ಗದಗ | ಸರ್ಕಾರ ರೈತರ ಸಮಸ್ಯೆಯನ್ನು ಪೂರ್ಣವಾಗಿ ಅಲಕ್ಷಿಸಿದೆ: ಅಲ್ಕೋಡ್ ಹನುಮಂತಪ್ಪ

Date:

ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಮುಂಡರಗಿ ತಾಲೂಕು ಸೇರಿದಂತೆ ರಾಜ್ಯದಲ್ಲಿ ಸಮರ್ಪಕ ಮಳೆಯಾಗದೆ ರೈತರೆಲ್ಲ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ ರೈತರ ಸಮಸ್ಯೆಯನ್ನು ಪೂರ್ಣವಾಗಿ ಅಲಕ್ಷಿಸಿದೆ, ಎಂದು ಜೆಡಿಎಸ್ ಮುಖಂಡ ಅಲ್ಕೋಡ್ ಹನುಮಂತಪ್ಪ ಆರೋಪಿಸಿದ್ದಾರೆ.

ಬರ ಅಧ್ಯಯನದ ಅಂಗವಾಗಿ ತಾಲೂಕಿನ ಜೆಡಿಎಸ್ ಕಾರ್ಯಕರ್ತರೊಂದಿಗೆ ಶನಿವಾರ ಸಂಜೆ ಬೆಣ್ಣಿಹಳ್ಳಿ, ಬೂದಿಹಾಳ ಹಾಗೂ ಮತ್ತಿತರ ಗ್ರಾಮಗಳ ಜಮೀನುಗಳಿಗೆ ರೈತರನ್ನು ಭೇಟಿ ನೀಡಿ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ತಾಲ್ಲೂಕಿನಲ್ಲಿ ರೈತರು ಮುಂಗಾರು ಹಂಗಾಮಿಲ್ಲಿ ಬೆಳೆದಿದ್ದ ಶೇಂಗಾ, ಮೆಕ್ಕೆಜೋಳ, ತೊಗರಿ, ಜೋಳ, ಹೆಸರು ಮೊದಲಾದ ಬೆಳೆಗಳು ಸಂಪೂರ್ಣವಾಗಿ ಒಣಗಿಹೋಗಿದ್ದು, ರೈತರು ಬೆಳೆನಷ್ಟ ಅನುಭವಿಸುತ್ತಿದ್ದಾರೆ.

ದುಡಿಯಲು ಕೆಲಸ ಕಾರ್ಯಗಳಿಲ್ಲದ್ದರಿಂದ ರೈತರು ಹಾಗೂ ರೈತ ಕೂಲಿ ಕಾರ್ಮಿಕರು ಗುಳೆಹೋಗುತ್ತಿದ್ದಾರೆ. ತಾಲ್ಲೂಕಿನ ವಿವಿಧ ಗ್ರಾಮಗಳ ಜನರು ಕುಡಿಯಲು ನೀರಿಲ್ಲದೆ ಪರದಾಡುತ್ತಿದ್ದಾರೆ. ಸರ್ಕಾರ ಸಾರ್ವಜನಿಕರಿಗೆ ನಿತ್ಯ ಶುದ್ಧ ಕುಡಿಯುವ ನೀರು ಹಾಗೂ ನಿತ್ಯ ಬಳಕೆಗೆ ಅಗತ್ಯವಿರುವ ನೀರನ್ನು ಪೂರೈಸಬೇಕು. ಜಾನುವಾರುಗಳ ರಕ್ಷಣೆಗೆ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಗೋಶಾಲೆಗಳನ್ನು ತೆರೆಯಬೇಕು. ಆ ಮೂಲಕ ರೈತರ ಹಿತ ಕಾಯಲು ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳ ಅಧಿಕಾರಿಗಳು ತಕ್ಷಣ ಬೆಳೆ ನಷ್ಟ ಸಮೀಕ್ಷೆಯನ್ನು ಕೈಗೊಳ್ಳಬೇಕು. ರೈತರಿಗೆ ತಕ್ಷಣ ಬರಗಾಲ ಹಾಗೂ ಬೆಳೆಹಾನಿ ಪರಿಹಾರವನ್ನು ವಿತರಿಸಬೇಕು. ಬೆಳೆ ವಿಮೆ ತುಂಬಿರುವ ರೈತರ ಖಾತೆಗಳಿಗೆ ಬೆಳೆಹಾನಿ ಪರಿಹಾರವನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು. ಸರ್ಕಾರ ತಕ್ಷಣ ರೈತರ ನೆರವಿಗೆ ಧಾವಿಸಬೇಕು ಎಂದು ಆಗ್ರಹಿಸಿದರು.

ಜೆಡಿಎಸ್ ಮುಖಂಡರಾದ ಗರುರಾಜ ಹುಣಸಿಮರದ, ವೀರಭದ್ರಪ್ಪ ಹಾಲರವಿ, ಎಂ.ವೈ.ಮುಧೋಳ, ಸಿ.ಎಸ್.ಪಾಟೀಲ, ಭಾಷಾಸಾಬ್ ಮುದುಗಲ್ಲ, ಶಂಕರ ಬಾಳಿಕಾಯಿ, ಮಂಜುನಾಥ ದೊಡ್ಡಮನಿ, ರಫಿಕ್ ಹವಾಲ್ದಾರ್, ಮಂಜುಳಾ ಮೇಟಿ, ಶಾರದಾ ಕಾತರಕಿ, ಉಮೇಶ ಹಿರೇಮಠ, ಯಲ್ಲಪ್ಪ ಭಜಂತ್ರಿ, ಶ್ರೀಕಾಂತ ಕಮತರ, ಪ್ರವೀಣ ಬಾಳಿಕಾಯಿ, ಸುಭಾಷಚಂದ್ರ ದಾನರಡ್ಡಿ, ಲಕ್ಷ್ಮಣ ನಾಯಕ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...