ಗದಗ | ಎಂ.ಡಿ ಗೋಗೇರಿ ಅವರ ಬದುಕು-ಬರಹ ವಿಶೇಷ ಉಪನ್ಯಾಸ ಕಾರ್ಯಕ್ರಮ

Date:

ಮಕ್ಕಳ ಸಾಹಿತ್ಯ, ಹಾಸ್ಯ, ವಿಡಂಬನೆ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಕವಿ ಎಂ.ಡಿ ಗೋಗೇರಿ ಅವರು ಮುಸ್ಲಿಂ ದೇಹ – ಕನ್ನಡ ಮನಸ್ಸು ಹೊಂದಿದವರಾಗಿದ್ದರು ಎಂದು ಪ್ರಾಧ್ಯಾಪಕ ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಹೇಳಿದರು.

ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಗೋಗೇರಿ ಗಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕಸಾಪ ಆಯೋಜಿಸಿದ್ದ ಎಂ.ಡಿ ಗೋಗೇರಿ ಅವರ ಬದುಕು-ಬರಹ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಶಿಕ್ಷಣ ಕ್ಷೇತ್ರದಲ್ಲಿ ಹಗಲಿರುಳು ಕೆಲಸ ಮಾಡುತ್ತಾ ಕನ್ನಡ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಕೃಷಿ ಮಾಡಿದ ಗೋಗೇರಿ ಅವರು ಇಂದಿನ ಪೀಳಿಗೆಯವರಿಗೆ ಮಾದರಿಯಾಗಿದ್ದಾರೆ. ಕನ್ನಡ ಭಾಷಾ ಸಂಸ್ಕೃತಿಯ ಜೊತೆಗೆ ಸೌಹಾರ್ದ ಸಂಸ್ಕೃತಿಗೂ ಆದ್ಯತೆ ನೀಡಿದ್ದರು. ಇಂದಿಗೂ ಮಕ್ಕಳ ಸಾಹಿತ್ಯದ ರತ್ನತ್ರಯರ ಸಾಲಿನಲ್ಲಿ ಗೋಗೇರಿ ಅವರು ಇರುವುದು ಕನ್ನಡ ಸಾಹಿತ್ಯಕ್ಕೆ ಹೆಮ್ಮೆಯ ಗರಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಮಾತನಾಡಿದ ಗದಗ ಜಿಲ್ಲಾ ಕಸಾಪ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ, “ಗದಗ ಜಿಲ್ಲೆಯ ಸಮನ್ವಯ ಕವಿ ಎಂ.ಡಿ ಗೋಗೇರಿ ಅವರ ಎಲ್ಲ ಕೃತಿಗಳನ್ನು ಮರು ಮುದ್ರಣ ಮಾಡಿ ಮಕ್ಕಳಿಗೆ ಓದುವ ಸದಾವಕಾಶ ಮಾಡಬೇಕು. ಅವರ ಕೃತಿಗಳು ಎಲ್ಲ ಕಾಲಕ್ಕೂ ಪ್ರಸ್ತುತವಾಗಿವೆ. ಅವರ ಹೆಸರಿನಲ್ಲಿ ದತ್ತಿ ನಿಧಿ ಸ್ಥಾಪಿಸಿ ಮಕ್ಕಳ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ ಜಿಲ್ಲೆಯ ಸಾಹಿತಿಗಳನ್ನು ಗುರುತುಸಿ ಪ್ರಶಸ್ತಿ ನೀಡುವ ಕೆಲಸವಾಗಬೇಕು” ಎಂದರು.

ಕಾರ್ಯಕ್ರಮದಲ್ಲಿ ಕಸಾಪ ತಾಲೂಕು ಅಧ್ಯಕ್ಷ ಅಮರೇಶ ಗಾಣಗೇರ, ಕವಿ ರಂಜಾನ ಹೆಬಸೂರ, ಗ್ರಾಮದ ಹಿರಿಯರಾದ ಬಸವರಾಜ ಮೂಲಿಮನಿ, ಹೇಮಾಪತಿ ಭೋಸಲೆ, ಕೆ ಎಂ ಅಡವಿ ಕೆ ಎಸ್ ಕೋಡತಗೇರಿ
ಮಲ್ಲಿಕಾರ್ಜುನ ಗಾರಗಿ, ಶಿಕ್ಷಕ ಆರ್ ಕೆ ಬಾಗವಾನ ಇದ್ದರು. ಸಮಾರರಂಭದಲ್ಲಿ ಮುಖ್ಯೋಪಾಧ್ಯರಾದ ಕೆ ಎಸ್ ರಾಜೂರ, ಆರ್ ಆಯ್ ಬಾಗವಾನ, ಕ.ಸಾ.ಪ ಸದಸ್ಯರಾದ ಗಂಗಪ್ಪ ಗುಂಡೆ, ಎಂ ಡಿ ಬಾಗವಾನ, ಕೆ ಕೆ ಬಾಗವಾನ ಬಸವರಾಜ ಮಾದರ ವಜೀರ ನಧಾಪ್ ಇದ್ದರು. ಶಿಕ್ಷಕರಾದ ಪರಶು ಹೋರಪೇಟಿ ನಿರೂಪಿಸಿದು, ಬಿ ಎಸ್ ಬಳಿಗೇರ ವಂದಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...