ಗದಗ | ಯುವಜನತೆ ಆರೋಗ್ಯಯುತ ಜೀವನ ನಡೆಸಲು ನಾವೆಲ್ಲರೂ ಶ್ರಮಿಸಬೇಕು: ಸಚಿವ ಎಚ್.ಕೆ ಪಾಟೀಲ್

Date:

ಇಂದಿನ ಯುವಜನತೆಯಲ್ಲಿನ ಮಾದಕ ವ್ಯಸನ ಮುಕ್ತ ಗೊಳಿಸುವ ಮೂಲಕ ಆರೋಗ್ಯಯುತ ಜೀವನ ನಡೆಸಲು ನಾವೆಲ್ಲರೂ ಶ್ರಮಿಸೋಣ ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ.ಪಾಟೀಲ ಅವರು ಹೇಳಿದರು.

ಗದಗ ನಗರದ ಜಿಲ್ಲಾ ಪೊಲೀಸ್ ಇಲಾಖೆ ಆಯೋಜಿಸಿದ್ದ ‘ಥರ್ಡ್‌ ಐ ಹಾಗೂ ಮಾದಕ ವ್ಯಸನ ಮುಕ್ತ ಗದಗ ಜಿಲ್ಲೆ ಜಾಗೃತಿ ಅಭಿಯಾನ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ನಾವೆಲ್ಲರೂ ಇಂದು ನಗರದ ಗಾಂಧೀ ವೃತ್ತದಿಂದ ಕಾಲ್ನಡಿಗೆ ಮೂಲಕ ಹುಮ್ಮಸ್ಸಿನಿಂದ ನಡೆದು ಬಂದದ್ದೇ ಮಾದಕ ವ್ಯಸನ ಮುಕ್ತ ಜಿಲ್ಲೆಯಾಗಿಸಲು ಸ್ಪೂರ್ತಿ ನೀಡಿದೆ. ಬಿರುಬಿಸಿಲಲ್ಲದೇ ಶಾಲಾ ಮಕ್ಕಳು ವಿವಿಧ ಸಂಘಟನೆಗಳು ಸ್ವಯಂ ಪ್ರೇರಿತರಾಗಿ ಜಾಥಾದಲ್ಲಿ ಪಾಲ್ಗೊಳ್ಳುವ ಮೂಲಕ ವ್ಯಸನ ಮುಕ್ತ ಗದಗ ಜಿಲ್ಲೆಗೆ ಮುಂದಾಗಿರುವುದು ಸಂತೋಷ ತಂದಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯುವಜನತೆ ಮಾದಕ ವ್ಯಸನಕ್ಕೆ ಅಂಟಿಕೊಳ್ಳದೇ ದೈನಂದಿನ ಜೀವನದಲ್ಲಿ ಕ್ರೀಡಾ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ದೈಹಿಕ ಸದೃಢತೆಗೆ ಮುಂದಾಗಬೇಕು. ಆ ಮೂಲಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಶಪಥ ಮಾಡಬೇಕು. ಆರೋಗ್ಯಯುತ ಜೀವನ ನಮ್ಮದಾಗಬೇಕಾದರೆ ಮಾದಕ ದ್ರವ್ಯಗಳಿಂದ ಅಂತರ ಕಾಯ್ದುಕೊಳ್ಳಬೇಕು. ಸದಾ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಸದೃಢ ಜೀವನ ನಮ್ಮದಾಗಿಸಿಕೊಳ್ಳಬೇಕು” ಎಂದರು.

