ಗದಗ | ಸ್ವಂತ ಮಗನನ್ನು ಮೂರು ಲಕ್ಷ ರೂ.ಗೆ ಮಾರಿದ ತಂದೆ; ಕಾರ್ಮಿಕ ಇಲಾಖೆಯಿಂದ ಬಾಲಕನ ರಕ್ಷಣೆ

Date:

ಗದಗ ಜಿಲ್ಲೆಯ ತಂದೆಯೊಬ್ಬ ತನ್ನ ಸ್ವಂತ ಮಗನನ್ನು ಮೂರು ಲಕ್ಷ ರೂ.ಗೆ ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಮಹಿಳೆಗೆ ಮಾರಾಟಮಾಡಿದ್ದಾರೆ. ಮಾರಾಟವಾಗಿದ್ದ ಒಂಬತ್ತು ವರ್ಷದ ಬಾಲಕನ್ನು ಕೆ.ಆ‌ರ್.ನಗರ ತಾಲೂಕು ಕಾರ್ಮಿಕ ಇಲಾಖೆಯ ನಿರೀಕ್ಷಕರು ಪತ್ತೆ ಮಾಡಿ ರಕ್ಷಿಸಿದ್ದಾರೆ.

ಸಾಲಿಗ್ರಾಮ ತಾಲ್ಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ಬಾಲಕನನ್ನು ರಕ್ಷಿಸಲಾಗಿದ್ದು, ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದ ಒಂಬತ್ತು ವರ್ಷದ ಬಸವನಗೌಡ ಶರಣಪ್ಪಗೌಡ ಮಾರಾಟವಾಗಿದ್ದ ಬಾಲಕನಾಗಿದ್ದು, ಈತನ ತಂದೆ ಶರಣಪ್ಪಗೌಡ ಮೂರು ಲಕ್ಷಕ್ಕೆ ತನ್ನ ಮಗನನ್ನು ಮಾರಾಟ ಮಾಡಿದ್ದ.

ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ರುಕ್ಕಿಣಿ ಮತ್ತು ಮಹದೇವಮ್ಮ ಎಂಬ ಮಹಿಳೆಯರು ಕಳೆದ ಎರಡು ವರ್ಷಗಳ ಹಿಂದೆ ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದ ಶರಣಪ್ಪಗೌಡ ಎಂಬವರ ಮಗನಾದ ಬಸವನಗೌಡ ಶರಣಪ್ಪಗೌಡನನ್ನು ಮೂರು ಲಕ್ಷ ಹಣ ಕೊಟ್ಟು ಖರೀದಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸವಡಿ ಗ್ರಾಮದಿಂದ ಬೆಟ್ಟಹಳ್ಳಿ ಗ್ರಾಮಕ್ಕೆ ಕರೆತಂದು ಕುರಿ, ಮೇಕೆ ಮೇಯಿಸಲು ಕಳುಹಿಸುತ್ತಿದ್ದರು. ಮನೆ ಕೆಲಸವನ್ನು ಕೂಡ ಬಾಲಕನಿಂದ ಮಾಡಿಸುತ್ತಿದ್ದರು. ಈ ಸಂಗತಿ ಗ್ರಾಮಸ್ಥರಿಗೆ ತಿಳಿದು, ಯಾರೇ ಪ್ರಶ್ನೆ ಮಾಡಿದರು ರುಕ್ಕಿಣಿ ಹಾಗೂ ಮಹದೇವಮ್ಮ, ಸಂಬಂಧಿಕರ ಹುಡುಗ ಎಂದೆಲ್ಲ ಸಬೂಬು ಹೇಳುತ್ತಿದ್ದರು. ಕೊನೆಗೂ ಗ್ರಾಮಸ್ಥರಿಗೆ ಅನುಮಾನ ಬಂದು ಮೈಸೂರಿನ ಮಕ್ಕಳ ಸಹಾಯವಾಣಿ ಕೇಂದ್ರಕ್ಕೆ ಈ ಕುರಿತು ದೂರು ನೀಡಿದ್ದರು.

