ಗದಗ | ‘ಕರ್ನಾಟಕ ಸಂಭ್ರಮ-50’ರ ಕನ್ನಡ ಜ್ಯೋತಿ ಸ್ವಾಗತಿಸಿದ ಮುಖ್ಯಮಂತ್ರಿ

Date:

ಮೈಸೂರು ರಾಜ್ಯಕ್ಕೆ ಕರ್ನಾಟಕ ರಾಜ್ಯವೆಂದು ನಾಮಕರಣಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಆಚರಿಸುತ್ತಿರುವ ‘ಕನ್ನಡ ಸಂಭ್ರಮ-50’ರ ಅಂಗವಾಗಿ ಹಂಪಿಯಿಂದ ಗದಗಕ್ಕೆ ಕನ್ನಡ ಜ್ಯೋತಿ ಆಗಮಿಸಿದೆ. ಕನ್ನಡ ಜ್ಯೋತಿಯನ್ನು ನಗರದ ಐತಿಹಾಸಿಕ ವೀರನಾರಾಯಣ ದೇವಸ್ಥಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಾಗತಿಸಿದರು.

ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಿದರು. 1973ರ ನವೆಂಬರ್ 03ರಂದು ನಡೆದ ಕರ್ನಾಟಕ ನಾಮಕರಣ ಸಂಭ್ರಮದ ಕಾರ್ಯಕ್ರಮವನ್ನು, 2023ರ ನವೆಂಬರ್ 03ರಂದು 50ವರ್ಷದ ಸುವರ್ಣ ಸಂಭ್ರವನ್ನು ಪುನರಪಿಯಾಗಿ ಆಚರಿಸುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಅಂದು ಸಾಗಿದ ಮೆರವಣಿಗೆಯ ಮಾರ್ಗದಲ್ಲಿಯೇ ಇಂದು ಮೆರವಣಿಗೆ ಸಾಗಿದ್ದು ವಿಶೇಷವಾಗಿತ್ತು.

ಅದ್ದೂರಿ ಮೆರವಣಿಗೆಯಲ್ಲಿ ಮೈಸೂರಿನ ಚಂಡೆ, ಮದ್ದಳೆ ಕಲಾತಂಡಗಳು ಸೇರಿ, ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ 25ಕ್ಕೂ ಹೆಚ್ಚು ಕಲಾತಂಡಗಳು ಮೆರವಣಿಗೆಯುದ್ದಕ್ಕೂ ಕಲಾಪ್ರದರ್ಶನ ನೀಡಿದವು. ಮೈಸೂರು ದಸರಾದಲ್ಲಿ ಪ್ರದರ್ಶನಗೊಂಡ ಸಬರಮತಿ ಆಶ್ರಮ, ಲಕ್ಕುಂಡಿಯ ಬ್ರಹ್ಮಜೀನಾಲಯ ಸ್ತಬ್ಧ ಚಿತ್ರಗಳು ಮೆರವಣಿಗೆಯಲ್ಲಿ ಗತವೈಭವ ಸಾರಿದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರಸಭೆ ವತಿಯಿಂದ ಭುವನೇಶ್ವರಿ, ಸರಕಾರದಿಂದ ಅಧಿಕೃತಗೊಳಿಸಲಾದ ಲಾಂಛನ ಹಾಗೂ ಭುನೇಶ್ವರಿ ದೇವಿ ಮೂರ್ತಿ, ಕುಂಭಹೊತ್ತ ಮಹಿಳೆಯರು, ಶಾಲಾ-ಕಾಲೇಜ್ ವಿದ್ಯಾರ್ಥಿಗಳು ಮೆರವಣಿಗೆಗೆ ರಂಗು ತುಂಬಿದರು.

ಹಾದಿಯುದ್ದಕ್ಕೂ ಮನೆಗಳ ಮುಂದೆ  ಕನ್ನಡದ ರಂಗೋಲಿ, ಬಾವುಟಗಳು ಕಣನ ಸೆಳೆಯುತ್ತಿದ್ದರೆ ಮಹಿಳೆಯರು, ಮಕ್ಕಳು ರಥಕ್ಕೆ ಹೂಮಳೆ ಗರೆಯುತ್ತಾ, ರಥದ ಚಕ್ರಗಳಿಗೆ ಹಣ್ಣು ಕಾಯಿ, ಹಾಲಿನ ಅಭಿಷೇಕ ನಡೆಸುತ್ತಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ್, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಮಂಕಳ ವೈದ್ಯ ಸೇರಿ ಹಲವು ಮುಖಂಡರು ಮೆರವಣಿಗೆಯಲ್ಲಿದ್ದರು.

ಈ ಸಂದರ್ಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್, ವಿಧಾನಸಭಾಧ್ಯಕ್ಷ ಯು.ಟಿ. ಖಾದರ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು, ಪ್ರವಾಸೋದ್ಯಮ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಪೌರಾಡಳಿತ ಸಚಿವ ರಹೀಂಖಾನ್, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ, ಶಾಸಕರಾದ ಜಿ.ಎಸ್. ಪಾಟೀಲ, ಶ್ರೀನಿವಾಸ ಮಾನೆ, ಜೆ.ಟಿ. ಪಾಟೀಲ, ಸರಕಾರದ ಮುಖ್ಯಸಚೇತಕ ಸಲೀಂ ಅಹ್ಮದ್, ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ, ಉಪಾಧ್ಯಕ್ಷೆ ಸುನಂದಾ ಬಾಕಳೆ, ಮಾಜಿ ಶಾಸಕ ಡಿ.ಆರ್. ಪಾಟೀಲ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಸೇರಿ ಹಲವರು ಇದ್ದರು. ಸಿಎಂ ಆಗಮನ ಹಿನ್ನೆಲೆ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...