ಪ್ರಸ್ತುತ ದಿನಗಳಲ್ಲಿ ಪೌಷ್ಠಿಕ ಅಹಾರವು ಬಹಳ ಪ್ರಾಮುಖ್ಯತೆ ಪಡೆದಿದ್ದು, ಮಕ್ಕಳು, ಕಿಶೋರಿಯರು, ಗರ್ಬಿಣಿಯರು, ತಾಯಂದಿರು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮೇಲ್ವಿಚಾರಕಿ ಜಯಶ್ರೀ ಅಂಗಡಿ ತಿಳಿಸಿದರು.
ಗದಗ ಜಿಲ್ಲೆ ನರಗುಂದದ ಶಿಶು ಅಭಿವೃದ್ದಿ ಯೋಜನೆಯಡಿ ನರಗುಂದ-129ನೇ ಅಂಗನವಾಡಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶಿಶು ಅಭಿವೃದ್ದಿ ಯೋಜನಾಧಿಕಾರಿ ರೂಪಾ ಗಂಧದ ಮಾತನಾಡಿ, “ಪೌಷ್ಠಿಕ ಆಹಾರದ ಜೊತೆ ಜೊತೆಗೆ ಆರೋಗ್ಯ, ವೈಯಕ್ತಿಕ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಪೌಷ್ಠಿಕತೆ ಹೋಗಲಾಡಿಸಲು ಹಲವಾರು ಯೋಜನೆಗಳನ್ನು ಜಾರಿ ಮಾಡಿದ್ದು, ಸದರಿ ಯೋಜನೆಗಳ ಸದುಪಯೋಗಕ್ಕೆ ಮುಂದಾಗಬೇಕು” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಮೈತ್ರಿ ಮುಟ್ಟಿನ ಕಪ್ ಯೋಜನೆ: ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ದಿನೇಶ್ ಗುಂಡೂರಾವ್
ಹಿರಿಯರಾದ ಎಂ ಆರ್ ಕಾಳೆ ಮಾಸಾಚರಣೆ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದರು, ಗಣಪತಿ ಮಾನೆ, ಮಹಾದೇವ ಯಾದವ್, ನಿಂಗಪ್ಪ ಕುಂಬಾರ, ಸಿದ್ದಪ್ಪ ನಾಯ್ಕರ, ಪೂಜಾ ಬೋಸಲೆ, ಆರೋಗ್ಯ ಇಲಾಖೆಯ ಶಾರದಾ ಹುನ್ನೂರ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಗರ್ಭಿಣಿ, ಭಾಣಂತಿ, ಮಕ್ಕಳು ಇದ್ದರು.





