ಸಂವಿಧಾನದ 73ನೇ ತಿದ್ದುಪಡಿಯಿಂದ ಪಂ. ರಾಜ್ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ: ಸಚಿವ ಎಚ್.ಕೆ ಪಾಟೀಲ್

Date:

ಸಂವಿಧಾನಕ್ಕೆ 73ನೇ ತಿದ್ದುಪಡಿ ತಂದ ನಂತರ ಮೂವತ್ತು ವರ್ಷಗಳ ಅವಧಿಯನ್ನು ಅವಲೋಕನ ಮಾಡುವುದು ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದು ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಡಾ. ಎಚ್.ಕೆ ಪಾಟೀಲ್ ಹೇಳಿದ್ದಾರೆ.

ಗದಗದಲ್ಲಿ ನಡೆಯುತ್ತಿರುವ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ ಪರಿಕಲ್ಪನೆಯನ್ನು ಸಾಕಾರಗೊಳಿಸಲು ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿನ ಬದಲಾವಣೆಗಾಗಿ ಭಾರತೀಯ ಸಂವಿಧಾನಕ್ಕೆ 73ನೇ ತಿದ್ದುಪಡಿ ತರಲಾಗಿತ್ತು. ತಿದ್ದುಪಡಿಗಾಗಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಅವಿರತ ಪ್ರಯತ್ನ ಪಟ್ಟಿದ್ದರು. ನಂತರ, ಪ್ರಧಾನಿ ನರಸಿಂಹರಾವ್ ಅವರ ಅವಧಿಯಲ್ಲಿ 73ನೇ ತಿದ್ದುಪಡಿ ತಂದರು. ಇದರಿಂದ ಗ್ರಾಮೀಣ ಪಂಚಾಯತ ರಾಜ್ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಾಲವಣೆಯನ್ನು ಇಂದು ನಾವೆಲ್ಲ ಕಾಣುತ್ತಿದ್ದೇವೆ” ಎಂದು ವಿವರಿಸಿದರು.

