ಗದಗ | ಜಿಮ್ಸ್‌ ನಿರ್ದೇಶಕರ ಅಮಾನತಿಗೆ ಸುರೇಶ ಚಲವಾದಿ ಆಗ್ರಹ

Date:

ದಲಿತ ವಿರೋಧಿ ನೀತಿ ಅನುಸರಿಸುತ್ತಿರುವ ಜಿಮ್ಸ್ ನಿರ್ದೇಶಕ ಬಿ ಎಸ್ ಬೊಮ್ಮನಹಳ್ಳಿ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಗದಗ ಜಿಲ್ಲಾ ಜಾಗೃತ ಹಾಗೂ ಉಸ್ತುವಾರಿ ಸಮಿತಿ ಸದಸ್ಯ ಸುರೇಶ ವೈ ಚಲವಾದಿ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು “ಜಿಮ್ಸ್‌ನ 450 ಹಾಸಿಗೆಯುಳ್ಳ ನೂತನ ಆಸ್ಪತ್ರೆಯ ಉದ್ಘಾಟನೆಗೆ ನವೆಂಬರ್‌ 3ರಂದು ಆಗಮಿಸಿದ ಮುಖ್ಯಮಂತ್ರಿಯವರನ್ನು ಬರಮಾಡಿಕೊಳ್ಳಲು ದಲಿತ ಸಮುದಾಯದ ಸಿಬ್ಬಂದಿಗಳು ಡಾ ಬಾಬಾಸಾಹೇಬ್ ಅಂಬೇಡ್ಕರ್ ಭಾವಚಿತ್ರ ಹಿಡಿದು ಸ್ವಾಗತಿಸುತ್ತಿದ್ದ ವೇಳೆ ಜಿಮ್ಸ್ ನಿರ್ದೇಶಕ ಬಸವರಾಜ ಎಸ್ ಬೊಮ್ಮನಳ್ಳಿ ಮಧ್ಯ ಪ್ರವೇಶಿಸಿ ಮುಖ್ಯಮಂತ್ರಿಗಳಿಗೆ ಯಾವುದೇ ಕಾರಣಕ್ಕೂ ಅಂಬೇಡ್ಕರ್ ಭಾವಚಿತ್ರ ನೀಡಕೂಡದು ನಮ್ಮ ಆಸ್ಪತ್ರೆಯ ಉದ್ಘಾಟನೆಯ ನಂತರ ನೀವು ಯಾವುದಾದರೂ ಭಾವಚಿತ್ರ ನೀಡಿ ಎಂದು ದಲಿತ ಸಿಬ್ಬಂದಿಗಳಿಗೆ ತಡೆಹಿಡಿದು ಪೊಲೀಸ್ ಸಿಬ್ಬಂದಿಗಳಿಂದ ಆಸ್ಪತ್ರೆಯ ದಲಿತ ಸಿಬ್ಬಂದಿಗಳನ್ನು ಹೊರಹಾಕಿಸಿರುವುದು ನಾಚಿಕೆಗೇಡಿನ ಸಂಗತಿ” ಎಂದು ಆಕ್ರೋಷ ವ್ಯಕ್ತಪಡಿಸಿದರು.

