು ನಿಲ್ಲಿಸಬೇಕು. ಮೈಕ್ರೊ ಪೈನಾನ್ಸ್‌ ಮೂಲಕ ಪಡೆದಿರುವ ಸಾಲವನ್ನು ಮನ್ನಾ ಮಾಡಬೇಕು. ವಲಸೆ ಕಾರ್ಮಿಕ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಬರಗಾಲದಲ್ಲಿ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

“ಗಜೇಂದ್ರಗಡ-ರೋಣ ತಾಲೂಕುಗಳ ಬಗರ್ ಹುಕುಂ ಸಾಗುವಳಿದಾರ ರೈತರ ಅರ್ಜಿಗಳನ್ನು ಪರಿಶಿಲನೆ ಮಾಡಲು ಶಾಸಕರ ನೇತೃತ್ವದಲ್ಲಿ ಬಗರ್ ಹುಕುಂ ಸಮಿತಿ ಕೂಡಲೇ ರಚಿಸಬೇಕು. ಭೂಮಿ ಹಂಚಲು ಅಗತ್ಯ ಕ್ರಮ ಕೈಗೊಳ್ಳಬೇಕು. ಕೊಪ್ಪಳ ಏತ ನೀರಾವರಿ 3ನೇ ಹಂತದ ಕೃಷ್ಣಾ ಬಿ ಸ್ಕೀಂನಲ್ಲಿ ಗಜೇಂದ್ರಗಡ ತಾಲೂಕಿನ ನಾಗರಸಕೊಪ್ಪ, ಬೆಣಸಮಟ್ಟಿ, ಗೋಗೇರಿ, ಮಾಟರಂಗಿ ಹಾಗೂ ಉಣಚಗೇರಿ ಸೇರಿದಂತೆ ಹಲವು ಕೆರೆಗಳನ್ನು ತುಂಬಿಸಲು ರೋಣ ವಿಧಾನಸಭಾ ಮತಕ್ಷೇತ್ರದ ಶಾಸಕರು ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದರು.

ಹೋರಾಟದ ಸ್ಥಳಕ್ಕೆ‌ ಗಜೇಂದ್ರಗಡ ತಹಶೀಲ್ದಾರ್ ಮತ್ತು ತಾಲೂಕು ಪಂಚಾಯತ್ ಕಾರ್ಯ ನಿರ್ವಾಹ‌ಣಾಧಿಕಾರಿಗಳು ಬಂದು ಮನವಿ ಸ್ವೀಕರಿಸಿ ಸ್ಥಳೀಯ ಬೇಡಿಕೆಗಳು ಕುರಿತು ಚರ್ಚೆ ಮಾಡಲು ಎಲ್ಲರೂ ಒಳಗೊಂಡ ಒಂದು ಸಭೆಯನ್ನು ಕರೆಯುತ್ತೇವೆಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಕೇಂದ್ರ ಸರ್ಕಾರದ ಪ್ರತಿಕೃತಿ ದಹಿಸಿ ಸಿಪಿಐ ಪ್ರತಿಭಟನೆ

ಗಣೇಶ ರಾಠೋಡ್, ಪೀರು ರಾಠೋಡ್, ಸಂಗಪ್ಪ ಅಡವಿ, ರೂಪಲೇಶ ಮಾಳೋತ್ತರ, ಚೆನ್ನಪ್ಪ ಗುಗಲೊತ್ತರ್, ಮೋಹನ ರಾಠೋಡ್, ಕುಮಾರ ರಾಠೋಡ್, ವಿ ಆರ್ ಮಾಳತ್ತೋರ್, ಪಿರಪ್ಪ, ಮಂಜು, ಪಿರೇಶ್, ಶಿವಾಜಿ ಇಂಗಳೆ, ಶಿವಾಜಿ ಕಲ್ಲುಡಿ, ಈರಪ್ಪ, ಹನುಮಂತ, ಎಚ್ ಪಿ ಕಸುವಿ, ಕೆ ಪಿ ಕಸುವಿ, ಹನಮಪ್ಪ ಹಡಪದ, ವಿ ಎಚ್ ನಾಗವರ, ಲಕ್ಷ್ಮಣ ಮಗಿ, ಬಮ್ಮಪ್ಪ, ಎಸ್ ಎಲ್ ಗೊಜಲಿ, ಶಿವವ್ವ, ಸೊಮವ್ವ, ರೇಣವ್ವ, ಗೋಂವಿದಪ್ಪ, ಶರಣಪ್ಪ, ಮಲ್ಲೇಶಪ್ಪ, ಕಳಕಪ್ಪ, ಕಲ್ಲಪ್ಪ, ಶಿವಪ್ಪ, ಆನಂದ, ಯು ಟಿ ಮಾಳೋತ್ತರ್, ಆರ್ ಎಚ್ ಹೊಸಮನಿ, ದೇವರಾಜ್, ದುರಗಪ್ಪ, ಬಬ್ರುವಾಹನ್, ಮಾರುತಿ, ಬಿ ಎಸ್ ಕಲ್ಲಗುಡಿ, ರಮೇಶ್ ಪಮ್ಮಾರ್, ಸಂಗಪ್ಪ, ಪ್ರಕಾಶ, ಮೊಹಲಿ, ಹೊಗಪ್ಪ, ಜನಕಪ್ಪ ಹಾಗೂ ನೂರಾರು ರೈತ ಕೃಷಿ ಕೂಲಿಕಾರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...