ತಕ್ಷಣವೇ ಕಾರ್ಯ ಪ್ರವೃತ್ತರಾದ ಮಕ್ಕಳ ಸಹಾಯವಾಣಿ ಕೇಂದ್ರದವರು ಮೈಸೂರಿನ ಪಟ್ಟಣದಲ್ಲಿರುವ ಸಹಾಯಕ ಕಾರ್ಮಿಕ ಆಯುಕ್ತ ನಾಜೀಯ ಸುಲ್ತಾನ್ ಅವರಿಗೆ ಕರೆ ಮಾಡಿ ಬಾಲಕ ಮಾರಾಟ ಆಗಿರುವ ಹಳ್ಳಿಯೊಂದರಲ್ಲಿ ಜೀತ ಮಾಡುತ್ತಿರುವ ಬಗ್ಗೆ ಮಾಹಿತಿ ತಿಳಿಸಿದ್ದರು.

ತಕ್ಷಣವೇ ಸಹಾಯಕ ಕಾರ್ಮೀಕ ಆಯುಕ್ತ ನಾಜೀಯ ಸುಲ್ತಾನ್ ಅವರು ತಮ್ಮ ಮಾರ್ಗದರ್ಶನದ ಮೂಲಕ ಕೆ.ಆ‌ರ್.ನಗರ ತಾಲೂಕು ತಹಸೀಲ್ದಾರ್ ಸಿ. ಎಸ್.ಪೂರ್ಣಿಮಾ ಹಾಗೂ ಪಟ್ಟಣದ ಕಾರ್ಮಿಕ ಇಲಾಖೆಯ ನಿರೀಕ್ಷಕ ಗೋವಿಂದರಾಜು ಅವರಿಗೆ ಮಾರಾಟವಾಗಿರುವ ಬಾಲಕನ ವಿಳಾಸ, ದೂರು ನೀಡಿ ಸೂಕ್ತ ಕ್ರಮಗಳನ್ನು ಕೈಗೊಂಡು ಬಾಲಕನನ್ನು ರಕ್ಷಿಸುವಂತೆ ಸೂಚಿಸಿದ್ದರು.

ಕಾರ್ಮಿಕ ಇಲಾಖೆಯ ನಿರೀಕ್ಷಕ ತಮ್ಮ ಸಿಬ್ಬಂದಿಯೊಂದಿಗೆ ಬೆಟ್ಟಹಳ್ಳಿ ಗ್ರಾಮಕ್ಕೆ ಆಗಮಿಸಿ ದೂರು ನೀಡಿದ್ದ ಗ್ರಾಮಸ್ಥರ ಜೊತೆ ಚರ್ಚಿಸಿ, ಬಾಲಕ ವಾಸವಿದ್ದ ಮನೆಯ ರುಕ್ಕಿಣಿ ಹಾಗೂ ಮಹದೇವಮ್ಮ ಅವರ ವಿರುದ್ಧ ದೂರು ಪಡೆದುಕೊಂಡು ಬಾಲಕ ಬಸವನಗೌಡ ಶರಣಪ್ಪನನ್ನು ರಕ್ಷಿಸಿದ್ದಾರೆ. ಸಾಲಿಗ್ರಾಮ ಪೊಲೀಸ್ ಠಾಣೆಗೆ ರುಕ್ಕಿಣಿ ಹಾಗೂ ಮಹದೇವಮ್ಮ ಅವರ ವಿರುದ್ಧ ದೂರು ದಾಖಲಿಸಿ ಸದ್ಯಕ್ಕೆ ಬಾಲಕ ಬಸವನಗೌಡ ಶರಣಪ್ಪನನ್ನು ಮೈಸೂರಿನ ಬಾಲ ಮಂದಿರಕ್ಕೆ ಬಿಟ್ಟಿದ್ದಾರೆ.

ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ರಾಜ್ಯದಲ್ಲಿ ದಿನೆ ದಿನೇ ಮಕ್ಕಳ ಮಾರಾಟ ಜಾಲ ಹೆಚ್ಚಾಗುತ್ತಿದ್ದು ರಾಜ್ಯ ಸರ್ಕಾರ ಹೆಚ್ಚಿನ ರೀತಿಯಲ್ಲಿ ಕ್ರಮವಹಿಸಿ ಇದಕ್ಕೆಲ್ಲ ಕಡಿವಾಣ ಹಾಕಬೇಕಿದೆ ಎನ್ನುತ್ತಿದ್ದಾರೆ ನಾಗರಿಕರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...