ಗದಗ | ಗ್ರಾಮೀಣ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ಮನರೇಗಾ ಯೋಜನೆ ಸಹಕಾರಿ: ಸಹಾಯಕ ನಿರ್ದೇಶಕ

Date:

ಗ್ರಾಮೀಣ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ಮನರೇಗಾ ಯೋಜನೆ ಸಹಕಾರಿಯಾಗಿದೆ. ಹಾಗಾಗಿ ಎಲ್ಲ ಬಡವರ ಏಳಿಗೆಗಾಗಿ ಮನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕು ಎಂದು ರೋಣ ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕ ರಿಯಾಜ್ ಖತೀಬ್ ಹೇಳಿದ್ದಾರೆ.

ಗದಗ ಜಿಲ್ಲೆಯ ರೋಣ ತಾಲೂಕು ಪಂಚಾಯತಿ ಕಚೇರಿಯಲ್ಲಿ ನಡೆದ ಮನರೇಗಾ ಕ್ರಿಯಾ ಯೋಜನೆ ತಯಾರಿಕಾ ಕಾರ್ಯಗಾರದಲ್ಲಿ ಅವರು ಮಾತನಾಡಿದರು. “ಮನರೇಗಾ ಯೋಜನೆ ಗ್ರಾಮೀಣ ಪ್ರದೇಶದ ಜನರಿಗೆ ಒಂದು ವರದಾನ. ಗ್ರಾಮೀಣ ಪ್ರದೇಶದ ಕೂಲಿಕಾರರು ಕೆಲಸಕ್ಕಾಗಿ ಅಲೆದಾಡದೇ ತಮ್ಮ ಸ್ವಂತ ಗ್ರಾಮದಲ್ಲಿಯೇ ಬೇಡಿಕೆಯ ಪ್ರಕಾರ 100 ದಿನಗಳ ಖಾತ್ರಿ ಕೆಲಸವನ್ನು ಪಡೆಯಲು ಸಾಧ್ಯವಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿರಿಯ ನಾಗರಿಕರು, ವಿಧವೆಯರು, ವಿಶೇಷ ಚೇತನರಿಗೆ ಮನರೇಗಾ ಯೋಜನೆಯಡಿ ದುಡಿಯಲು ಹೆಚ್ಚಿನ ಆಧ್ಯತೆ ನೀಡಲಾಗುತ್ತದೆ” ಎಂದರು.

“ಈ ವರ್ಷದ ಕ್ರಿಯಾ ಯೋಜನೆಯಲ್ಲಿ ತಾಲೂಕಿನಲ್ಲಿ ಒಂದು ಲಕ್ಷಕ್ಕೂ ಅಧಿಕ ಗಿಡಗಳನ್ನು ನೆಡುವುದು ನಮ್ಮ ಗುರಿಯಾಗಿದೆ. ನಿಸರ್ಗದಿಂದ ನಾವು ತೆಗೆದುಕೊಳ್ಳುವುದು ಮಾತ್ರ ಮಾಡುತಿದ್ದೇವೆ, ಮರಳಿ ಕೊಡತ್ತಿಲ್ಲ. ಗಿಡಗಳನ್ನು ನೆಟ್ಟು ಹಸಿರುಕರಣಕ್ಕೆ ಶ್ರಮಿಸೋಣ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೈಸರ್ಗಿಕ ಸಂಪನ್ಮೂಲ ಅಭಿವೃದ್ಧಿ ಪಡಿಸುವ ಕಾಮಗಾರಿಗಳಾದ ನಾಲಾ ಸುಧಾರಣೆ, ಕೆರೆ ಹೂಳೆತ್ತುವುದು, ಬದು ನಿರ್ಮಾಣ ಕೃಷಿ ಹೊಂಡ, ಮಳೆ ನೀರು ಕೊಯ್ಲು, ಅರಣ್ಯೀಕರಣ ಕಾಮಗಾರಿಗಳನ್ನು 65% ವರೆಗೆ ತೆಗೆದುಕೊಳ್ಳಲು ಅವಕಾಶ, ಉಳಿದ 35% ನಲ್ಲಿ ಶಾಲಾ ಅಭಿವೃದ್ಧಿ ಕಾಮಗಾರಿಳಾದ ಕಂಪೌಂಡ್, ಅಡುಗೆ ಕೋಣೆ, ಆಟದ ಮೈದಾನ, ಮಳೆ ನೀರು ಕೊಯ್ಲು, ಭೋಜನಾಲಯ, ಶೌಚಾಲಯ ಸೇರಿದಂತೆ ಶಾಲಾ ಅಭಿವೃದ್ಧಿ ಪಡಿಸುವ ಸಮಗ್ರ ಕಾಮಗಾರಿಗಳನ್ನು ಮಾಡಬೇಕು” ಸೂಚನೆ ನೀಡಿದರು.

ಕಾರ್ಯಾಗಾರದಲ್ಲಿ ಹಲವು ಅಧಿಕಾರಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...