“ರಾಜಕೀಯ ಪಕ್ಷಗಳು ಪಂಚಾಯತಿಗಳಿಗೆ ನೀಡಿದ ಕೊಡುಗೆಯನ್ನು ಮೆಲಕು ಹಾಕಬೇಕಾಗಿದೆ. ರಾಷ್ಟ್ರಕ್ಕೆ ಹೋಲಿಸಿದರೆ ರಾಜ್ಯದಲ್ಲಿನ ಪಂಚಾಯತಿಗಳು ಉತ್ತಮ ಸ್ಥಿತಿಯಲ್ಲಿವೆ. ಪರಿಶಿಷ್ಟರನ್ನು, ಹಿಂದುಳಿದ, ಬಡವರ ಹಾಗೂ ಮಹಿಳೆಯರನ್ನು ಪಂಚಾಯತಿ ಅಧ್ಯಕ್ಷರನ್ನಾಗಿಸಲಾಗಿದೆ. ಆದರೆ, ಶತಮಾನಗಳ ಹಿಂದೆ ಈ ಪರಿಸ್ಥಿತಿ ಇರಲಿಲ್ಲ. ಮಹಿಳೆಗೆ ರಾಜಕೀಯ, ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ನೀಡುವಂತೆ ಬಸವಣ್ಣನವರು ಹೇಳಿದ್ದರೂ ಕೂಡ ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಗೆ ಯಾವುದೇ ಸ್ಥಾನಮಾನ ನೀಡಿರಲಿಲ್ಲ. ಆದರೆ, 73ನೇ ತಿದ್ದುಪಡಿಯ ಮೂಲಕ ಮಹಿಳೆಯರಿಗೆ ಎಲ್ಲ ಸ್ಥಾನಮಾನಗಳನ್ನು ನೀಡಲಾಯಿತು. ಈ ತಿದ್ದುಪಡಿ ಕಾನೂನು ಅನುಷ್ಠಾನದಲ್ಲಿ ರಾಜ್ಯವು ಮುಂಚೂಣಿಯಲ್ಲಿತ್ತು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಂಚಾಯತ್ ವ್ಯವಸ್ಥೆಯಲ್ಲಿನ ಜನ ಪ್ರತಿನಿಧಿಗಳು ಪ್ರಾಮಾಣಿಕ ಹಾಗೂ ಪಾರದರ್ಶಕವಾಗಿರಬೇಕು. ಗಾಂಧೀ ಕಾಯಕ ಸಾಕ್ಷಿ ತಂತ್ರಜ್ಞಾನದ ಸದ್ಬಳಕೆ ಹಾಗೂ ಗ್ರಾಮ ಪಂಚಾಯತಿಗಳಲ್ಲಿ ಆರ್ಥಿಕ ಸಂಪನ್ಮೂಲ ಕ್ರೋಢೀಕರಣ ಮಾಡುವ ಅಧಿಕಾರದ ಸದ್ಬಳಕೆ ಆಗಬೇಕು. ಗದಗ ಜಿಲ್ಲೆಯು ಗ್ರಾಮ ಪಂಚಾಯತಿ ಹಂತದಲ್ಲಿ ತಳಮಟ್ಟದಿಂದ ಮೆಲ್ಮಟ್ಟಕ್ಕೆ ಯೋಜನೆ ರೂಪಿಸಿವದರಲ್ಲಿ ಮುಂಚೂಣಿಯಲ್ಲಿದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಬಳ್ಳಾರಿ | ಐದು ಮಂದಿ ಅಲ್ಲ, ಕ್ಷೇತ್ರದ ಪ್ರತಿಯೊಬ್ಬರೂ ಶಾಸಕರೇ; ಕೆಆರ್‌ಪಿಪಿಗೆ ಕಾಂಗ್ರೆಸ್ ಮುಖಂಡ ತಿರುಗೇಟು

“ಗ್ರಾಮಗಳು ವ್ಯಾಜ್ಯ ಮುಕ್ತ, ತ್ಯಾಜ್ಯ ಮುಕ್ತ, ಶೋಷಣೆ ಮುಕ್ತ, ಭಯ ಮುಕ್ತ, ಬಯಲು ಬಹಿರ್ದೆಸೆ ಮುಕ್ತ ಗ್ರಾಮಗಳನ್ನಾಗಿಸುವ ಕಾನೂನುಗಳನ್ನು ನೀಡಲಾಗಿದೆ. ವಿಶ್ವವಿದ್ಯಾಲಯದ ಪ್ರತಿ ಐದು ವಿಧ್ಯಾರ್ಥಿಗಳಿಗೆ ಒಂದೊಂದು ಗ್ರಾಮಗಳನ್ನು ನೀಡಿ ಗ್ರಾಮಗಳನ್ನು ವ್ಯಾಜ್ಯ, ತ್ಯಾಜ್ಯ, ಶೋಷಣೆ, ಬಯಲು ಬಹಿರ್ದೆಸೆ ಮುಕ್ತ ಗ್ರಾಮಗಳನ್ನಾಗಿಸಲು ಪಣತೊಡಬೇಕು” ಎಂದರು.

ಕಾರ್ಯಕ್ರಮದಲ್ಲಿ ಭಾರತೀಯ ಸಾರ್ವಜನಿಕ ಸಂಸ್ಥೆಯ ಅಧ್ಯಕ್ಷರು ಹಾಗೂ ರಾಜ್ಯ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಪಂಚಾಯತ್ ರಾಜ್ ಕಮಿಷನರೇಟ ನಿರ್ದೆಶಕಾರದ ಏಕಾಂತಪ್ಪ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಡಾ. ಎಸ್.ಎಸ್ ಮಿನಾಕ್ಷಿ ಸುಂದರಂ ಸೇರಿದಂತೆ ಹಲವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...