“ಬೊಮ್ಮನಳ್ಳಿಯವರು ಬಾಬಾಸಾಹೇಬ್ ಅಂಬೇಡ್ಕರ್ ಅವರು ಕೊಟ್ಟ ಮೀಸಲಾತಿಯಿಂದಲೇ ಉನ್ನತ ಮಟ್ಟದ ಅಧಿಕಾರ ವಹಿಸಿಕೊಂಡಿರುವುದನ್ನು ಪ್ರಜ್ಞೆಯಲ್ಲಿಟ್ಟುಕೊಂಡು ನೌಕರಿ ಮಾಡಬೇಕು. ಇಂತಹ ಸಂಕುಚಿತ ಮನೋಭಾವನೆಯನ್ನು ಹೊಂದಿರುವ ಅಧಿಕಾರಿಗಳನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಕೆ ಪಾಟೀಲ ಅವರು ಸೇವೆಯಿಂದ ಅಮಾನತುಗೊಳಿಸಿ ದಲಿತರ ಹಿತ ಕಾಪಾಡುವಲ್ಲಿ ಮುಂದಾಗಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದ ಮುಖ್ಯಮಂತ್ರಿಯವರು ಬರುವ ಸಂದರ್ಭದಲ್ಲಿ ಡಾ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರ ನೀಡುತ್ತಿರುವ ಸಿಬ್ಬಂದಿಗಳನ್ನು ಆಚೆ ಹಾಕಿದ್ದು, ಅಂಬೇಡ್ಕರ್ ಅವರಿಗೆ ಅವಮಾನ ಮಾಡಿ ದಲಿತ ಸಿಬ್ಬಂದಿಗಳ ಭಾವನೆಗಳಿಗೆ ಧಕ್ಕೆಯುಂಟು ಮಾಡಿದೆ. ಇಂತಹ ಅಧಿಕಾರಿಗಳು ನಮ್ಮ ಜಿಲ್ಲೆಯಲ್ಲಿರಲು ಯೋಗ್ಯರಲ್ಲ. ಅಂತಹವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶಿಸಬೇಕು. ಇಂತಹ ಕೀಳು ಮಟ್ಟದ ಅಧಿಕಾರಿಗಳು ಸಾರ್ವಜನಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಅರ್ಹರಲ್ಲ. ಇಂತಹವರನ್ನು ಶಾಶ್ವತವಾಗಿ ಸೇವಾ ನಿವೃತ್ತಿಯಲ್ಲಿಡಬೇಕು” ಎಂದು ಖಾರವಾಗಿ ಮಾತನಾಡಿದರು.

ಬಹಿರಂಗವಾಗಿ ಸಾರ್ವಜನಿಕ ಸ್ಥಳಗಳಲ್ಲಿಯೇ ಈ ರೀತಿ ಜಾತಿವಾದಿತನ ಪ್ರದರ್ಶನ ಮಾಡುವ ಇವರು ಜಿಮ್ಸ್‌ನಲ್ಲಿ ಕೆಲಸ ಮಾಡುವ ದಲಿತ ಸಿಬ್ಬಂದಿಗಳಿಗೆ ಸಾಕಷ್ಟು ನೂವುಗಳನ್ನು ಕೊಟ್ಟಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಇಂತಹ ಜಾತಿವಾದಿ ನಿರ್ದೇಶಕನನ್ನು ಜಿಲ್ಲಾಡಳಿತ  ಅಮಾನತುಗೊಳಿಸದೇ ಹೋದಲ್ಲಿ ದಲಿತ ಸಮುದಾಯ ಜಿಲ್ಲಾದ್ಯಂತ ತೀವ್ರ ಪ್ರತಿಭಟನೆ ಮಾಡಲು ಸಿದ್ಧವಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಪ್ರಜ್ಞಾವಂತಿಕೆ ಬೆಳೆದಂತೆ ಪರಂಪರೆಯ ಮೇಲಿನ ಪ್ರೀತಿಯೂ ಬೆಳೆಯಬೇಕು

ಈ ಸಂದರ್ಭದಲ್ಲಿ ಜಿಲ್ಲಾ ದಲಿತ ಯುವ ಮುಖಂಡ ರಮೇಶ ಕಡೇಮನಿ, ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಉಪಾಧ್ಯಕ್ಷ ಲಕ್ಷ್ಮಣ ಪೂಜಾರ, ಪ್ರಧಾನ ಕಾರ್ಯದರ್ಶಿ ಬಸವರಾಜ ಮುಳ್ಳಾಳ, ಶ್ರೀಕಾಂತ ಪೂಜಾರ, ಅಪ್ಪು ಹಿತ್ತಲಮನಿ, ಶಿವಾನಂದ ಅಳವಂಡಿ, ಪಕ್ಕೀರೇಶ ಹಾದಿಮನಿ, ರಾಜು ರಂಗಣ್ಣವರ, ಸಂಜೀವ ದೊಡ್ಡಮನಿ, ರಮೇಶ ನಂದಿ, ಅಭಿಷೇಕ ಕೊಪ್ಪದ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...