“ಕಾನೂನು ಸುವ್ಯವಸ್ಥೆ ಹಾಗೂ ಅಪರಾಧಗಳ ನಿಯಂತ್ರಣಕ್ಕಾಗಿ , ಸಂಚಾರಿ ನಿಯಮಗಳ ಪಾಲನೆ ಸರಿಯಾದ ನಿಟ್ಟಿನಲ್ಲಿ ಸಾಗಬೇಕೆಂಬ ಮಹತ್ವಾಕಾಂಕ್ಷಿಯೊಂದಿಗೆ ಗದಗ ನಗರದಲ್ಲಿ ಥರ್ಡ ಐ ಕಮಾಂಡ ಸೆಂಟರ್ ನ್ನು ಪೊಲೀಸ ವರಿಷ್ಟಾಧಿಕಾರಿಗಳ ಕಚೇರಿಯಲ್ಲಿ ಆರಂಭಿಸಲಾಗಿದೆ. ಗದಗ ನಗರಕ್ಕೆ ಪ್ರವೇಶಿಸುವ ಪ್ರತಿ ಮಾರ್ಗದಲ್ಲೂ ಅತ್ಯಾಧುನಿಕ ತಂತ್ರಜ್ಞಾನದ ಸಿ.ಸಿ.ಟಿ.ವಿ. ಅಳವಡಿಸಿದೆ. ಅಲ್ಲದೇ ನಗರದ ಪ್ರಮುಖ ವೃತ್ತಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಿ.ಸಿ.ಟಿ.ವಿ. ಅಳವಡಿಸುವ ಮೂಲಕ ಸಂಚಾರಿ ನಿಯಮಗಳ ಪಾಲನೆಗೆ ಒತ್ತು ನೀಡಲಾಗಿದೆ. ಇದರಿಂದಾಗಿ ಸಂಚಾರಿ ನಿಯಮಗಳ ಪಾಲನೆಗೆಳ ಜೊತೆ ಜೊತೆಗೆ ಅಪರಾಧ, ಕಳುವು, ಅನೈತಿಕ ಚಟುವಟಿಕೆಗಳ ನಿಯಂತ್ರಣ ಸಾಧ್ಯವಾಗಲಿದೆ. ಮುಂದಿನ ದಿನಗಳಲ್ಲಿ ಪ್ರತಿಯೊಬ್ಬ ಸಾರ್ವಜನಿಕರು ಸಂಚಾರಿ ನಿಯಮಗಳನ್ನು ತಪ್ಪದೇ ಪಾಲಿಸಬೇಕು. ಆ ಮೂಲಕ ಆಗುವ ರಸ್ತೆ ಅಪಘಾತಗಳಿಂದ ಜೀವ ಹಾನಿ ತಡೆಗಟ್ಟಬೇಕು” ಎಂದು ತಿಳಿಸಿದರು.

ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್ ನೇಮಗೌಡ ಮಾತನಾಡಿ, “ಥರ್ಡ್‌ ಐ ಕಮಾಂಡ್ ಸೆಂಟರ್ ಪರಿಕಲ್ಪನೆಯನ್ನು ಸಚಿವ ಎಚ್.ಕೆ ಪಾಟೀಲ್ ಅವರ ಮಾರ್ಗದರ್ಶನದಂತೆ ಅನುಷ್ಟಾನಗೊಳಿಸಲಾಗುತ್ತದೆ. ಜೊತೆಗೆ ಗೃಹ ಸಚಿವರು ಗದಗ ಜಿಲ್ಲೆಗೆ ಭೇಟಿ ನೀಡಿದಾಗ ಗದಗ ಜಿಲ್ಲೆಯನ್ನು ಮಾದಕ ವ್ಯಸನ ಮುಕ್ತ ಜಿಲ್ಲೆಯಾಗಿಸಲು ಒಪ್ಪಿಗೆ ನೀಡಿದ್ದು, ಅದರಂತೆ ಸಾರ್ವಜನಿಕರೆಲ್ಲರೂ ಗದಗ ಜಿಲ್ಲೆ ಮಾದಕ ವ್ಯಸನ ಮುಕ್ತ ಜಿಲ್ಲೆಯಾಗಿಸಲು ಪೊಲೀಸ ಇಲಾಖೆಯೊಂದಿಗೆ ಕೈ ಜೋಡಿಸಬೇಕು” ಎಂದು ಕೋರಿದರು.

ವೇದಿಕೆಯಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಗಣ್ಯರಾದ ಸಿದ್ದು ಪಾಟೀಲ, ಪ್ರಭು ಬುರಬುರೆ, ಲಡ್ಡು ಮುತ್ಯಾ, ಮಾಜಿ ಸೈನಿಕರ ಸಂಘದ ಅಧ್ಯಕ್ಷರಾದ ಬಸವಲಿಂಗಪ್ಪ ಮುಂಡರಗಿ, ದಸರಾ ಕ್ರೀಡಾಕೂಟದಲ್ಲಿ ಪದಕ ಪಡೆದ ಕ್ರೀಡಾ ಪಟು ಸಮನ್ವಿತಾ ಮಠದಾಪುರ ಉಪಸ್ಥಿತರಿದ್ದರು.

ಡಿ.ಎಸ್.ಪಿ. ಪ್ರಭುಗೌಡ ಸರ್ವರನ್ನು ಸ್ವಾಗತಿಸಿದರು. ಬಾಹುಬಲಿ ಜೈನರ ಕಾರ್ಯಕ್ರಮ ನಿರ್ವಹಿಸಿದರು. ಇದೇ ಸಂದರ್ಬದಲ್ಲಿ ಮೈಸೂರಿನಲ್ಲಿ ನಡೆದ ದಸರಾ ಕ್ರೀಡಾ ಕೂಟದಲ್ಲಿ ಸಾಧನೆಗೈದ ಕ್ರೀಡಾಪಟುಗಳನ್ನು ಸಚಿವರು ಗೌರವಿಸಿದರು. ನಟರಂಗ ಕಲಾ ಸಂಸ್ಥೆಯಿಂದ ವ್ಯಸನ ಮುಕ್ತ ಸಮಾಜ ನಾಟಕ ಪ್ರಸ್ತುತಪಡಿಸಲಾಯಿತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...